Homeಮುಖಪುಟಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

- Advertisement -
- Advertisement -

ಭಾರತದಲ್ಲಿನ ದ್ವೇಷ ಭಾಷಣದಲ್ಲಿ 2023ರ ದ್ವಿತೀಯಾರ್ಧದಲ್ಲಿ ಸಾರ್ವಕಾಲಿಕ ಹೆಚ್ಚಳವಾಗಿದೆ ಎಂದು ವಾಷಿಂಗ್ಟನ್ ಮೂಲದ ಸಂಶೋಧನಾ ಸಂಸ್ಥೆ ‘ಇಂಡಿಯಾ ಹೇಟ್ ಲ್ಯಾಬ್’ ವರದಿಯನ್ನು ಮಾಡಿದ್ದು, ಅದರಲ್ಲಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರ ವಿರುದ್ಧ ಅತಿ ಹೆಚ್ಚು ದ್ವೇಷ ಭಾಷಣವನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

2023ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣವು ಶೇಕಡಾ 62ರಷ್ಟು ಹೆಚ್ಚಾಗಿದೆ ಎಂದು ‘ಇಂಡಿಯಾ ಹೇಟ್ ಲ್ಯಾಬ್’ ವರದಿ ತಿಳಿಸಿದೆ. 2023ರಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡ 668 ದ್ವೇಷ ಭಾಷಣ ಘಟನೆಗಳನ್ನು ಉಲ್ಲೇಖಿಸಿದೆ. ಅದರಲ್ಲಿ 255 ವರ್ಷದ ಮೊದಲಾರ್ಧದಲ್ಲಿ ಸಂಭವಿಸಿದೆ ಮತ್ತು 2023ರ ಕೊನೆಯ ಆರು ತಿಂಗಳಲ್ಲಿ 413 ಘಟನೆಗಳು ನಡೆದಿವೆ ಎಂದು ಸಂಶೋಧನಾ ಸಮಿತಿ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಇಂಡಿಯಾ ಹೇಟ್ ಲ್ಯಾಬ್ ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳ ಆನ್‌ಲೈನ್ ಚಟುವಟಿಕೆಯನ್ನು  ಟ್ರ್ಯಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ದ್ವೇಷ ಭಾಷಣದ ವೀಡಿಯೊಗಳನ್ನು ಪರಿಶೀಲಿಸಿದೆ ಮತ್ತು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಪ್ರತ್ಯೇಕ ಘಟನೆಗಳ ದಾಖಲೆಯನ್ನು ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಿದೆ.

ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಆಗಸ್ಟ್‌ನಿಂದ ನವೆಂಬರ್‌ವರೆಗಿನ ಅವಧಿಯಲ್ಲಿ ದ್ವೇಷದ ಭಾಷಣದ ಘಟನೆಗಳು ಉತ್ತುಂಗಕ್ಕೇರಿದವು ಎಂದು ವರದಿಯು ಗಮನಿಸಿದೆ. ಮಹಾರಾಷ್ಟ್ರ (118), ಉತ್ತರ ಪ್ರದೇಶ (104), ಮಧ್ಯಪ್ರದೇಶ (65), ರಾಜಸ್ಥಾನ (64), ಹರಿಯಾಣ (48), ಉತ್ತರಾಖಂಡ (41), ಕರ್ನಾಟಕ (40), ಗುಜರಾತ್ (31), ಛತ್ತೀಸ್‌ಗಢ (21), ಮತ್ತು ಬಿಹಾರ ( 18) ದ್ವೇಷದ ಭಾಷಣದ ಘಟನೆಯನ್ನು ವರದಿ ಮಾಡಿದೆ. ಇದರಲ್ಲಿ ಕರ್ನಾಟಕವನ್ನು ಹೊರತುಪಡಿಸಿ ಬೇರೆ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ.

ವರದಿಯ ಪ್ರಕಾರ, ಸುಮಾರು 75 ಪ್ರತಿಶತ ಅಥವಾ 498 ಘಟನೆಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ರಾಜ್ಯಗಳಲ್ಲಿ ನಡೆದಿವೆ. ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚು ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯದಲ್ಲಿ ಸರಕಾರದ ಮುಸ್ಲಿಂ ವಿರೋಧಿ ನಿಲುವುಗಳು ಹಲವು ಬಾರಿ ಸಾರ್ವಜನಿಕಗೊಂಡಿದ್ದವು, ಮುಸ್ಲಿಮರ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ, ಮುಸ್ಲಿಮರ ಮೇಲಿನ ಕಾನೂನು ದೌರ್ಜನ್ಯ, ಮನೆಗಳ ಧ್ವಂಸ, ಎನ್‌ಕೌಂಟರ್‌ ಪ್ರಕರಣಗಳು ಈ ರಾಜ್ಯಗಳಲ್ಲಿ ಹೆಚ್ಚು ವರದಿಯಾಗಿದ್ದವು.

