Homeಕರ್ನಾಟಕಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಕುಸುಮಾವತಿ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್‌ ಅವರು, ಅಸಹಜವಾಗಿ ಸಾವನ್ನಪ್ಪಿದವರ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಅಸಹಜವಾಗಿ ಸಾವನ್ನಪ್ಪಿದವರ 74 ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪೊಲೀಸರು ಶವಗಳ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಪಂಚಾಯಿತಿಗೆ ಶಿಫಾರಸ್ಸು ಮಾಡಿದ್ದಾರೆ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬುವುದರ ಮಾಹಿತಿ ಇಲ್ಲ. ಈ ಸಂಬಂಧ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು, ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ತನಿಖೆ ನಡೆಸಲಾಗಿಲ್ಲ. ಶವಗಳನ್ನು ಸಂಸ್ಕಾರ ಮಾಡಲಾಗಿದೆ. ಆದರೆ, ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆದಿಲ್ಲ. ಹಾಗಾಗಿ 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು ಎಂಬುವುದಾಗಿ ಮನವಿ ಮಾಡಿದ್ದಾರೆ ಎಂದು barandbench.com ವರದಿ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ವಾದ ಮಂಡಿಸಿ, ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ನಡೆದಿವೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಯುಡಿಆರ್‌ ದಾಖಲಿಸಲಾಗಿದೆ. ಸದ್ಯ ರಚಿಸಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂಥದ್ದು ಏನೂ ಇಲ್ಲ. ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ, ಅದನ್ನು ತನಿಖೆಗೆ ಒಳಪಡಿಸಲಾಗುವುದು. ಇದೊಂದು ಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದೆ. ಅರ್ಜಿದಾರೆಯ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು. ಇದರ ಸಂಬಂಧಿತ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಬಾಲನ್ ಅವರು 2002ರಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾದ ಪ್ರಕರಣವನ್ನು ಉಲ್ಲೇಖಿಸಿದ್ದು, “6.5.2002ರಂದು 12.30ರ ವೇಳೆಗೆ ಗುರುತಿಲ್ಲದ ಬಾಲಕಿಯ ಶವವು ಧರ್ಮಸ್ಥಳ ಸಮೀಪದ ಬೈಲೂರು ಸೇತುವೆ ಬಳಿ ಸಿಕ್ಕಿತ್ತು. ಇದು ಅಸಹಜವಾಗಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಮಹಜರು ಪ್ರಕ್ರಿಯೆ ನಡೆಸಬೇಕು. ಆದರೆ, ಮಹಜರು ಪ್ರಕ್ರಿಯೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆಯಾಗಿಲ್ಲ. ಎಲ್ಲಿ ಶವ ಸಂಸ್ಕಾರ ಮಾಡಲಾಗಿದೆ ಎಂಬ ಮಾಹಿತಿ ಇಲ್ಲ. ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಕೆಲವರು ನಾಪತ್ತೆಯಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌, “6.5.2002ರಂದು ಸಿಕ್ಕಿದ್ದ ಬಾಲಕಿಯ ಶವಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ, ವೈದ್ಯರ ಅಭಿಪ್ರಾಯ ಎಲ್ಲವೂ ಇದೆ” ಎಂದು ಹೇಳಿದ್ದಾರೆ.

ಆಗ ಪೀಠವು “ತನಿಖಾ ವರದಿ ಎಲ್ಲಿದೆ? ಹಲವು ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆಯೇ ನಡೆಯುವುದಿಲ್ಲ. ಸಾವಿಗೆ ಕಾರಣ ಏನು ಎಂಬ ಇರಬೇಕಲ್ಲವೇ?” ಎಂದಿದೆ.

ಇದಕ್ಕೆ ಅಡ್ವೊಕೇಟ್‌ ಜನರಲ್‌ ಅವರು “ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ತನಿಖೆಯ ವಿವರ, ಏನು ಮಾಡಲಾಗಿದೆ ಎಂವುದನ್ನು ವಿಸ್ತೃತವಾದ ಆಕ್ಷೇಪಣೆಯಲ್ಲಿ ಸಲ್ಲಿಸಲಾಗುವುದು. ಸರ್ಕಾರದ ಸುತ್ತೋಲೆಯ ಪ್ರಕಾರ 2010ರವರೆಗಿನ ದಾಖಲೆಗಳನ್ನು ನಾಶಪಡಿಸಲಾಗಿದೆ. 20 ವರ್ಷಗಳ ಬಳಿಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪಿಐಎಲ್‌ ಸಲ್ಲಿಸಲಾಗಿದೆ. 2002ರ ದಾಖಲೆಗಳು ಇಲ್ಲ. 2023ರ ನವೆಂಬರ್‌ 23ರಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಹಳೆಯ ದಾಖಲೆಗಳನ್ನು ನಾಶಪಡಿಸಲಾಗಿದೆ. ಅರ್ಜಿದಾರರು ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡಿ ಏನೆಲ್ಲಾ ಮಾಡಬಹುದು ಅದನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಆಲಿಸಿದ ಪೀಠವು “ಈ ಹಂತದಲ್ಲಿ ಯಾವುದೇ ದಾಖಲೆ ಇಲ್ಲದೇ ಸರ್ಕಾರ ಹೇಗೆ ತನಿಖೆ ಮಾಡುತ್ತದೆ? ಕೆಲವು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಅದನ್ನು ಹೇಗೆ ಹಾಜರುಪಡಿಸಲಾಗುತ್ತದೆ?” ಎಂದು ಪ್ರಶ್ನಿಸಿದೆ.

ಈ ಹಂತದಲ್ಲಿ ಬಾಲನ್ ಅವರು “ಎಲ್ಲಾ ದಾಖಲೆಗಳನ್ನು ಸರ್ಕಾರ ನಾಶಪಡಿಸಿದೆ. ಯುಡಿಆರ್‌ ದಾಖಲಿಸಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಪ್ರಕ್ರಿಯೆ ಪಾಲಿಸಲಾಗಿಲ್ಲ. ಎಸ್‌ಐಟಿ ರಚಿಸಲಾಗಿದೆ. ನಾವು ಪ್ರಸ್ತಾಪಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ಏನು ತನಿಖೆ ಮಾಡಿದೆ ಎಂಬುದನ್ನು ತಿಳಿಸಲಿ. ಲಾಡ್ಜ್‌ನಲ್ಲಿ ಇದ್ದ ಬಾಲಕಿ ನಾಪತ್ತೆಯಾಗಿದ್ದಳು. ಆನಂತರ ಶವ ಪತ್ತೆಯಾಗಿದೆ. ಇದೆಲ್ಲಕ್ಕೂ ಸಂಬಂಧಿಸಿದ ದಾಖಲೆ ಸಲ್ಲಿಸಬೇಕು” ಎಂದಿದ್ದಾರೆ.

ಆಗ ಅಡ್ವೊಕೇಟ್‌ ಜನರಲ್‌ ಅವರು “ಅರ್ಜಿದಾರೆಯ ಸಹೋದರ ದೂರು ನೀಡಿದ್ದು, ಆತ ದಾಖಲೆ ತಿರುಚಿರುವ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಆರೋಪಗಳಿಗಾಗಿ ಎಸ್‌ಐಟಿ ರಚಿಸಲಾಗಿದೆ” ಎಂದು ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ “74 ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸಬೇಕು” ಎಂದ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...