Homeಕರ್ನಾಟಕಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಕುಸುಮಾವತಿ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್‌ ಅವರು, ಅಸಹಜವಾಗಿ ಸಾವನ್ನಪ್ಪಿದವರ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಅಸಹಜವಾಗಿ ಸಾವನ್ನಪ್ಪಿದವರ 74 ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪೊಲೀಸರು ಶವಗಳ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಪಂಚಾಯಿತಿಗೆ ಶಿಫಾರಸ್ಸು ಮಾಡಿದ್ದಾರೆ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬುವುದರ ಮಾಹಿತಿ ಇಲ್ಲ. ಈ ಸಂಬಂಧ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು, ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ತನಿಖೆ ನಡೆಸಲಾಗಿಲ್ಲ. ಶವಗಳನ್ನು ಸಂಸ್ಕಾರ ಮಾಡಲಾಗಿದೆ. ಆದರೆ, ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆದಿಲ್ಲ. ಹಾಗಾಗಿ 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು ಎಂಬುವುದಾಗಿ ಮನವಿ ಮಾಡಿದ್ದಾರೆ ಎಂದು barandbench.com ವರದಿ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ವಾದ ಮಂಡಿಸಿ, ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ನಡೆದಿವೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಯುಡಿಆರ್‌ ದಾಖಲಿಸಲಾಗಿದೆ. ಸದ್ಯ ರಚಿಸಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂಥದ್ದು ಏನೂ ಇಲ್ಲ. ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ, ಅದನ್ನು ತನಿಖೆಗೆ ಒಳಪಡಿಸಲಾಗುವುದು. ಇದೊಂದು ಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದೆ. ಅರ್ಜಿದಾರೆಯ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು. ಇದರ ಸಂಬಂಧಿತ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಬಾಲನ್ ಅವರು 2002ರಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾದ ಪ್ರಕರಣವನ್ನು ಉಲ್ಲೇಖಿಸಿದ್ದು, “6.5.2002ರಂದು 12.30ರ ವೇಳೆಗೆ ಗುರುತಿಲ್ಲದ ಬಾಲಕಿಯ ಶವವು ಧರ್ಮಸ್ಥಳ ಸಮೀಪದ ಬೈಲೂರು ಸೇತುವೆ ಬಳಿ ಸಿಕ್ಕಿತ್ತು. ಇದು ಅಸಹಜವಾಗಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಮಹಜರು ಪ್ರಕ್ರಿಯೆ ನಡೆಸಬೇಕು. ಆದರೆ, ಮಹಜರು ಪ್ರಕ್ರಿಯೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆಯಾಗಿಲ್ಲ. ಎಲ್ಲಿ ಶವ ಸಂಸ್ಕಾರ ಮಾಡಲಾಗಿದೆ ಎಂಬ ಮಾಹಿತಿ ಇಲ್ಲ. ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಕೆಲವರು ನಾಪತ್ತೆಯಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌, “6.5.2002ರಂದು ಸಿಕ್ಕಿದ್ದ ಬಾಲಕಿಯ ಶವಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ, ವೈದ್ಯರ ಅಭಿಪ್ರಾಯ ಎಲ್ಲವೂ ಇದೆ” ಎಂದು ಹೇಳಿದ್ದಾರೆ.

ಆಗ ಪೀಠವು “ತನಿಖಾ ವರದಿ ಎಲ್ಲಿದೆ? ಹಲವು ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆಯೇ ನಡೆಯುವುದಿಲ್ಲ. ಸಾವಿಗೆ ಕಾರಣ ಏನು ಎಂಬ ಇರಬೇಕಲ್ಲವೇ?” ಎಂದಿದೆ.

ಇದಕ್ಕೆ ಅಡ್ವೊಕೇಟ್‌ ಜನರಲ್‌ ಅವರು “ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ತನಿಖೆಯ ವಿವರ, ಏನು ಮಾಡಲಾಗಿದೆ ಎಂವುದನ್ನು ವಿಸ್ತೃತವಾದ ಆಕ್ಷೇಪಣೆಯಲ್ಲಿ ಸಲ್ಲಿಸಲಾಗುವುದು. ಸರ್ಕಾರದ ಸುತ್ತೋಲೆಯ ಪ್ರಕಾರ 2010ರವರೆಗಿನ ದಾಖಲೆಗಳನ್ನು ನಾಶಪಡಿಸಲಾಗಿದೆ. 20 ವರ್ಷಗಳ ಬಳಿಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪಿಐಎಲ್‌ ಸಲ್ಲಿಸಲಾಗಿದೆ. 2002ರ ದಾಖಲೆಗಳು ಇಲ್ಲ. 2023ರ ನವೆಂಬರ್‌ 23ರಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಹಳೆಯ ದಾಖಲೆಗಳನ್ನು ನಾಶಪಡಿಸಲಾಗಿದೆ. ಅರ್ಜಿದಾರರು ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡಿ ಏನೆಲ್ಲಾ ಮಾಡಬಹುದು ಅದನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಆಲಿಸಿದ ಪೀಠವು “ಈ ಹಂತದಲ್ಲಿ ಯಾವುದೇ ದಾಖಲೆ ಇಲ್ಲದೇ ಸರ್ಕಾರ ಹೇಗೆ ತನಿಖೆ ಮಾಡುತ್ತದೆ? ಕೆಲವು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಅದನ್ನು ಹೇಗೆ ಹಾಜರುಪಡಿಸಲಾಗುತ್ತದೆ?” ಎಂದು ಪ್ರಶ್ನಿಸಿದೆ.

ಈ ಹಂತದಲ್ಲಿ ಬಾಲನ್ ಅವರು “ಎಲ್ಲಾ ದಾಖಲೆಗಳನ್ನು ಸರ್ಕಾರ ನಾಶಪಡಿಸಿದೆ. ಯುಡಿಆರ್‌ ದಾಖಲಿಸಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಪ್ರಕ್ರಿಯೆ ಪಾಲಿಸಲಾಗಿಲ್ಲ. ಎಸ್‌ಐಟಿ ರಚಿಸಲಾಗಿದೆ. ನಾವು ಪ್ರಸ್ತಾಪಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ಏನು ತನಿಖೆ ಮಾಡಿದೆ ಎಂಬುದನ್ನು ತಿಳಿಸಲಿ. ಲಾಡ್ಜ್‌ನಲ್ಲಿ ಇದ್ದ ಬಾಲಕಿ ನಾಪತ್ತೆಯಾಗಿದ್ದಳು. ಆನಂತರ ಶವ ಪತ್ತೆಯಾಗಿದೆ. ಇದೆಲ್ಲಕ್ಕೂ ಸಂಬಂಧಿಸಿದ ದಾಖಲೆ ಸಲ್ಲಿಸಬೇಕು” ಎಂದಿದ್ದಾರೆ.

ಆಗ ಅಡ್ವೊಕೇಟ್‌ ಜನರಲ್‌ ಅವರು “ಅರ್ಜಿದಾರೆಯ ಸಹೋದರ ದೂರು ನೀಡಿದ್ದು, ಆತ ದಾಖಲೆ ತಿರುಚಿರುವ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಆರೋಪಗಳಿಗಾಗಿ ಎಸ್‌ಐಟಿ ರಚಿಸಲಾಗಿದೆ” ಎಂದು ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ “74 ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸಬೇಕು” ಎಂದ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...