Homeಮುಖಪುಟ75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಮಾರ್ಚ್ 2 ರಂದು ಹರ್ಯಾಣ ಸರ್ಕಾರ ಕೂಡಾ ಇಂತಹದ್ದೇ ನಿರ್ಧಾರವನ್ನು ತೆಗೆದುಕೊಂಡಿತ್ತು.

- Advertisement -
- Advertisement -

ಹರಿಯಾಣವು ರಾಜ್ಯದ ನಿವಾಸಗಳಿಗೆ ಖಾಸಗಿ ವಲಯದ ಕೈಗಾರಿಕೆಗಳಲ್ಲಿ 75% ರಷ್ಟು ಮೀಸಲಾತಿ ನೀಡುವ ನೀತಿಯನ್ನು ಅಂಗೀಕರಿಸಿದ ಕೆಲವೆ ದಿನಗಳ ಅಂತರದಲ್ಲಿ, ಜಾರ್ಖಂಡ್‌ ಸಚಿವ ಸಂಪುಟ ಕೂಡಾ 30 ಸಾವಿರ ವೇತನದವರೆಗಿನ ಖಾಸಗಿ ವಲಯದ 75% ಉದ್ಯೋಗಗಳು ಸ್ಥಳೀಯ ಅಭ್ಯರ್ಥಿಗಳಿಗೆ ಮಾತ್ರ ನೀಡಬೇಕು ಎಂಬ ನೀತಿಯನ್ನು ಶುಕ್ರವಾರ ಅಂಗೀಕರಿಸಿದೆ.

ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ ಜಾರ್ಖಂಡ್ ಅಸೆಂಬ್ಲಿಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಇದನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಎನ್ನಲಾಗಿದೆ.

“ಕ್ಯಾಬಿನೆಟ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಭಾವಿಸಲಾಗಿದೆ, ಕೆಲವು ವಿಧಾನಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ. ಮಾರ್ಚ್ 17 ರಂದು ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಈ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ” ಎಂದು ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ TNIE ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಖಾತರಿಪಡಿಸುವ ನೀತಿಯನ್ನು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಹಲವಾರು ಸಂದರ್ಭಗಳಲ್ಲಿ ಇದರ ಬಗ್ಗೆ ಸುಳಿವು ನೀಡಿದ್ದರು. ವಿಶೇಷವೆಂದರೆ, ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ ಆದ್ಯತೆ ನೀಡುವ ಪ್ರಸ್ತಾಪವು 2019 ರ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ದ ಪ್ರಣಾಳಿಕೆಯ ಒಂದು ಭಾಗವಾಗಿತ್ತು. ಇದೀಗ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ನೀತಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಲಾಕ್‌ಡೌನ್ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಯುವ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ಹಿಂತಿರುಗಿದ್ದರು. ಈ ಸಮಯದಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ರಾಜ್ಯದ ನಿರುದ್ಯೋಗ ದರವು 59.2 ಕ್ಕೆ ಏರಿತ್ತು. ಈ ದರವು 2021 ರ ಜನವರಿಯಲ್ಲಿ 11.3% ಕ್ಕೆ ಇಳಿದಿದೆ ಎಂದು ಆರ್ಥಿಕ ಸಮೀಕ್ಷೆ ಬಹಿರಂಗಪಡಿಸಿದೆ. ಜನವರಿ 2020 ರಲ್ಲಿ ರಾಜ್ಯದ ನಿರುದ್ಯೋಗ ದರವು 10.6% ಆಗಿತ್ತು.

ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...