Homeದಲಿತ್ ಫೈಲ್ಸ್ಸ್ವಾತಂತ್ರ್ಯದ ಅಮೃತ ಮಹೋತ್ಸವ: ದಲಿತರ ಸ್ಥಿತಿಗತಿಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸವ: ದಲಿತರ ಸ್ಥಿತಿಗತಿಗಳು

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದವು. ದಲಿತ ಚಳವಳಿಯ ಸ್ಥಿತಿಗತಿ ಮತ್ತು ದಲಿತರ ಪರ್ಯಾಯ ರಾಜಕೀಯ ನಿಲುವುಗಳನ್ನು ನಾವು ಮರುಅವಲೋಕಿಸಿಕೊಳ್ಳಲು ಇದು ಸಕಾಲ ಅನಿಸುತ್ತದೆ. ಭಾರತವೆಂಬ ಮುಚ್ಚಲ್ಪಟ್ಟ ಸಮಾಜದೊಳಗೆ ಸಾವಿರಾರು ವರ್ಷಗಳಿಂದ ಹಲವು ರೀತಿಯ ದಬ್ಬಾಳಿಕೆ, ತಾರತಮ್ಯ ಮತ್ತು ಶೋಷಣೆಗಳನ್ನು ಅನುಭವಿಸಿದ ಅಸ್ಪೃಶ್ಯ ಜಾತಿಗಳ ಸ್ಥಿತಿಗಳಲ್ಲಿ ಇಂದೇನಾದರೂ ಬದಲಾವಣೆ ಆಗಿದೆಯೇ ಎಂಬುದನ್ನು ಅವಲೋಕಿಸಿದರೆ, ದಬ್ಬಾಳಿಕೆ-ತಾರತಮ್ಯ-ಶೋಷಣೆಗಳ ಸ್ವರೂಪ ಬದಲಾಗಿದೆಯೇ ಹೊರತು ಸ್ಥಿತಿ-ಗತಿ ಹಾಗೆಯೇ ಇರುವುದನ್ನು ನಾವು ಗಮನಿಸಬಹುದು. ಜಾತಿ ವ್ಯವಸ್ಥೆ ತನ್ನ ಸ್ವರೂಪವನ್ನು ಸಮಯಕ್ಕೆ ತಕ್ಕಂತೆ ಬದಲಿಸಿಕೊಂಡು, ಇವತ್ತಿಗೂ ನಿರಂತರವಾಗಿ ಮುಂದುವರಿಯುತ್ತಿರುವುದನ್ನು ನಾವು ಕಾಣಬಹುದು. ಈ ಸಂದರ್ಭದಲ್ಲಿ ಶಿವರಾಮ ಕಾರಂತರ ಪ್ರಸಿದ್ಧ ಕಾದಂಬರಿಯಾದ ಚೋಮನ ದುಡಿಯಲ್ಲಿ ಬರುವ ದಲಿತರ ಬದುಕಿನ ಚಿತ್ರಣ ನೆನಪಿಗೆ ಬರುತ್ತಿದೆ. 1931ರಲ್ಲಿ ಪ್ರಕಟಗೊಂಡ ಈ ಕೃತಿ ಕನ್ನಡದಲ್ಲಿ ಬಹುಚರ್ಚಿತವಾದ ಕಾದಂಬರಿಯಾಗಿದ್ದು ಅಸ್ಪೃಶ್ಯ ಸಮುದಾಯದ ಚೋಮನನ್ನು ಕೇಂದ್ರಪಾತ್ರದಲ್ಲಿಟ್ಟು ನಿರೂಪಿಸಲ್ಪಟ್ಟಿರುವ ಕಥನವಿದೆ; ಈ ಕಥನದಲ್ಲಿ ಸ್ವಾತಂತ್ರ್ಯಪೂರ್ವದ ದಲಿತರ ದಾರುಣ ಬದುಕನ್ನು ಕಾಣಬಹುದಾಗಿದೆ. ಆ ನಿಟ್ಟಿನಲ್ಲಿ ನೋಡಿದರೆ ಚೋಮನದುಡಿ ಏಕಕಾಲದಲ್ಲಿ ಕಾದಂಬರಿಯೂ ಹೌದು, ಹಾಗೆಯೇ ಭಾರತೀಯ ಸಾಮಾಜಿಕ ಚರಿತ್ರೆಯು ಹೌದು; ಏಕೆಂದರೆ ಸ್ವಾತಂತ್ರ್ಯಪೂರ್ವದ ಅಸ್ಪೃಶ್ಯರ ಬದುಕನ್ನು ಕಾದಂಬರಿ ಪರಿಣಾಮಕಾರಿಯಾಗಿ ಚಿತ್ರಿಸುತ್ತದೆ. ಚೋಮನ ಬದುಕೇ ಅಂದಿನ ನಿಜವಾದ ದಲಿತರ ಬದುಕಾಗಿತ್ತು ಎಂಬುದರಮಟ್ಟಿಗೆ ದಲಿತರ ಜೀವನ ಈ ಕಾದಂಬರಿಯಲ್ಲಿ ಅಭಿವ್ಯಕ್ತಗೊಂಡಿದೆ. ಚೋಮ ಒಂದು ತುಂಡು ಭೂಮಿಗಾಗಿ ತನ್ನ ದಣಿಯ ಮುಂದೆ ಎಷ್ಟೇ ಅಧೀರನಾಗಿ ಮತ್ತು ದೈನ್ಯತೆಯಿಂದ ಕೇಳಿಕೊಂಡರೂ ಅದು ಸಾಧ್ಯವಾಗದ ಸ್ಥಿತಿ ಒಂದೆಡೆಯಾದರೆ, ಹೀಗೆ ಭೂಮಿ ಇಲ್ಲದ ನೂರಾರು ಕುಟುಂಬಗಳು ಕೂಲಿ ಕಾರ್ಮಿಕರಾಗಿ ಕಾಫಿ ಎಸ್ಟೇಟ್‌ಗೆ ವಲಸೆ ಹೋಗಿ ಆಳುಗಳಾಗಿ ದುಡಿಯುವ ಮತ್ತೊಂದು ಚಿತ್ರಣ ಕೂಡ ಈ ಕಾದಂಬರಿಯಲ್ಲಿದೆ. ಚೋಮನ ಪಾತ್ರ ಪ್ರಮುಖವಾಗಿ ನಮ್ಮೆದುರಿಗೆ ನಿಂತರೂ ಅವನಂತೆ ಇರುವ ಸಾವಿರಾರು ಕುಟುಂಬಗಳ ಚಿತ್ರಣ ಚೋಮನ ಕುಟುಂಬದ ನೆರಳಿನಂತೆ ನಮಗೆ ಇಲ್ಲಿ ಭಾಸವಾಗುತ್ತದೆ. ಅದೇ ರೀತಿ ಚೋಮನ ಬದುಕು ಮತ್ತು ಅವನನ್ನು ಈ ಸಮಾಜ ನಡೆಸಿಕೊಳ್ಳುವ ಅಂಶವನ್ನು ಗಮನಿಸೋಣ; ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿಹೋಗುವ ಚೋಮನ ಕಿರಿಯ ಮಗನನ್ನು ರಕ್ಷಿಸಲು ಒಬ್ಬ ಬ್ರಾಹ್ಮಣ ಸಮುದಾಯದ ಯುವಕ ಮುಂದಾದಾಗ ಅಲ್ಲೇ ನಡೆದುಹೋಗುತ್ತಿದ್ದ ಮತ್ತೊಬ್ಬ ಬ್ರಾಹ್ಮಣ ಅವನನ್ನು ಮುಟ್ಟಬಾರದು, ಅವನು ಅಸ್ಪೃಶ್ಯ ಎನ್ನುತ್ತಾನೆ. ಆಗ ಆ ಯುವಕ ಬೆಚ್ಚಿದವನಂತೆ ನಿಂತು ಚೋಮನ ಮಗನನ್ನು ರಕ್ಷಿಸಲು ಹೋಗುವುದಿಲ್ಲ. ಎರಡನೆ ಘಟನೆ; ಚೋಮ ಗೇಣಿಗೆ ಭೂಮಿ ಕೊಡುವಂತೆ ತನ್ನ ದಣಿಗಳಲ್ಲಿ ವಿನಂತಿಸಿಕೊಂಡಾಗ ದಣಿ ಸಂಕಪ್ಪಯ್ಯನವರು