Homeದಲಿತ್ ಫೈಲ್ಸ್ಸ್ವಾತಂತ್ರ್ಯದ ಅಮೃತ ಮಹೋತ್ಸವ: ದಲಿತರ ಸ್ಥಿತಿಗತಿಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸವ: ದಲಿತರ ಸ್ಥಿತಿಗತಿಗಳು

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದವು. ದಲಿತ ಚಳವಳಿಯ ಸ್ಥಿತಿಗತಿ ಮತ್ತು ದಲಿತರ ಪರ್ಯಾಯ ರಾಜಕೀಯ ನಿಲುವುಗಳನ್ನು ನಾವು ಮರುಅವಲೋಕಿಸಿಕೊಳ್ಳಲು ಇದು ಸಕಾಲ ಅನಿಸುತ್ತದೆ. ಭಾರತವೆಂಬ ಮುಚ್ಚಲ್ಪಟ್ಟ ಸಮಾಜದೊಳಗೆ ಸಾವಿರಾರು ವರ್ಷಗಳಿಂದ ಹಲವು ರೀತಿಯ ದಬ್ಬಾಳಿಕೆ, ತಾರತಮ್ಯ ಮತ್ತು ಶೋಷಣೆಗಳನ್ನು ಅನುಭವಿಸಿದ ಅಸ್ಪೃಶ್ಯ ಜಾತಿಗಳ ಸ್ಥಿತಿಗಳಲ್ಲಿ ಇಂದೇನಾದರೂ ಬದಲಾವಣೆ ಆಗಿದೆಯೇ ಎಂಬುದನ್ನು ಅವಲೋಕಿಸಿದರೆ, ದಬ್ಬಾಳಿಕೆ-ತಾರತಮ್ಯ-ಶೋಷಣೆಗಳ ಸ್ವರೂಪ ಬದಲಾಗಿದೆಯೇ ಹೊರತು ಸ್ಥಿತಿ-ಗತಿ ಹಾಗೆಯೇ ಇರುವುದನ್ನು ನಾವು ಗಮನಿಸಬಹುದು. ಜಾತಿ ವ್ಯವಸ್ಥೆ ತನ್ನ ಸ್ವರೂಪವನ್ನು ಸಮಯಕ್ಕೆ ತಕ್ಕಂತೆ ಬದಲಿಸಿಕೊಂಡು, ಇವತ್ತಿಗೂ ನಿರಂತರವಾಗಿ ಮುಂದುವರಿಯುತ್ತಿರುವುದನ್ನು ನಾವು ಕಾಣಬಹುದು. ಈ ಸಂದರ್ಭದಲ್ಲಿ ಶಿವರಾಮ ಕಾರಂತರ ಪ್ರಸಿದ್ಧ ಕಾದಂಬರಿಯಾದ ಚೋಮನ ದುಡಿಯಲ್ಲಿ ಬರುವ ದಲಿತರ ಬದುಕಿನ ಚಿತ್ರಣ ನೆನಪಿಗೆ ಬರುತ್ತಿದೆ. 1931ರಲ್ಲಿ ಪ್ರಕಟಗೊಂಡ ಈ ಕೃತಿ ಕನ್ನಡದಲ್ಲಿ ಬಹುಚರ್ಚಿತವಾದ ಕಾದಂಬರಿಯಾಗಿದ್ದು ಅಸ್ಪೃಶ್ಯ ಸಮುದಾಯದ ಚೋಮನನ್ನು ಕೇಂದ್ರಪಾತ್ರದಲ್ಲಿಟ್ಟು ನಿರೂಪಿಸಲ್ಪಟ್ಟಿರುವ ಕಥನವಿದೆ; ಈ ಕಥನದಲ್ಲಿ ಸ್ವಾತಂತ್ರ್ಯಪೂರ್ವದ ದಲಿತರ ದಾರುಣ ಬದುಕನ್ನು ಕಾಣಬಹುದಾಗಿದೆ. ಆ ನಿಟ್ಟಿನಲ್ಲಿ ನೋಡಿದರೆ ಚೋಮನದುಡಿ ಏಕಕಾಲದಲ್ಲಿ ಕಾದಂಬರಿಯೂ ಹೌದು, ಹಾಗೆಯೇ ಭಾರತೀಯ ಸಾಮಾಜಿಕ ಚರಿತ್ರೆಯು ಹೌದು; ಏಕೆಂದರೆ ಸ್ವಾತಂತ್ರ್ಯಪೂರ್ವದ ಅಸ್ಪೃಶ್ಯರ ಬದುಕನ್ನು ಕಾದಂಬರಿ ಪರಿಣಾಮಕಾರಿಯಾಗಿ ಚಿತ್ರಿಸುತ್ತದೆ. ಚೋಮನ ಬದುಕೇ ಅಂದಿನ ನಿಜವಾದ ದಲಿತರ ಬದುಕಾಗಿತ್ತು ಎಂಬುದರಮಟ್ಟಿಗೆ ದಲಿತರ ಜೀವನ ಈ ಕಾದಂಬರಿಯಲ್ಲಿ ಅಭಿವ್ಯಕ್ತಗೊಂಡಿದೆ. ಚೋಮ ಒಂದು ತುಂಡು ಭೂಮಿಗಾಗಿ ತನ್ನ ದಣಿಯ ಮುಂದೆ ಎಷ್ಟೇ ಅಧೀರನಾಗಿ ಮತ್ತು ದೈನ್ಯತೆಯಿಂದ ಕೇಳಿಕೊಂಡರೂ ಅದು ಸಾಧ್ಯವಾಗದ ಸ್ಥಿತಿ ಒಂದೆಡೆಯಾದರೆ, ಹೀಗೆ ಭೂಮಿ ಇಲ್ಲದ ನೂರಾರು ಕುಟುಂಬಗಳು ಕೂಲಿ ಕಾರ್ಮಿಕರಾಗಿ ಕಾಫಿ ಎಸ್ಟೇಟ್‌ಗೆ ವಲಸೆ ಹೋಗಿ ಆಳುಗಳಾಗಿ ದುಡಿಯುವ ಮತ್ತೊಂದು ಚಿತ್ರಣ ಕೂಡ ಈ ಕಾದಂಬರಿಯಲ್ಲಿದೆ. ಚೋಮನ ಪಾತ್ರ ಪ್ರಮುಖವಾಗಿ ನಮ್ಮೆದುರಿಗೆ ನಿಂತರೂ ಅವನಂತೆ ಇರುವ ಸಾವಿರಾರು ಕುಟುಂಬಗಳ ಚಿತ್ರಣ ಚೋಮನ ಕುಟುಂಬದ ನೆರಳಿನಂತೆ ನಮಗೆ ಇಲ್ಲಿ ಭಾಸವಾಗುತ್ತದೆ. ಅದೇ ರೀತಿ ಚೋಮನ ಬದುಕು ಮತ್ತು ಅವನನ್ನು ಈ ಸಮಾಜ ನಡೆಸಿಕೊಳ್ಳುವ ಅಂಶವನ್ನು ಗಮನಿಸೋಣ; ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿಹೋಗುವ ಚೋಮನ ಕಿರಿಯ ಮಗನನ್ನು ರಕ್ಷಿಸಲು ಒಬ್ಬ ಬ್ರಾಹ್ಮಣ ಸಮುದಾಯದ ಯುವಕ ಮುಂದಾದಾಗ ಅಲ್ಲೇ ನಡೆದುಹೋಗುತ್ತಿದ್ದ ಮತ್ತೊಬ್ಬ ಬ್ರಾಹ್ಮಣ ಅವನನ್ನು ಮುಟ್ಟಬಾರದು, ಅವನು ಅಸ್ಪೃಶ್ಯ ಎನ್ನುತ್ತಾನೆ. ಆಗ ಆ ಯುವಕ ಬೆಚ್ಚಿದವನಂತೆ ನಿಂತು ಚೋಮನ ಮಗನನ್ನು ರಕ್ಷಿಸಲು ಹೋಗುವುದಿಲ್ಲ. ಎರಡನೆ ಘಟನೆ; ಚೋಮ ಗೇಣಿಗೆ ಭೂಮಿ ಕೊಡುವಂತೆ ತನ್ನ ದಣಿಗಳಲ್ಲಿ ವಿನಂತಿಸಿಕೊಂಡಾಗ ದಣಿ ಸಂಕಪ್ಪಯ್ಯನವರು