Homeಮುಖಪುಟಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

- Advertisement -
- Advertisement -

ಭಾರತದಲ್ಲಿನ ದ್ವೇಷ ಭಾಷಣದಲ್ಲಿ 2023ರ ದ್ವಿತೀಯಾರ್ಧದಲ್ಲಿ ಸಾರ್ವಕಾಲಿಕ ಹೆಚ್ಚಳವಾಗಿದೆ ಎಂದು ವಾಷಿಂಗ್ಟನ್ ಮೂಲದ ಸಂಶೋಧನಾ ಸಂಸ್ಥೆ ‘ಇಂಡಿಯಾ ಹೇಟ್ ಲ್ಯಾಬ್’ ವರದಿಯನ್ನು ಮಾಡಿದ್ದು, ಅದರಲ್ಲಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರ ವಿರುದ್ಧ ಅತಿ ಹೆಚ್ಚು ದ್ವೇಷ ಭಾಷಣವನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

2023ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣವು ಶೇಕಡಾ 62ರಷ್ಟು ಹೆಚ್ಚಾಗಿದೆ ಎಂದು ‘ಇಂಡಿಯಾ ಹೇಟ್ ಲ್ಯಾಬ್’ ವರದಿ ತಿಳಿಸಿದೆ. 2023ರಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡ 668 ದ್ವೇಷ ಭಾಷಣ ಘಟನೆಗಳನ್ನು ಉಲ್ಲೇಖಿಸಿದೆ. ಅದರಲ್ಲಿ 255 ವರ್ಷದ ಮೊದಲಾರ್ಧದಲ್ಲಿ ಸಂಭವಿಸಿದೆ ಮತ್ತು 2023ರ ಕೊನೆಯ ಆರು ತಿಂಗಳಲ್ಲಿ 413 ಘಟನೆಗಳು ನಡೆದಿವೆ ಎಂದು ಸಂಶೋಧನಾ ಸಮಿತಿ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಇಂಡಿಯಾ ಹೇಟ್ ಲ್ಯಾಬ್ ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳ ಆನ್‌ಲೈನ್ ಚಟುವಟಿಕೆಯನ್ನು  ಟ್ರ್ಯಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ದ್ವೇಷ ಭಾಷಣದ ವೀಡಿಯೊಗಳನ್ನು ಪರಿಶೀಲಿಸಿದೆ ಮತ್ತು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಪ್ರತ್ಯೇಕ ಘಟನೆಗಳ ದಾಖಲೆಯನ್ನು ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಿದೆ.

ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಆಗಸ್ಟ್‌ನಿಂದ ನವೆಂಬರ್‌ವರೆಗಿನ ಅವಧಿಯಲ್ಲಿ ದ್ವೇಷದ ಭಾಷಣದ ಘಟನೆಗಳು ಉತ್ತುಂಗಕ್ಕೇರಿದವು ಎಂದು ವರದಿಯು ಗಮನಿಸಿದೆ. ಮಹಾರಾಷ್ಟ್ರ (118), ಉತ್ತರ ಪ್ರದೇಶ (104), ಮಧ್ಯಪ್ರದೇಶ (65), ರಾಜಸ್ಥಾನ (64), ಹರಿಯಾಣ (48), ಉತ್ತರಾಖಂಡ (41), ಕರ್ನಾಟಕ (40), ಗುಜರಾತ್ (31), ಛತ್ತೀಸ್‌ಗಢ (21), ಮತ್ತು ಬಿಹಾರ ( 18) ದ್ವೇಷದ ಭಾಷಣದ ಘಟನೆಯನ್ನು ವರದಿ ಮಾಡಿದೆ. ಇದರಲ್ಲಿ ಕರ್ನಾಟಕವನ್ನು ಹೊರತುಪಡಿಸಿ ಬೇರೆ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ.

ವರದಿಯ ಪ್ರಕಾರ, ಸುಮಾರು 75 ಪ್ರತಿಶತ ಅಥವಾ 498 ಘಟನೆಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ರಾಜ್ಯಗಳಲ್ಲಿ ನಡೆದಿವೆ. ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚು ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯದಲ್ಲಿ ಸರಕಾರದ ಮುಸ್ಲಿಂ ವಿರೋಧಿ ನಿಲುವುಗಳು ಹಲವು ಬಾರಿ ಸಾರ್ವಜನಿಕಗೊಂಡಿದ್ದವು, ಮುಸ್ಲಿಮರ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ, ಮುಸ್ಲಿಮರ ಮೇಲಿನ ಕಾನೂನು ದೌರ್ಜನ್ಯ, ಮನೆಗಳ ಧ್ವಂಸ, ಎನ್‌ಕೌಂಟರ್‌ ಪ್ರಕರಣಗಳು ಈ ರಾಜ್ಯಗಳಲ್ಲಿ ಹೆಚ್ಚು ವರದಿಯಾಗಿದ್ದವು.

