Homeಕರ್ನಾಟಕಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಕುಸುಮಾವತಿ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್‌ ಅವರು, ಅಸಹಜವಾಗಿ ಸಾವನ್ನಪ್ಪಿದವರ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಅಸಹಜವಾಗಿ ಸಾವನ್ನಪ್ಪಿದವರ 74 ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪೊಲೀಸರು ಶವಗಳ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಪಂಚಾಯಿತಿಗೆ ಶಿಫಾರಸ್ಸು ಮಾಡಿದ್ದಾರೆ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬುವುದರ ಮಾಹಿತಿ ಇಲ್ಲ. ಈ ಸಂಬಂಧ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು, ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ತನಿಖೆ ನಡೆಸಲಾಗಿಲ್ಲ. ಶವಗಳನ್ನು ಸಂಸ್ಕಾರ ಮಾಡಲಾಗಿದೆ. ಆದರೆ, ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆದಿಲ್ಲ. ಹಾಗಾಗಿ 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು ಎಂಬುವುದಾಗಿ ಮನವಿ ಮಾಡಿದ್ದಾರೆ ಎಂದು barandbench.com ವರದಿ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ವಾದ ಮಂಡಿಸಿ, ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ನಡೆದಿವೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಯುಡಿಆರ್‌ ದಾಖಲಿಸಲಾಗಿದೆ. ಸದ್ಯ ರಚಿಸಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂಥದ್ದು ಏನೂ ಇಲ್ಲ. ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ, ಅದನ್ನು ತನಿಖೆಗೆ ಒಳಪಡಿಸಲಾಗುವುದು. ಇದೊಂದು ಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದೆ. ಅರ್ಜಿದಾರೆಯ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು. ಇದರ ಸಂಬಂಧಿತ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಬಾಲನ್ ಅವರು 2002ರಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾದ ಪ್ರಕರಣವನ್ನು ಉಲ್ಲೇಖಿಸಿದ್ದು, “6.5.2002ರಂದು 12.30ರ ವೇಳೆಗೆ ಗುರುತಿಲ್ಲದ ಬಾಲಕಿಯ ಶವವು ಧರ್ಮಸ್ಥಳ ಸಮೀಪದ ಬೈಲೂರು ಸೇತುವೆ ಬಳಿ ಸಿಕ್ಕಿತ್ತು. ಇದು ಅಸಹಜವಾಗಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಮಹಜರು ಪ್ರಕ್ರಿಯೆ ನಡೆಸಬೇಕು. ಆದರೆ, ಮಹಜರು ಪ್ರಕ್ರಿಯೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆಯಾಗಿಲ್ಲ. ಎಲ್ಲಿ ಶವ ಸಂಸ್ಕಾರ ಮಾಡಲಾಗಿದೆ ಎಂಬ ಮಾಹಿತಿ ಇಲ್ಲ. ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಕೆಲವರು ನಾಪತ್ತೆಯಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌, “6.5.2002ರಂದು ಸಿಕ್ಕಿದ್ದ ಬಾಲಕಿಯ ಶವಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ, ವೈದ್ಯರ ಅಭಿಪ್ರಾಯ ಎಲ್ಲವೂ ಇದೆ” ಎಂದು ಹೇಳಿದ್ದಾರೆ.

ಆಗ ಪೀಠವು “ತನಿಖಾ ವರದಿ ಎಲ್ಲಿದೆ? ಹಲವು ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆಯೇ ನಡೆಯುವುದಿಲ್ಲ. ಸಾವಿಗೆ ಕಾರಣ ಏನು ಎಂಬ ಇರಬೇಕಲ್ಲವೇ?” ಎಂದಿದೆ.

ಇದಕ್ಕೆ ಅಡ್ವೊಕೇಟ್‌ ಜನರಲ್‌ ಅವರು “ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ತನಿಖೆಯ ವಿವರ, ಏನು ಮಾಡಲಾಗಿದೆ ಎಂವುದನ್ನು ವಿಸ್ತೃತವಾದ ಆಕ್ಷೇಪಣೆಯಲ್ಲಿ ಸಲ್ಲಿಸಲಾಗುವುದು. ಸರ್ಕಾರದ ಸುತ್ತೋಲೆಯ ಪ್ರಕಾರ 2010ರವರೆಗಿನ ದಾಖಲೆಗಳನ್ನು ನಾಶಪಡಿಸಲಾಗಿದೆ. 20 ವರ್ಷಗಳ ಬಳಿಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪಿಐಎಲ್‌ ಸಲ್ಲಿಸಲಾಗಿದೆ. 2002ರ ದಾಖಲೆಗಳು ಇಲ್ಲ. 2023ರ ನವೆಂಬರ್‌ 23ರಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಹಳೆಯ ದಾಖಲೆಗಳನ್ನು ನಾಶಪಡಿಸಲಾಗಿದೆ. ಅರ್ಜಿದಾರರು ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡಿ ಏನೆಲ್ಲಾ ಮಾಡಬಹುದು ಅದನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಆಲಿಸಿದ ಪೀಠವು “ಈ ಹಂತದಲ್ಲಿ ಯಾವುದೇ ದಾಖಲೆ ಇಲ್ಲದೇ ಸರ್ಕಾರ ಹೇಗೆ ತನಿಖೆ ಮಾಡುತ್ತದೆ? ಕೆಲವು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಅದನ್ನು ಹೇಗೆ ಹಾಜರುಪಡಿಸಲಾಗುತ್ತದೆ?” ಎಂದು ಪ್ರಶ್ನಿಸಿದೆ.

ಈ ಹಂತದಲ್ಲಿ ಬಾಲನ್ ಅವರು “ಎಲ್ಲಾ ದಾಖಲೆಗಳನ್ನು ಸರ್ಕಾರ ನಾಶಪಡಿಸಿದೆ. ಯುಡಿಆರ್‌ ದಾಖಲಿಸಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಪ್ರಕ್ರಿಯೆ ಪಾಲಿಸಲಾಗಿಲ್ಲ. ಎಸ್‌ಐಟಿ ರಚಿಸಲಾಗಿದೆ. ನಾವು ಪ್ರಸ್ತಾಪಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ಏನು ತನಿಖೆ ಮಾಡಿದೆ ಎಂಬುದನ್ನು ತಿಳಿಸಲಿ. ಲಾಡ್ಜ್‌ನಲ್ಲಿ ಇದ್ದ ಬಾಲಕಿ ನಾಪತ್ತೆಯಾಗಿದ್ದಳು. ಆನಂತರ ಶವ ಪತ್ತೆಯಾಗಿದೆ. ಇದೆಲ್ಲಕ್ಕೂ ಸಂಬಂಧಿಸಿದ ದಾಖಲೆ ಸಲ್ಲಿಸಬೇಕು” ಎಂದಿದ್ದಾರೆ.

ಆಗ ಅಡ್ವೊಕೇಟ್‌ ಜನರಲ್‌ ಅವರು “ಅರ್ಜಿದಾರೆಯ ಸಹೋದರ ದೂರು ನೀಡಿದ್ದು, ಆತ ದಾಖಲೆ ತಿರುಚಿರುವ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಆರೋಪಗಳಿಗಾಗಿ ಎಸ್‌ಐಟಿ ರಚಿಸಲಾಗಿದೆ” ಎಂದು ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ “74 ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸಬೇಕು” ಎಂದ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...