ತಮ್ಮ ತಾಯಿಯವರ ಅಭಿಪ್ರಾಯವನ್ನು ಕೇಳುತ್ತಾರೆ. ಆಗ ಅವರ ತಾಯಿ ನೀಡುವ ಪ್ರತಿಕ್ರಿಯೆ: “ಏನು ಆ ಹೊಲೆಯನಿಗೆ ಅಷ್ಟು ಸೊಕ್ಕು ಬಂತೆ”, ಹೀಗೆ ಮಗನಿಗೆ ಹೇಳುತ್ತಾ, “ನೋಡು ಇದುವರೆಗೂ ಘಟ್ಟದ ಮೇಲೆ ಯಾರೂ ಅಸ್ಪೃಶ್ಯನಿಗೆ ಭೂಮಿ ಗೇಣಿಗೆ ಕೊಟ್ಟ ಉದಾಹರಣೆಗಳಿಲ್ಲ. ನೀನು ಅಸ್ಪೃಶ್ಯನಿಗೆ ಭೂಮಿಯನ್ನು ಗೇಣಿಗೆ ಕೊಟ್ಟೆ ಎಂಬ ಅಪಕೀರ್ತಿಗೆ ಒಳಗಾಗಬೇಡ” ಎಂದು ತಾಯಿ ಎಚ್ಚರಿಸುತ್ತಾಳೆ. ಈ ಮಾತನ್ನು ಕೇಳುವ ಸಂಕಪ್ಪಯ್ಯ, “ನೋಡು ಚೋಮ ನಮ್ಮ ತಾಯಿ ಇರುವದರೆಗೂ ನಿನಗೆ ಭೂಮಿ ಕೊಡಲು ಸಾಧ್ಯವಾಗುವುದಿಲ್ಲ” ಎನ್ನುತ್ತಾನೆ. ಸ್ವಾತಂತ್ರ್ಯಪೂರ್ವದ ಈ ಸ್ಥಿತಿ ಇಂದಿಗೂ ಬದಲಾಗದೆ ಇರುವುದು ದುರಂತ.

ಇತ್ತೀಚಿಗೆ ಕೋಲಾರ ಜಿಲ್ಲೆಯ ಟೇಕಲ್ ಹೋಬಳಿಯ ಹುಳ್ಳೇರಹಳ್ಳಿ ಗ್ರಾಮದಲ್ಲಿ ಒಬ್ಬ ದಲಿತ ಬಾಲಕ ದೇವರ ಕೋಲನ್ನು ಮುಟ್ಟಿದ ಎಂಬ ಕಾರಣಕ್ಕೆ ಆ ಬಾಲಕನ ಕುಟುಂಬಕ್ಕೆ ಬಹಿಷ್ಕಾರ ಹಾಕಿ, ದಂಡ ವಿಧಿಸಲಾಯಿತು; ಈ ಮನಸ್ಥಿತಿಗೂ ಚೋಮನ ಮಗ ನೀರಿನಲ್ಲಿ ಕೊಚ್ಚಿ ಹೋಗುವಾಗ ಅವನು ಅಸ್ಪೃಶ್ಯ, ಅವನನ್ನು ಮುಟ್ಟಬಾರದು ಎಂದು ಆ ಮಗುವಿನ ಸಾವಿಗೆ ಕಾರಣವಾದ ಮನಸ್ಥಿತಿಗೂ ಅಂತಹ ಯಾವ ವ್ಯತ್ಯಾಸಗಳೂ ಇಲ್ಲ. ಇನ್ನು ಭೂಮಿಯ ಪ್ರಶ್ನೆ ಬಂದಾಗ ಚೋಮನಂತೆ ಇವತ್ತಿಗೂ ಗೇಣು ಭೂಮಿಗಾಗಿ ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಪರದಾಡುತ್ತಿರುವ ಕೋಟ್ಯಂತರ ಚೋಮರನ್ನು ಕಾಣಬಹುದು. ಪ್ರಜಾಪ್ರಭುತ್ವ ವ್ಯವಸ್ಥೆ ಬಂದು ಏಳು ದಶಕಗಳೇ ಕಳೆದುಹೋದರೂ ಅಸ್ಪೃಶ್ಯ ಜನಾಂಗಗಳ ಬದುಕುಗಳಲ್ಲಿ ಯಾವ ಮಟ್ಟದ ಸುಧಾರಣೆಗಳು ಸಾಧ್ಯವಾಗಿವೆ ಎಂಬುದು ಇವತ್ತಿಗೂ ಪ್ರಶ್ನೆಗಳಾಗಿಯೇ ಉಳಿದಿವೆ.