ಮುಸ್ಲಿಮರ ವಿರುದ್ಧ ಹಿಂಸಾಚಾರದ ನೇರ ಕರೆಯನ್ನು ಕೆಲವು ದ್ವೇಷ ಭಾಷಣಗಳು ಒಳಗೊಂಡಿವೆ, ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್ ಮತ್ತು ಜನಸಂಖ್ಯೆಯ ಜಿಹಾದ್‌ ಇದರಲ್ಲಿ ಒಳಗೊಂಡಿವೆ. ಸುಮಾರು 25% ಜನರು ಮುಸ್ಲಿಂ ಆರಾಧನಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣಗಳನ್ನು ಮಾಡಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್‌ ಸಶಸ್ತ್ರ ಗುಂಪು ಮತ್ತು ಇಸ್ರೇಲ್‌ ನಡುವೆ ಯುದ್ಧ ಘೋಷಣೆ ಬಳಿಕ ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷದ ಭಾಷಣದ 41 ಘಟನೆಗಳು ವರದಿಯಾಗಿದೆ. ಅಂದರೆ 2023ರ ಕೊನೆಯ ಮೂರು ತಿಂಗಳಲ್ಲಿ ಸುಮಾರು 20 ಪ್ರತಿ ಶತದಷ್ಟು ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದೆ ಎಂದು ಸಂಶೋಧನೆಯು ಉಲ್ಲೇಖಿಸಿದೆ. ಅಕ್ಟೋಬರ್ 7ರ ಇಸ್ರೇಲ್‌ ಯುದ್ಧ ಘೋಷಣೆ ದಿನ ಮತ್ತು ಡಿಸೆಂಬರ್ 31ರ ನಡುವೆ ನಡೆದ 193 ದ್ವೇಷ ಭಾಷಣ ಘಟನೆಗಳಲ್ಲಿ, ಭಾರತೀಯ ಮುಸ್ಲಿಮರ ಬಗ್ಗೆ ಭಯ ಮತ್ತು ದ್ವೇಷವನ್ನು ಹೆಚ್ಚಿಸಲು ಯುದ್ಧವನ್ನು ಬಳಸಿಕೊಳ್ಳಲಾಗಿದೆ. ಮುಸ್ಲಿಮರು ಸ್ವಾಭಾವಿಕವಾಗಿ ಹಿಂಸಾತ್ಮಕವಾಗಿದ್ದಾರೆ ಮತ್ತು ಹಿಂದೂಗಳಿಗೆ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ಬಲಪಂಥೀಯ ನಾಯಕರು ಪ್ರತಿಪಾದಿಸುತ್ತಾ ಬಂದಿದ್ದಾರೆ. ಜುಲೈ 2023ರಲ್ಲಿ ಹರಿಯಾಣದ ನುಹ್ ಮತ್ತು ಜೂನ್ 2023ರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಹಿಂಸಾಚಾರವು ಈ ರೀತಿಯ ಪ್ರತಿಪಾದನೆಯಿಂದ ಉಂಟಾಗಿದೆ ಎನ್ನುವುದನ್ನು ಗಮನಿಸಬಹುದಾಗಿದೆ.

ಸಂಶೋಧನೆಯ ವೇಳೆ ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ, ಜನಾಂಗ ಅಥವಾ ಲಿಂಗದ ಆಧಾರದ ಮೇಲೆ ವ್ಯಕ್ತಿ ಅಥವಾ ಗುಂಪಿನ ಬಗ್ಗೆ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯ ಬಳಕೆ ಎಂಬ ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ ದ್ವೇಷ ಭಾಷಣವನ್ನು ಪತ್ತೆಹಚ್ಚಲಾಗಿದೆ ಎಂದು ಸಂಶೋಧನೆಯು ಬಹಿರಂಗಪಡಿಸಿದೆ. 2014ರಲ್ಲಿ ಪ್ರಧಾನಿಯಾಗಿ ಮೋದಿ ಅಧಿಕಾರವನ್ನು ಸ್ವೀಕರಿಸಿದ ಬಳಿಕ ಮೋದಿ ಆಡಳಿತದಲ್ಲಿ ಮುಸ್ಲಿಮರ ಮೇಲೆ ಅನ್ಯಾಯ ನಡೆಸಲಾಗಿದೆ ಎಂದು ಹೇಳಿದೆ.

ಅವರು UN ಮಾನವ ಹಕ್ಕುಗಳ ಕಚೇರಿ ಮೂಲಭೂತವಾಗಿ ತಾರತಮ್ಯ ಎಂದು ಕರೆಯುವ 2019ರ ಪೌರತ್ವ ಕಾನೂನು, ಮತಾಂತರ-ವಿರೋಧಿ ಶಾಸನ ಮತ್ತು ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು ಸೇರಿದಂತೆ ವಿವಿಧ ವಿಚಾರಗಳನ್ನು ಉಲ್ಲೇಖಿಸಲಾಗಿದೆ. ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಮುಸ್ಲಿಂ ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಸಮಿತಿಯ ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...