Homeಮುಖಪುಟಶೇ.74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರು: ಎಫ್ಎಒ ವರದಿ

ಶೇ.74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರು: ಎಫ್ಎಒ ವರದಿ

- Advertisement -
- Advertisement -

2021ರಲ್ಲಿ ಶೇ. 74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರಾಗಿದ್ದರು ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ) ಮಂಗಳವಾರ ಪ್ರಕಟಿಸಿದ ವರದಿಯಲ್ಲಿ ತಿಳಿಸಿದೆ.

ಆಹಾರ ಭದ್ರತೆ ಮತ್ತು ಪೋಷಣೆಯ 2023ರ ಪ್ರಾದೇಶಿಕ ಅವಲೋಕನದ ಪ್ರಕಾರ, 2020ರಲ್ಲಿ ಶೇ. 76.2ರಷ್ಟು ಭಾರತೀಯರು ಆರೋಗ್ಯಕರ ಆಹಾರವನ್ನು ಪಡೆಯಲು ಸಾಧ್ಯವಾಗಿರಲಿಲ್ಲ. 2021ರಲ್ಲಿ ಈ ಸಂಖ್ಯೆ ಸ್ವಲ್ಪ ಸುಧಾರಣೆ ಕಂಡಿದೆ.

ವಿಶ್ವಸಂಸ್ಥೆಯ ಪ್ರಕಾರ ವಯಸ್ಕರ ಆರೋಗ್ಯಕರ ಆಹಾರವೆಂದರೆ ದಿನಕ್ಕೆ ಕನಿಷ್ಠ 400 ಗ್ರಾಂ. ಹಣ್ಣು, ತರಕಾರಿಗಳು, ಬೀಜಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಆಹಾರವಾಗಿದೆ.

ದಕ್ಷಿಣ ಏಷ್ಯಾದ ಇತರ ಭಾಗಗಳನ್ನು ಗಮನಿಸಿದರೆ ಶೇ.82.8 ಪಾಕಿಸ್ತಾನಿ ನಾಗರಿಕರು 2021ರಲ್ಲಿ ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗಿಲ್ಲ ಎಂದು ಜಾಗತಿಕ ಆಹಾರ ಭದ್ರತಾ ಏಜೆನ್ಸಿಯ ವರದಿಯು ತೋರಿಸಿದೆ. ಇದು ಏಷ್ಯಾ-ಪೆಸಿಫಿಕ್ ವಲಯದ ರಾಷ್ಟ್ರಗಳ ಪೈಕಿ ಅತೀ ಹೆಚ್ಚಿನ ದರವಾಗಿದೆ.

ನೆರೆಯ ಬಾಂಗ್ಲಾದೇಶದಲ್ಲಿ ಶೇ. 66.1 ಮತ್ತು ನೇಪಾಳದಲ್ಲಿ ಶೇ. 76.4 ಮತ್ತು ಮಾಲ್ಡೀವ್ಸ್‌ನಲ್ಲಿ ಶೇ. 1.2ರಷ್ಟು ನಾಗರಿಕರು ಮಾತ್ರ 2021ರಲ್ಲಿ ಆರೋಗ್ಯಕರ ಆಹಾರ ಪಡೆದಿಲ್ಲ ಎಂದು ಎಫ್ಎಒ ವರದಿ ತಿಳಿಸಿದೆ.

ಆಹಾರದ ವೆಚ್ಚವನ್ನು ಆದಾಯದ ಹೆಚ್ಚಳದೊಂದಿಗೆ ಹೊಂದಿಸದಿದ್ದರೆ, ಹೆಚ್ಚಿನ ಜನರು ಆರೋಗ್ಯಕರ ಆಹಾರ ಪಡೆಯಲು ವಿಫಲರಾಗುತ್ತಾರೆ. ಅದೇ ಸಮಯದಲ್ಲಿ ಆದಾಯ ಕುಸಿದಂತೆ ಆಹಾರದ ವೆಚ್ಚ ಏರಿಕೆಯಾದರೆ ಒಂದು ಸಂಯುಕ್ತ ಪರಿಣಾಮ ಸಂಭವಿಸುತ್ತದೆ. ಇದು ಇನ್ನಷ್ಟು ಜನರು ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗದಂತೆ ಮಾಡುತ್ತದೆ ಎಂದು ಎಫ್ಎಒ ಎಚ್ಚರಿಸಿದೆ.

2020 ಮತ್ತು 2021 ರ ನಡುವೆ ಪೂರ್ವ ಏಷ್ಯಾ ಮತ್ತು ದಕ್ಷಿಣ ಏಷ್ಯಾದ ಒಟ್ಟಾರೆ ಪರಿಸ್ಥಿತಿಗಳು ಸುಧಾರಿಸಿದೆ. ಕೋವಿಡ್ ಸಮಯದಲ್ಲಿ ಸಮಸ್ಯೆ ಹೆಚ್ಚಾಗಿದೆ ಎಂದು ಎಫ್ಎಒ ತಿಳಿಸಿದೆ.

ಕೋವಿಡ್ ಸಮಯದಲ್ಲಿ ಏಕಾಏಕಿ ಉಂಟಾದ ಕೆಲಸದ ಕೊರತೆ, ಆಹಾರ ವ್ಯವಸ್ಥೆ ಮತ್ತು ಮಾರುಕಟ್ಟೆಗಳ ಸಮಸ್ಯೆ ಬಡ ಕುಟುಂಬಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಿತ್ತು. ಇದರಿಂದ ಹೆಚ್ಚಿನ ಜನರು ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗಿಲ್ಲ ಎಂದು ಎಫ್ಎಒ ಹೇಳಿದೆ.

ಇದನ್ನೂ ಓದಿ : ಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is healthy food? Who decides this? What are the parameters for this?
    Someone sitting in USA or Europe can’t or shouldn’t decide what is good for Bharat.
    Living conditions, work conditions, weather are totally different in Bharat.
    Also majority of people in Bharat are vegetarian.
    Hence the report is not more than fit for dustbin.
    .

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...