Homeಮುಖಪುಟಶೇ.74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರು: ಎಫ್ಎಒ ವರದಿ

ಶೇ.74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರು: ಎಫ್ಎಒ ವರದಿ

- Advertisement -
- Advertisement -

2021ರಲ್ಲಿ ಶೇ. 74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರಾಗಿದ್ದರು ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ) ಮಂಗಳವಾರ ಪ್ರಕಟಿಸಿದ ವರದಿಯಲ್ಲಿ ತಿಳಿಸಿದೆ.

ಆಹಾರ ಭದ್ರತೆ ಮತ್ತು ಪೋಷಣೆಯ 2023ರ ಪ್ರಾದೇಶಿಕ ಅವಲೋಕನದ ಪ್ರಕಾರ, 2020ರಲ್ಲಿ ಶೇ. 76.2ರಷ್ಟು ಭಾರತೀಯರು ಆರೋಗ್ಯಕರ ಆಹಾರವನ್ನು ಪಡೆಯಲು ಸಾಧ್ಯವಾಗಿರಲಿಲ್ಲ. 2021ರಲ್ಲಿ ಈ ಸಂಖ್ಯೆ ಸ್ವಲ್ಪ ಸುಧಾರಣೆ ಕಂಡಿದೆ.

ವಿಶ್ವಸಂಸ್ಥೆಯ ಪ್ರಕಾರ ವಯಸ್ಕರ ಆರೋಗ್ಯಕರ ಆಹಾರವೆಂದರೆ ದಿನಕ್ಕೆ ಕನಿಷ್ಠ 400 ಗ್ರಾಂ. ಹಣ್ಣು, ತರಕಾರಿಗಳು, ಬೀಜಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಆಹಾರವಾಗಿದೆ.

ದಕ್ಷಿಣ ಏಷ್ಯಾದ ಇತರ ಭಾಗಗಳನ್ನು ಗಮನಿಸಿದರೆ ಶೇ.82.8 ಪಾಕಿಸ್ತಾನಿ ನಾಗರಿಕರು 2021ರಲ್ಲಿ ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗಿಲ್ಲ ಎಂದು ಜಾಗತಿಕ ಆಹಾರ ಭದ್ರತಾ ಏಜೆನ್ಸಿಯ ವರದಿಯು ತೋರಿಸಿದೆ. ಇದು ಏಷ್ಯಾ-ಪೆಸಿಫಿಕ್ ವಲಯದ ರಾಷ್ಟ್ರಗಳ ಪೈಕಿ ಅತೀ ಹೆಚ್ಚಿನ ದರವಾಗಿದೆ.

ನೆರೆಯ ಬಾಂಗ್ಲಾದೇಶದಲ್ಲಿ ಶೇ. 66.1 ಮತ್ತು ನೇಪಾಳದಲ್ಲಿ ಶೇ. 76.4 ಮತ್ತು ಮಾಲ್ಡೀವ್ಸ್‌ನಲ್ಲಿ ಶೇ. 1.2ರಷ್ಟು ನಾಗರಿಕರು ಮಾತ್ರ 2021ರಲ್ಲಿ ಆರೋಗ್ಯಕರ ಆಹಾರ ಪಡೆದಿಲ್ಲ ಎಂದು ಎಫ್ಎಒ ವರದಿ ತಿಳಿಸಿದೆ.

ಆಹಾರದ ವೆಚ್ಚವನ್ನು ಆದಾಯದ ಹೆಚ್ಚಳದೊಂದಿಗೆ ಹೊಂದಿಸದಿದ್ದರೆ, ಹೆಚ್ಚಿನ ಜನರು ಆರೋಗ್ಯಕರ ಆಹಾರ ಪಡೆಯಲು ವಿಫಲರಾಗುತ್ತಾರೆ. ಅದೇ ಸಮಯದಲ್ಲಿ ಆದಾಯ ಕುಸಿದಂತೆ ಆಹಾರದ ವೆಚ್ಚ ಏರಿಕೆಯಾದರೆ ಒಂದು ಸಂಯುಕ್ತ ಪರಿಣಾಮ ಸಂಭವಿಸುತ್ತದೆ. ಇದು ಇನ್ನಷ್ಟು ಜನರು ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗದಂತೆ ಮಾಡುತ್ತದೆ ಎಂದು ಎಫ್ಎಒ ಎಚ್ಚರಿಸಿದೆ.

2020 ಮತ್ತು 2021 ರ ನಡುವೆ ಪೂರ್ವ ಏಷ್ಯಾ ಮತ್ತು ದಕ್ಷಿಣ ಏಷ್ಯಾದ ಒಟ್ಟಾರೆ ಪರಿಸ್ಥಿತಿಗಳು ಸುಧಾರಿಸಿದೆ. ಕೋವಿಡ್ ಸಮಯದಲ್ಲಿ ಸಮಸ್ಯೆ ಹೆಚ್ಚಾಗಿದೆ ಎಂದು ಎಫ್ಎಒ ತಿಳಿಸಿದೆ.

ಕೋವಿಡ್ ಸಮಯದಲ್ಲಿ ಏಕಾಏಕಿ ಉಂಟಾದ ಕೆಲಸದ ಕೊರತೆ, ಆಹಾರ ವ್ಯವಸ್ಥೆ ಮತ್ತು ಮಾರುಕಟ್ಟೆಗಳ ಸಮಸ್ಯೆ ಬಡ ಕುಟುಂಬಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಿತ್ತು. ಇದರಿಂದ ಹೆಚ್ಚಿನ ಜನರು ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗಿಲ್ಲ ಎಂದು ಎಫ್ಎಒ ಹೇಳಿದೆ.

ಇದನ್ನೂ ಓದಿ : ಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is healthy food? Who decides this? What are the parameters for this?
    Someone sitting in USA or Europe can’t or shouldn’t decide what is good for Bharat.
    Living conditions, work conditions, weather are totally different in Bharat.
    Also majority of people in Bharat are vegetarian.
    Hence the report is not more than fit for dustbin.
    .

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...