ತಮ್ಮ ತಾಯಿಯವರ ಅಭಿಪ್ರಾಯವನ್ನು ಕೇಳುತ್ತಾರೆ. ಆಗ ಅವರ ತಾಯಿ ನೀಡುವ ಪ್ರತಿಕ್ರಿಯೆ: “ಏನು ಆ ಹೊಲೆಯನಿಗೆ ಅಷ್ಟು ಸೊಕ್ಕು ಬಂತೆ”, ಹೀಗೆ ಮಗನಿಗೆ ಹೇಳುತ್ತಾ, “ನೋಡು ಇದುವರೆಗೂ ಘಟ್ಟದ ಮೇಲೆ ಯಾರೂ ಅಸ್ಪೃಶ್ಯನಿಗೆ ಭೂಮಿ ಗೇಣಿಗೆ ಕೊಟ್ಟ ಉದಾಹರಣೆಗಳಿಲ್ಲ. ನೀನು ಅಸ್ಪೃಶ್ಯನಿಗೆ ಭೂಮಿಯನ್ನು ಗೇಣಿಗೆ ಕೊಟ್ಟೆ ಎಂಬ ಅಪಕೀರ್ತಿಗೆ ಒಳಗಾಗಬೇಡ” ಎಂದು ತಾಯಿ ಎಚ್ಚರಿಸುತ್ತಾಳೆ. ಈ ಮಾತನ್ನು ಕೇಳುವ ಸಂಕಪ್ಪಯ್ಯ, “ನೋಡು ಚೋಮ ನಮ್ಮ ತಾಯಿ ಇರುವದರೆಗೂ ನಿನಗೆ ಭೂಮಿ ಕೊಡಲು ಸಾಧ್ಯವಾಗುವುದಿಲ್ಲ” ಎನ್ನುತ್ತಾನೆ. ಸ್ವಾತಂತ್ರ್ಯಪೂರ್ವದ ಈ ಸ್ಥಿತಿ ಇಂದಿಗೂ ಬದಲಾಗದೆ ಇರುವುದು ದುರಂತ.

ಇತ್ತೀಚಿಗೆ ಕೋಲಾರ ಜಿಲ್ಲೆಯ ಟೇಕಲ್ ಹೋಬಳಿಯ ಹುಳ್ಳೇರಹಳ್ಳಿ ಗ್ರಾಮದಲ್ಲಿ ಒಬ್ಬ ದಲಿತ ಬಾಲಕ ದೇವರ ಕೋಲನ್ನು ಮುಟ್ಟಿದ ಎಂಬ ಕಾರಣಕ್ಕೆ ಆ ಬಾಲಕನ ಕುಟುಂಬಕ್ಕೆ ಬಹಿಷ್ಕಾರ ಹಾಕಿ, ದಂಡ ವಿಧಿಸಲಾಯಿತು; ಈ ಮನಸ್ಥಿತಿಗೂ ಚೋಮನ ಮಗ ನೀರಿನಲ್ಲಿ ಕೊಚ್ಚಿ ಹೋಗುವಾಗ ಅವನು ಅಸ್ಪೃಶ್ಯ, ಅವನನ್ನು ಮುಟ್ಟಬಾರದು ಎಂದು ಆ ಮಗುವಿನ ಸಾವಿಗೆ ಕಾರಣವಾದ ಮನಸ್ಥಿತಿಗೂ ಅಂತಹ ಯಾವ ವ್ಯತ್ಯಾಸಗಳೂ ಇಲ್ಲ. ಇನ್ನು ಭೂಮಿಯ ಪ್ರಶ್ನೆ ಬಂದಾಗ ಚೋಮನಂತೆ ಇವತ್ತಿಗೂ ಗೇಣು ಭೂಮಿಗಾಗಿ ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಪರದಾಡುತ್ತಿರುವ ಕೋಟ್ಯಂತರ ಚೋಮರನ್ನು ಕಾಣಬಹುದು. ಪ್ರಜಾಪ್ರಭುತ್ವ ವ್ಯವಸ್ಥೆ ಬಂದು ಏಳು ದಶಕಗಳೇ ಕಳೆದುಹೋದರೂ ಅಸ್ಪೃಶ್ಯ ಜನಾಂಗಗಳ ಬದುಕುಗಳಲ್ಲಿ ಯಾವ ಮಟ್ಟದ ಸುಧಾರಣೆಗಳು ಸಾಧ್ಯವಾಗಿವೆ ಎಂಬುದು ಇವತ್ತಿಗೂ ಪ್ರಶ್ನೆಗಳಾಗಿಯೇ ಉಳಿದಿವೆ.