ಮುಸ್ಲಿಮರ ವಿರುದ್ಧ ಹಿಂಸಾಚಾರದ ನೇರ ಕರೆಯನ್ನು ಕೆಲವು ದ್ವೇಷ ಭಾಷಣಗಳು ಒಳಗೊಂಡಿವೆ, ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್ ಮತ್ತು ಜನಸಂಖ್ಯೆಯ ಜಿಹಾದ್‌ ಇದರಲ್ಲಿ ಒಳಗೊಂಡಿವೆ. ಸುಮಾರು 25% ಜನರು ಮುಸ್ಲಿಂ ಆರಾಧನಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣಗಳನ್ನು ಮಾಡಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್‌ ಸಶಸ್ತ್ರ ಗುಂಪು ಮತ್ತು ಇಸ್ರೇಲ್‌ ನಡುವೆ ಯುದ್ಧ ಘೋಷಣೆ ಬಳಿಕ ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷದ ಭಾಷಣದ 41 ಘಟನೆಗಳು ವರದಿಯಾಗಿದೆ. ಅಂದರೆ 2023ರ ಕೊನೆಯ ಮೂರು ತಿಂಗಳಲ್ಲಿ ಸುಮಾರು 20 ಪ್ರತಿ ಶತದಷ್ಟು ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದೆ ಎಂದು ಸಂಶೋಧನೆಯು ಉಲ್ಲೇಖಿಸಿದೆ. ಅಕ್ಟೋಬರ್ 7ರ ಇಸ್ರೇಲ್‌ ಯುದ್ಧ ಘೋಷಣೆ ದಿನ ಮತ್ತು ಡಿಸೆಂಬರ್ 31ರ ನಡುವೆ ನಡೆದ 193 ದ್ವೇಷ ಭಾಷಣ ಘಟನೆಗಳಲ್ಲಿ, ಭಾರತೀಯ ಮುಸ್ಲಿಮರ ಬಗ್ಗೆ ಭಯ ಮತ್ತು ದ್ವೇಷವನ್ನು ಹೆಚ್ಚಿಸಲು ಯುದ್ಧವನ್ನು ಬಳಸಿಕೊಳ್ಳಲಾಗಿದೆ. ಮುಸ್ಲಿಮರು ಸ್ವಾಭಾವಿಕವಾಗಿ ಹಿಂಸಾತ್ಮಕವಾಗಿದ್ದಾರೆ ಮತ್ತು ಹಿಂದೂಗಳಿಗೆ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ಬಲಪಂಥೀಯ ನಾಯಕರು ಪ್ರತಿಪಾದಿಸುತ್ತಾ ಬಂದಿದ್ದಾರೆ. ಜುಲೈ 2023ರಲ್ಲಿ ಹರಿಯಾಣದ ನುಹ್ ಮತ್ತು ಜೂನ್ 2023ರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಹಿಂಸಾಚಾರವು ಈ ರೀತಿಯ ಪ್ರತಿಪಾದನೆಯಿಂದ ಉಂಟಾಗಿದೆ ಎನ್ನುವುದನ್ನು ಗಮನಿಸಬಹುದಾಗಿದೆ.

ಸಂಶೋಧನೆಯ ವೇಳೆ ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ, ಜನಾಂಗ ಅಥವಾ ಲಿಂಗದ ಆಧಾರದ ಮೇಲೆ ವ್ಯಕ್ತಿ ಅಥವಾ ಗುಂಪಿನ ಬಗ್ಗೆ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯ ಬಳಕೆ ಎಂಬ ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ ದ್ವೇಷ ಭಾಷಣವನ್ನು ಪತ್ತೆಹಚ್ಚಲಾಗಿದೆ ಎಂದು ಸಂಶೋಧನೆಯು ಬಹಿರಂಗಪಡಿಸಿದೆ. 2014ರಲ್ಲಿ ಪ್ರಧಾನಿಯಾಗಿ ಮೋದಿ ಅಧಿಕಾರವನ್ನು ಸ್ವೀಕರಿಸಿದ ಬಳಿಕ ಮೋದಿ ಆಡಳಿತದಲ್ಲಿ ಮುಸ್ಲಿಮರ ಮೇಲೆ ಅನ್ಯಾಯ ನಡೆಸಲಾಗಿದೆ ಎಂದು ಹೇಳಿದೆ.

ಅವರು UN ಮಾನವ ಹಕ್ಕುಗಳ ಕಚೇರಿ ಮೂಲಭೂತವಾಗಿ ತಾರತಮ್ಯ ಎಂದು ಕರೆಯುವ 2019ರ ಪೌರತ್ವ ಕಾನೂನು, ಮತಾಂತರ-ವಿರೋಧಿ ಶಾಸನ ಮತ್ತು ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು ಸೇರಿದಂತೆ ವಿವಿಧ ವಿಚಾರಗಳನ್ನು ಉಲ್ಲೇಖಿಸಲಾಗಿದೆ. ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಮುಸ್ಲಿಂ ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಸಮಿತಿಯ ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...