Homeಕರ್ನಾಟಕಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಕುಸುಮಾವತಿ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್‌ ಅವರು, ಅಸಹಜವಾಗಿ ಸಾವನ್ನಪ್ಪಿದವರ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಅಸಹಜವಾಗಿ ಸಾವನ್ನಪ್ಪಿದವರ 74 ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪೊಲೀಸರು ಶವಗಳ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಪಂಚಾಯಿತಿಗೆ ಶಿಫಾರಸ್ಸು ಮಾಡಿದ್ದಾರೆ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬುವುದರ ಮಾಹಿತಿ ಇಲ್ಲ. ಈ ಸಂಬಂಧ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು, ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ತನಿಖೆ ನಡೆಸಲಾಗಿಲ್ಲ. ಶವಗಳನ್ನು ಸಂಸ್ಕಾರ ಮಾಡಲಾಗಿದೆ. ಆದರೆ, ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆದಿಲ್ಲ. ಹಾಗಾಗಿ 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು ಎಂಬುವುದಾಗಿ ಮನವಿ ಮಾಡಿದ್ದಾರೆ ಎಂದು barandbench.com ವರದಿ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ವಾದ ಮಂಡಿಸಿ, ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ನಡೆದಿವೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಯುಡಿಆರ್‌ ದಾಖಲಿಸಲಾಗಿದೆ. ಸದ್ಯ ರಚಿಸಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂಥದ್ದು ಏನೂ ಇಲ್ಲ. ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ, ಅದನ್ನು ತನಿಖೆಗೆ ಒಳಪಡಿಸಲಾಗುವುದು. ಇದೊಂದು ಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದೆ. ಅರ್ಜಿದಾರೆಯ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು. ಇದರ ಸಂಬಂಧಿತ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಬಾಲನ್ ಅವರು 2002ರಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾದ ಪ್ರಕರಣವನ್ನು ಉಲ್ಲೇಖಿಸಿದ್ದು, “6.5.2002ರಂದು 12.30ರ ವೇಳೆಗೆ ಗುರುತಿಲ್ಲದ ಬಾಲಕಿಯ ಶವವು ಧರ್ಮಸ್ಥಳ ಸಮೀಪದ ಬೈಲೂರು ಸೇತುವೆ ಬಳಿ ಸಿಕ್ಕಿತ್ತು. ಇದು ಅಸಹಜವಾಗಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಮಹಜರು ಪ್ರಕ್ರಿಯೆ ನಡೆಸಬೇಕು. ಆದರೆ, ಮಹಜರು ಪ್ರಕ್ರಿಯೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆಯಾಗಿಲ್ಲ. ಎಲ್ಲಿ ಶವ ಸಂಸ್ಕಾರ ಮಾಡಲಾಗಿದೆ ಎಂಬ ಮಾಹಿತಿ ಇಲ್ಲ. ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಕೆಲವರು ನಾಪತ್ತೆಯಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌, “6.5.2002ರಂದು ಸಿಕ್ಕಿದ್ದ ಬಾಲಕಿಯ ಶವಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ, ವೈದ್ಯರ ಅಭಿಪ್ರಾಯ ಎಲ್ಲವೂ ಇದೆ” ಎಂದು ಹೇಳಿದ್ದಾರೆ.

ಆಗ ಪೀಠವು “ತನಿಖಾ ವರದಿ ಎಲ್ಲಿದೆ? ಹಲವು ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆಯೇ ನಡೆಯುವುದಿಲ್ಲ. ಸಾವಿಗೆ ಕಾರಣ ಏನು ಎಂಬ ಇರಬೇಕಲ್ಲವೇ?” ಎಂದಿದೆ.

ಇದಕ್ಕೆ ಅಡ್ವೊಕೇಟ್‌ ಜನರಲ್‌ ಅವರು “ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ತನಿಖೆಯ ವಿವರ, ಏನು ಮಾಡಲಾಗಿದೆ ಎಂವುದನ್ನು ವಿಸ್ತೃತವಾದ ಆಕ್ಷೇಪಣೆಯಲ್ಲಿ ಸಲ್ಲಿಸಲಾಗುವುದು. ಸರ್ಕಾರದ ಸುತ್ತೋಲೆಯ ಪ್ರಕಾರ 2010ರವರೆಗಿನ ದಾಖಲೆಗಳನ್ನು ನಾಶಪಡಿಸಲಾಗಿದೆ. 20 ವರ್ಷಗಳ ಬಳಿಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪಿಐಎಲ್‌ ಸಲ್ಲಿಸಲಾಗಿದೆ. 2002ರ ದಾಖಲೆಗಳು ಇಲ್ಲ. 2023ರ ನವೆಂಬರ್‌ 23ರಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಹಳೆಯ ದಾಖಲೆಗಳನ್ನು ನಾಶಪಡಿಸಲಾಗಿದೆ. ಅರ್ಜಿದಾರರು ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡಿ ಏನೆಲ್ಲಾ ಮಾಡಬಹುದು ಅದನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಆಲಿಸಿದ ಪೀಠವು “ಈ ಹಂತದಲ್ಲಿ ಯಾವುದೇ ದಾಖಲೆ ಇಲ್ಲದೇ ಸರ್ಕಾರ ಹೇಗೆ ತನಿಖೆ ಮಾಡುತ್ತದೆ? ಕೆಲವು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಅದನ್ನು ಹೇಗೆ ಹಾಜರುಪಡಿಸಲಾಗುತ್ತದೆ?” ಎಂದು ಪ್ರಶ್ನಿಸಿದೆ.

ಈ ಹಂತದಲ್ಲಿ ಬಾಲನ್ ಅವರು “ಎಲ್ಲಾ ದಾಖಲೆಗಳನ್ನು ಸರ್ಕಾರ ನಾಶಪಡಿಸಿದೆ. ಯುಡಿಆರ್‌ ದಾಖಲಿಸಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಪ್ರಕ್ರಿಯೆ ಪಾಲಿಸಲಾಗಿಲ್ಲ. ಎಸ್‌ಐಟಿ ರಚಿಸಲಾಗಿದೆ. ನಾವು ಪ್ರಸ್ತಾಪಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ಏನು ತನಿಖೆ ಮಾಡಿದೆ ಎಂಬುದನ್ನು ತಿಳಿಸಲಿ. ಲಾಡ್ಜ್‌ನಲ್ಲಿ ಇದ್ದ ಬಾಲಕಿ ನಾಪತ್ತೆಯಾಗಿದ್ದಳು. ಆನಂತರ ಶವ ಪತ್ತೆಯಾಗಿದೆ. ಇದೆಲ್ಲಕ್ಕೂ ಸಂಬಂಧಿಸಿದ ದಾಖಲೆ ಸಲ್ಲಿಸಬೇಕು” ಎಂದಿದ್ದಾರೆ.

ಆಗ ಅಡ್ವೊಕೇಟ್‌ ಜನರಲ್‌ ಅವರು “ಅರ್ಜಿದಾರೆಯ ಸಹೋದರ ದೂರು ನೀಡಿದ್ದು, ಆತ ದಾಖಲೆ ತಿರುಚಿರುವ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಆರೋಪಗಳಿಗಾಗಿ ಎಸ್‌ಐಟಿ ರಚಿಸಲಾಗಿದೆ” ಎಂದು ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ “74 ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸಬೇಕು” ಎಂದ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...