Homeಮುಖಪುಟಶೇ.74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರು: ಎಫ್ಎಒ ವರದಿ

ಶೇ.74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರು: ಎಫ್ಎಒ ವರದಿ

- Advertisement -
- Advertisement -

2021ರಲ್ಲಿ ಶೇ. 74.1 ಭಾರತೀಯರು ಆರೋಗ್ಯಕರ ಆಹಾರ ಪಡೆಯಲು ಅಸಮರ್ಥರಾಗಿದ್ದರು ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ) ಮಂಗಳವಾರ ಪ್ರಕಟಿಸಿದ ವರದಿಯಲ್ಲಿ ತಿಳಿಸಿದೆ.

ಆಹಾರ ಭದ್ರತೆ ಮತ್ತು ಪೋಷಣೆಯ 2023ರ ಪ್ರಾದೇಶಿಕ ಅವಲೋಕನದ ಪ್ರಕಾರ, 2020ರಲ್ಲಿ ಶೇ. 76.2ರಷ್ಟು ಭಾರತೀಯರು ಆರೋಗ್ಯಕರ ಆಹಾರವನ್ನು ಪಡೆಯಲು ಸಾಧ್ಯವಾಗಿರಲಿಲ್ಲ. 2021ರಲ್ಲಿ ಈ ಸಂಖ್ಯೆ ಸ್ವಲ್ಪ ಸುಧಾರಣೆ ಕಂಡಿದೆ.

ವಿಶ್ವಸಂಸ್ಥೆಯ ಪ್ರಕಾರ ವಯಸ್ಕರ ಆರೋಗ್ಯಕರ ಆಹಾರವೆಂದರೆ ದಿನಕ್ಕೆ ಕನಿಷ್ಠ 400 ಗ್ರಾಂ. ಹಣ್ಣು, ತರಕಾರಿಗಳು, ಬೀಜಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುವ ಆಹಾರವಾಗಿದೆ.

ದಕ್ಷಿಣ ಏಷ್ಯಾದ ಇತರ ಭಾಗಗಳನ್ನು ಗಮನಿಸಿದರೆ ಶೇ.82.8 ಪಾಕಿಸ್ತಾನಿ ನಾಗರಿಕರು 2021ರಲ್ಲಿ ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗಿಲ್ಲ ಎಂದು ಜಾಗತಿಕ ಆಹಾರ ಭದ್ರತಾ ಏಜೆನ್ಸಿಯ ವರದಿಯು ತೋರಿಸಿದೆ. ಇದು ಏಷ್ಯಾ-ಪೆಸಿಫಿಕ್ ವಲಯದ ರಾಷ್ಟ್ರಗಳ ಪೈಕಿ ಅತೀ ಹೆಚ್ಚಿನ ದರವಾಗಿದೆ.

ನೆರೆಯ ಬಾಂಗ್ಲಾದೇಶದಲ್ಲಿ ಶೇ. 66.1 ಮತ್ತು ನೇಪಾಳದಲ್ಲಿ ಶೇ. 76.4 ಮತ್ತು ಮಾಲ್ಡೀವ್ಸ್‌ನಲ್ಲಿ ಶೇ. 1.2ರಷ್ಟು ನಾಗರಿಕರು ಮಾತ್ರ 2021ರಲ್ಲಿ ಆರೋಗ್ಯಕರ ಆಹಾರ ಪಡೆದಿಲ್ಲ ಎಂದು ಎಫ್ಎಒ ವರದಿ ತಿಳಿಸಿದೆ.

ಆಹಾರದ ವೆಚ್ಚವನ್ನು ಆದಾಯದ ಹೆಚ್ಚಳದೊಂದಿಗೆ ಹೊಂದಿಸದಿದ್ದರೆ, ಹೆಚ್ಚಿನ ಜನರು ಆರೋಗ್ಯಕರ ಆಹಾರ ಪಡೆಯಲು ವಿಫಲರಾಗುತ್ತಾರೆ. ಅದೇ ಸಮಯದಲ್ಲಿ ಆದಾಯ ಕುಸಿದಂತೆ ಆಹಾರದ ವೆಚ್ಚ ಏರಿಕೆಯಾದರೆ ಒಂದು ಸಂಯುಕ್ತ ಪರಿಣಾಮ ಸಂಭವಿಸುತ್ತದೆ. ಇದು ಇನ್ನಷ್ಟು ಜನರು ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗದಂತೆ ಮಾಡುತ್ತದೆ ಎಂದು ಎಫ್ಎಒ ಎಚ್ಚರಿಸಿದೆ.

2020 ಮತ್ತು 2021 ರ ನಡುವೆ ಪೂರ್ವ ಏಷ್ಯಾ ಮತ್ತು ದಕ್ಷಿಣ ಏಷ್ಯಾದ ಒಟ್ಟಾರೆ ಪರಿಸ್ಥಿತಿಗಳು ಸುಧಾರಿಸಿದೆ. ಕೋವಿಡ್ ಸಮಯದಲ್ಲಿ ಸಮಸ್ಯೆ ಹೆಚ್ಚಾಗಿದೆ ಎಂದು ಎಫ್ಎಒ ತಿಳಿಸಿದೆ.

ಕೋವಿಡ್ ಸಮಯದಲ್ಲಿ ಏಕಾಏಕಿ ಉಂಟಾದ ಕೆಲಸದ ಕೊರತೆ, ಆಹಾರ ವ್ಯವಸ್ಥೆ ಮತ್ತು ಮಾರುಕಟ್ಟೆಗಳ ಸಮಸ್ಯೆ ಬಡ ಕುಟುಂಬಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಿತ್ತು. ಇದರಿಂದ ಹೆಚ್ಚಿನ ಜನರು ಆರೋಗ್ಯಕರ ಆಹಾರ ಪಡೆಯಲು ಸಾಧ್ಯವಾಗಿಲ್ಲ ಎಂದು ಎಫ್ಎಒ ಹೇಳಿದೆ.

ಇದನ್ನೂ ಓದಿ : ಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is healthy food? Who decides this? What are the parameters for this?
    Someone sitting in USA or Europe can’t or shouldn’t decide what is good for Bharat.
    Living conditions, work conditions, weather are totally different in Bharat.
    Also majority of people in Bharat are vegetarian.
    Hence the report is not more than fit for dustbin.
    .

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...