ಅಂದ ಮಾತ್ರಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಶೋಷಿತ ಸಮುದಾಯಗಳ ಬದುಕಿಗೆ ಆಸರೆಯಾಗಿಲ್ಲವೇ ಎಂಬ ಪ್ರಶ್ನೆಯು ಬರುತ್ತದೆ; ಸಂವಿಧಾನ ಮತ್ತು ಪ್ರಜಾಪ್ರಭುತ್ವ ಈ ಸ್ಥಗಿತ ಸಮಾಜವು ಚಲನೆಗೊಳ್ಳಲು ನೆರವಾಗಿವೆ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಆದರೆ ದಲಿತರ ಮೇಲೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮಾತ್ರ ದಿನೇದಿನೇ ಹೆಚ್ಚಾಗುತ್ತಲೇ ಇವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ದಲಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆ ಆದ ಪ್ರಮಾಣ ಅತ್ಯಂತ ಕಡಿಮೆ ಎಂಬುದು ದುರಂತ ಸಂಗತಿ. ಇವತ್ತಿಗೂ ಪತ್ರಿಕೆಗಳಲ್ಲಿ ಮತ್ತು ಇತರ ಸುದ್ದಿ ಮಾಧ್ಯಮಗಳಲ್ಲಿ ದಿನಕ್ಕೊಂದಾದರು ದಲಿತರ ಮೇಲಿನ ದೌರ್ಜನ್ಯ, ಬಹಿಷ್ಕಾರ, ದಲಿತ ಹೆಣ್ಣು ಮಕ್ಕಳನ್ನು ಮೇಲೆ ಅತ್ಯಾಚಾರ ಮುಂತಾದ ಸುದ್ದಿಗಳು ಇದ್ದೇ ಇರುತ್ತವೆ. ದಲಿತ ಸಮುದಾಯಗಳ ವ್ಯಕ್ತಿಗಳ ಮೇಲಿನ ಈ ದೌರ್ಜನ್ಯ, ಶೋಷಣೆ ಮತ್ತು ದಬ್ಬಾಳಿಕೆಗಳನ್ನು ತಡೆಯುವಲ್ಲಿ ಸರ್ಕಾರಗಳಿಗಾಗಲೀ, ದಲಿತ ಚಳವಳಿಗಳಿಗಾಗಲೀ ಏಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾವೆಲ್ಲರೂ ಅವಲೋಕನ ಮಾಡಿಕೊಳ್ಳಬೇಕಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಕರ್ನಾಟಕದ ದಲಿತ ಚಳವಳಿಗಳು ಇಲ್ಲಿನ ದಮನಿತ ಜನಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿರುವುದು ನಿಜವೇ ಆದರೂ ದಲಿತರನ್ನು ರಾಜಕೀಯವಾಗಿ ಪ್ರಬಲಗೊಳಿಸುವಲ್ಲಿ ಯಶಸ್ವಿಯಾಗಿಲ್ಲ. ಇದಕ್ಕಿಂತ ಮುಖ್ಯವಾದ ಸಂಗತಿ, ದಲಿತ ಚಳವಳಿ ಬದಲಾದ ಕಾಲಘಟ್ಟಕ್ಕೆ ಬೇಕಿರುವ ಹೊಸ ನಾಯಕತ್ವವನ್ನು ಬೆಳೆಸದಿರುವುದರ ಜೊತೆಗೆ ಚಳವಳಿಯಲ್ಲಿ ಬೆಳೆದ ನಾಯಕತ್ವದ ಬಿಕ್ಕಟ್ಟು ಮತ್ತು ಉಪಜಾತಿಗಳ ಸಂಘರ್ಷಗಳು ಈ ಚಳವಳಿಯ ಪರಿಣಾಮವನ್ನು ಕುಂಠಿಸುವುದಕ್ಕೆ ಕಾರಣವಾದವು. ಇವೆಲ್ಲವುದರಿಂದ ದಲಿತರ ಬಗೆಗಿನ ನೈಜ ಕಾಳಜಿ ಹಿನ್ನೆಲೆಗೆ ಸರಿದಿರುವುದು ನಮ್ಮೆಲ್ಲರಿಗೂ ತಿಳಿಯದಿರುವ ವಿಚಾರವೇನಲ್ಲ.

ಇವೆಲ್ಲವೂ ಚಳವಳಿಯ ಧ್ವನಿ ಕಡಿಮೆಯಾಗಲು ಮುಖ್ಯ ಕಾರಣವಾಗಿದ್ದರೆ, ಇದರ ದುಷ್ಪರಿಣಾಮಗಳು ನೇರವಾಗಿ ದಲಿತ ಸಮುದಾಯದ ಮೇಲೆ ಆಗುತ್ತಿದ್ದು, ದೌರ್ಜನ್ಯಗಳು ಹೆಚ್ಚಾಗಲೂ ಕಾರಣವಾಗುತ್ತಿದೆ. ಈ ಸಂಗತಿಗಳನ್ನು ಗಂಭೀರವಾಗಿ ತೆಗೆದುಕೊಂಡು ದಲಿತ ಚಳವಳಿ ಕಾಲಕ್ಕೆ ತಕ್ಕಂತೆ ತನ್ನ ಸ್ವರೂಪವನ್ನು ಬದಲಿಸಿಕೊಂಡು ಮರುರೂಪುಗೊಳ್ಳಬೇಕಿದೆ ಹಾಗೂ ಅದರ ಜೊತೆಗೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಪ್ರಬಲಗೊಳ್ಳಬೇಕಾದ ಅನಿವಾರ್ಯತೆಯ ಕಾಲದಲ್ಲಿ ನಾವಿದ್ದೇವೆ. ಇಲ್ಲದಿದ್ದರೆ ದಲಿತರ ಅಮೂಲ್ಯವಾದ ಮತಗಳು ಎಂದಿನಂತೆ ಉಳ್ಳವರ ಸರಕಾಗಿ ದಲಿತರ ಶತಮಾನಗಳ ಸ್ಥಿತಿ-ಗತಿ ಯಥಾಸ್ಥಿತಿಯಾಗಿಯೇ ಉಳಿದುಕೊಳ್ಳಲಿದೆ.

ಡಾ. ನಾರಾಯಣ್ ಕ್ಯಾಸಂಬಳ್ಳಿ

ಡಾ. ನಾರಾಯಣ್ ಕ್ಯಾಸಂಬಳ್ಳಿ
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರು. ಹಲವು ಚಳವಳಿ ಮತ್ತು ಹೋರಾಟಗಳ ಸಂಗಾತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...