ಅಂದ ಮಾತ್ರಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಶೋಷಿತ ಸಮುದಾಯಗಳ ಬದುಕಿಗೆ ಆಸರೆಯಾಗಿಲ್ಲವೇ ಎಂಬ ಪ್ರಶ್ನೆಯು ಬರುತ್ತದೆ; ಸಂವಿಧಾನ ಮತ್ತು ಪ್ರಜಾಪ್ರಭುತ್ವ ಈ ಸ್ಥಗಿತ ಸಮಾಜವು ಚಲನೆಗೊಳ್ಳಲು ನೆರವಾಗಿವೆ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಆದರೆ ದಲಿತರ ಮೇಲೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮಾತ್ರ ದಿನೇದಿನೇ ಹೆಚ್ಚಾಗುತ್ತಲೇ ಇವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ದಲಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆ ಆದ ಪ್ರಮಾಣ ಅತ್ಯಂತ ಕಡಿಮೆ ಎಂಬುದು ದುರಂತ ಸಂಗತಿ. ಇವತ್ತಿಗೂ ಪತ್ರಿಕೆಗಳಲ್ಲಿ ಮತ್ತು ಇತರ ಸುದ್ದಿ ಮಾಧ್ಯಮಗಳಲ್ಲಿ ದಿನಕ್ಕೊಂದಾದರು ದಲಿತರ ಮೇಲಿನ ದೌರ್ಜನ್ಯ, ಬಹಿಷ್ಕಾರ, ದಲಿತ ಹೆಣ್ಣು ಮಕ್ಕಳನ್ನು ಮೇಲೆ ಅತ್ಯಾಚಾರ ಮುಂತಾದ ಸುದ್ದಿಗಳು ಇದ್ದೇ ಇರುತ್ತವೆ. ದಲಿತ ಸಮುದಾಯಗಳ ವ್ಯಕ್ತಿಗಳ ಮೇಲಿನ ಈ ದೌರ್ಜನ್ಯ, ಶೋಷಣೆ ಮತ್ತು ದಬ್ಬಾಳಿಕೆಗಳನ್ನು ತಡೆಯುವಲ್ಲಿ ಸರ್ಕಾರಗಳಿಗಾಗಲೀ, ದಲಿತ ಚಳವಳಿಗಳಿಗಾಗಲೀ ಏಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾವೆಲ್ಲರೂ ಅವಲೋಕನ ಮಾಡಿಕೊಳ್ಳಬೇಕಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಕರ್ನಾಟಕದ ದಲಿತ ಚಳವಳಿಗಳು ಇಲ್ಲಿನ ದಮನಿತ ಜನಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿರುವುದು ನಿಜವೇ ಆದರೂ ದಲಿತರನ್ನು ರಾಜಕೀಯವಾಗಿ ಪ್ರಬಲಗೊಳಿಸುವಲ್ಲಿ ಯಶಸ್ವಿಯಾಗಿಲ್ಲ. ಇದಕ್ಕಿಂತ ಮುಖ್ಯವಾದ ಸಂಗತಿ, ದಲಿತ ಚಳವಳಿ ಬದಲಾದ ಕಾಲಘಟ್ಟಕ್ಕೆ ಬೇಕಿರುವ ಹೊಸ ನಾಯಕತ್ವವನ್ನು ಬೆಳೆಸದಿರುವುದರ ಜೊತೆಗೆ ಚಳವಳಿಯಲ್ಲಿ ಬೆಳೆದ ನಾಯಕತ್ವದ ಬಿಕ್ಕಟ್ಟು ಮತ್ತು ಉಪಜಾತಿಗಳ ಸಂಘರ್ಷಗಳು ಈ ಚಳವಳಿಯ ಪರಿಣಾಮವನ್ನು ಕುಂಠಿಸುವುದಕ್ಕೆ ಕಾರಣವಾದವು. ಇವೆಲ್ಲವುದರಿಂದ ದಲಿತರ ಬಗೆಗಿನ ನೈಜ ಕಾಳಜಿ ಹಿನ್ನೆಲೆಗೆ ಸರಿದಿರುವುದು ನಮ್ಮೆಲ್ಲರಿಗೂ ತಿಳಿಯದಿರುವ ವಿಚಾರವೇನಲ್ಲ.

ಇವೆಲ್ಲವೂ ಚಳವಳಿಯ ಧ್ವನಿ ಕಡಿಮೆಯಾಗಲು ಮುಖ್ಯ ಕಾರಣವಾಗಿದ್ದರೆ, ಇದರ ದುಷ್ಪರಿಣಾಮಗಳು ನೇರವಾಗಿ ದಲಿತ ಸಮುದಾಯದ ಮೇಲೆ ಆಗುತ್ತಿದ್ದು, ದೌರ್ಜನ್ಯಗಳು ಹೆಚ್ಚಾಗಲೂ ಕಾರಣವಾಗುತ್ತಿದೆ. ಈ ಸಂಗತಿಗಳನ್ನು ಗಂಭೀರವಾಗಿ ತೆಗೆದುಕೊಂಡು ದಲಿತ ಚಳವಳಿ ಕಾಲಕ್ಕೆ ತಕ್ಕಂತೆ ತನ್ನ ಸ್ವರೂಪವನ್ನು ಬದಲಿಸಿಕೊಂಡು ಮರುರೂಪುಗೊಳ್ಳಬೇಕಿದೆ ಹಾಗೂ ಅದರ ಜೊತೆಗೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಪ್ರಬಲಗೊಳ್ಳಬೇಕಾದ ಅನಿವಾರ್ಯತೆಯ ಕಾಲದಲ್ಲಿ ನಾವಿದ್ದೇವೆ. ಇಲ್ಲದಿದ್ದರೆ ದಲಿತರ ಅಮೂಲ್ಯವಾದ ಮತಗಳು ಎಂದಿನಂತೆ ಉಳ್ಳವರ ಸರಕಾಗಿ ದಲಿತರ ಶತಮಾನಗಳ ಸ್ಥಿತಿ-ಗತಿ ಯಥಾಸ್ಥಿತಿಯಾಗಿಯೇ ಉಳಿದುಕೊಳ್ಳಲಿದೆ.

ಡಾ. ನಾರಾಯಣ್ ಕ್ಯಾಸಂಬಳ್ಳಿ

ಡಾ. ನಾರಾಯಣ್ ಕ್ಯಾಸಂಬಳ್ಳಿ
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರು. ಹಲವು ಚಳವಳಿ ಮತ್ತು ಹೋರಾಟಗಳ ಸಂಗಾತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...