Homeದಲಿತ್ ಫೈಲ್ಸ್ಸ್ವಾತಂತ್ರ್ಯದ ಅಮೃತ ಮಹೋತ್ಸವ: ದಲಿತರ ಸ್ಥಿತಿಗತಿಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸವ: ದಲಿತರ ಸ್ಥಿತಿಗತಿಗಳು

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದವು. ದಲಿತ ಚಳವಳಿಯ ಸ್ಥಿತಿಗತಿ ಮತ್ತು ದಲಿತರ ಪರ್ಯಾಯ ರಾಜಕೀಯ ನಿಲುವುಗಳನ್ನು ನಾವು ಮರುಅವಲೋಕಿಸಿಕೊಳ್ಳಲು ಇದು ಸಕಾಲ ಅನಿಸುತ್ತದೆ. ಭಾರತವೆಂಬ ಮುಚ್ಚಲ್ಪಟ್ಟ ಸಮಾಜದೊಳಗೆ ಸಾವಿರಾರು ವರ್ಷಗಳಿಂದ ಹಲವು ರೀತಿಯ ದಬ್ಬಾಳಿಕೆ, ತಾರತಮ್ಯ ಮತ್ತು ಶೋಷಣೆಗಳನ್ನು ಅನುಭವಿಸಿದ ಅಸ್ಪೃಶ್ಯ ಜಾತಿಗಳ ಸ್ಥಿತಿಗಳಲ್ಲಿ ಇಂದೇನಾದರೂ ಬದಲಾವಣೆ ಆಗಿದೆಯೇ ಎಂಬುದನ್ನು ಅವಲೋಕಿಸಿದರೆ, ದಬ್ಬಾಳಿಕೆ-ತಾರತಮ್ಯ-ಶೋಷಣೆಗಳ ಸ್ವರೂಪ ಬದಲಾಗಿದೆಯೇ ಹೊರತು ಸ್ಥಿತಿ-ಗತಿ ಹಾಗೆಯೇ ಇರುವುದನ್ನು ನಾವು ಗಮನಿಸಬಹುದು. ಜಾತಿ ವ್ಯವಸ್ಥೆ ತನ್ನ ಸ್ವರೂಪವನ್ನು ಸಮಯಕ್ಕೆ ತಕ್ಕಂತೆ ಬದಲಿಸಿಕೊಂಡು, ಇವತ್ತಿಗೂ ನಿರಂತರವಾಗಿ ಮುಂದುವರಿಯುತ್ತಿರುವುದನ್ನು ನಾವು ಕಾಣಬಹುದು. ಈ ಸಂದರ್ಭದಲ್ಲಿ ಶಿವರಾಮ ಕಾರಂತರ ಪ್ರಸಿದ್ಧ ಕಾದಂಬರಿಯಾದ ಚೋಮನ ದುಡಿಯಲ್ಲಿ ಬರುವ ದಲಿತರ ಬದುಕಿನ ಚಿತ್ರಣ ನೆನಪಿಗೆ ಬರುತ್ತಿದೆ. 1931ರಲ್ಲಿ ಪ್ರಕಟಗೊಂಡ ಈ ಕೃತಿ ಕನ್ನಡದಲ್ಲಿ ಬಹುಚರ್ಚಿತವಾದ ಕಾದಂಬರಿಯಾಗಿದ್ದು ಅಸ್ಪೃಶ್ಯ ಸಮುದಾಯದ ಚೋಮನನ್ನು ಕೇಂದ್ರಪಾತ್ರದಲ್ಲಿಟ್ಟು ನಿರೂಪಿಸಲ್ಪಟ್ಟಿರುವ ಕಥನವಿದೆ; ಈ ಕಥನದಲ್ಲಿ ಸ್ವಾತಂತ್ರ್ಯಪೂರ್ವದ ದಲಿತರ ದಾರುಣ ಬದುಕನ್ನು ಕಾಣಬಹುದಾಗಿದೆ. ಆ ನಿಟ್ಟಿನಲ್ಲಿ ನೋಡಿದರೆ ಚೋಮನದುಡಿ ಏಕಕಾಲದಲ್ಲಿ ಕಾದಂಬರಿಯೂ ಹೌದು, ಹಾಗೆಯೇ ಭಾರತೀಯ ಸಾಮಾಜಿಕ ಚರಿತ್ರೆಯು ಹೌದು; ಏಕೆಂದರೆ ಸ್ವಾತಂತ್ರ್ಯಪೂರ್ವದ ಅಸ್ಪೃಶ್ಯರ ಬದುಕನ್ನು ಕಾದಂಬರಿ ಪರಿಣಾಮಕಾರಿಯಾಗಿ ಚಿತ್ರಿಸುತ್ತದೆ. ಚೋಮನ ಬದುಕೇ ಅಂದಿನ ನಿಜವಾದ ದಲಿತರ ಬದುಕಾಗಿತ್ತು ಎಂಬುದರಮಟ್ಟಿಗೆ ದಲಿತರ ಜೀವನ ಈ ಕಾದಂಬರಿಯಲ್ಲಿ ಅಭಿವ್ಯಕ್ತಗೊಂಡಿದೆ. ಚೋಮ ಒಂದು ತುಂಡು ಭೂಮಿಗಾಗಿ ತನ್ನ ದಣಿಯ ಮುಂದೆ ಎಷ್ಟೇ ಅಧೀರನಾಗಿ ಮತ್ತು ದೈನ್ಯತೆಯಿಂದ ಕೇಳಿಕೊಂಡರೂ ಅದು ಸಾಧ್ಯವಾಗದ ಸ್ಥಿತಿ ಒಂದೆಡೆಯಾದರೆ, ಹೀಗೆ ಭೂಮಿ ಇಲ್ಲದ ನೂರಾರು ಕುಟುಂಬಗಳು ಕೂಲಿ ಕಾರ್ಮಿಕರಾಗಿ ಕಾಫಿ ಎಸ್ಟೇಟ್‌ಗೆ ವಲಸೆ ಹೋಗಿ ಆಳುಗಳಾಗಿ ದುಡಿಯುವ ಮತ್ತೊಂದು ಚಿತ್ರಣ ಕೂಡ ಈ ಕಾದಂಬರಿಯಲ್ಲಿದೆ. ಚೋಮನ ಪಾತ್ರ ಪ್ರಮುಖವಾಗಿ ನಮ್ಮೆದುರಿಗೆ ನಿಂತರೂ ಅವನಂತೆ ಇರುವ ಸಾವಿರಾರು ಕುಟುಂಬಗಳ ಚಿತ್ರಣ ಚೋಮನ ಕುಟುಂಬದ ನೆರಳಿನಂತೆ ನಮಗೆ ಇಲ್ಲಿ ಭಾಸವಾಗುತ್ತದೆ. ಅದೇ ರೀತಿ ಚೋಮನ ಬದುಕು ಮತ್ತು ಅವನನ್ನು ಈ ಸಮಾಜ ನಡೆಸಿಕೊಳ್ಳುವ ಅಂಶವನ್ನು ಗಮನಿಸೋಣ; ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿಹೋಗುವ ಚೋಮನ ಕಿರಿಯ ಮಗನನ್ನು ರಕ್ಷಿಸಲು ಒಬ್ಬ ಬ್ರಾಹ್ಮಣ ಸಮುದಾಯದ ಯುವಕ ಮುಂದಾದಾಗ ಅಲ್ಲೇ ನಡೆದುಹೋಗುತ್ತಿದ್ದ ಮತ್ತೊಬ್ಬ ಬ್ರಾಹ್ಮಣ ಅವನನ್ನು ಮುಟ್ಟಬಾರದು, ಅವನು ಅಸ್ಪೃಶ್ಯ ಎನ್ನುತ್ತಾನೆ. ಆಗ ಆ ಯುವಕ ಬೆಚ್ಚಿದವನಂತೆ ನಿಂತು ಚೋಮನ ಮಗನನ್ನು ರಕ್ಷಿಸಲು ಹೋಗುವುದಿಲ್ಲ. ಎರಡನೆ ಘಟನೆ; ಚೋಮ ಗೇಣಿಗೆ ಭೂಮಿ ಕೊಡುವಂತೆ ತನ್ನ ದಣಿಗಳಲ್ಲಿ ವಿನಂತಿಸಿಕೊಂಡಾಗ ದಣಿ ಸಂಕಪ್ಪಯ್ಯನವರು ತಮ್ಮ ತಾಯಿಯವರ ಅಭಿಪ್ರಾಯವನ್ನು ಕೇಳುತ್ತಾರೆ. ಆಗ ಅವರ ತಾಯಿ ನೀಡುವ ಪ್ರತಿಕ್ರಿಯೆ: “ಏನು ಆ ಹೊಲೆಯನಿಗೆ ಅಷ್ಟು ಸೊಕ್ಕು ಬಂತೆ”, ಹೀಗೆ ಮಗನಿಗೆ ಹೇಳುತ್ತಾ, “ನೋಡು ಇದುವರೆಗೂ ಘಟ್ಟದ ಮೇಲೆ ಯಾರೂ ಅಸ್ಪೃಶ್ಯನಿಗೆ ಭೂಮಿ ಗೇಣಿಗೆ ಕೊಟ್ಟ ಉದಾಹರಣೆಗಳಿಲ್ಲ. ನೀನು ಅಸ್ಪೃಶ್ಯನಿಗೆ ಭೂಮಿಯನ್ನು ಗೇಣಿಗೆ ಕೊಟ್ಟೆ ಎಂಬ ಅಪಕೀರ್ತಿಗೆ ಒಳಗಾಗಬೇಡ” ಎಂದು ತಾಯಿ ಎಚ್ಚರಿಸುತ್ತಾಳೆ. ಈ ಮಾತನ್ನು ಕೇಳುವ ಸಂಕಪ್ಪಯ್ಯ, “ನೋಡು ಚೋಮ ನಮ್ಮ ತಾಯಿ ಇರುವದರೆಗೂ ನಿನಗೆ ಭೂಮಿ ಕೊಡಲು ಸಾಧ್ಯವಾಗುವುದಿಲ್ಲ” ಎನ್ನುತ್ತಾನೆ. ಸ್ವಾತಂತ್ರ್ಯಪೂರ್ವದ ಈ ಸ್ಥಿತಿ ಇಂದಿಗೂ ಬದಲಾಗದೆ ಇರುವುದು ದುರಂತ.

ಇತ್ತೀಚಿಗೆ ಕೋಲಾರ ಜಿಲ್ಲೆಯ ಟೇಕಲ್ ಹೋಬಳಿಯ ಹುಳ್ಳೇರಹಳ್ಳಿ ಗ್ರಾಮದಲ್ಲಿ ಒಬ್ಬ ದಲಿತ ಬಾಲಕ ದೇವರ ಕೋಲನ್ನು ಮುಟ್ಟಿದ ಎಂಬ ಕಾರಣಕ್ಕೆ ಆ ಬಾಲಕನ ಕುಟುಂಬಕ್ಕೆ ಬಹಿಷ್ಕಾರ ಹಾಕಿ, ದಂಡ ವಿಧಿಸಲಾಯಿತು; ಈ ಮನಸ್ಥಿತಿಗೂ ಚೋಮನ ಮಗ ನೀರಿನಲ್ಲಿ ಕೊಚ್ಚಿ ಹೋಗುವಾಗ ಅವನು ಅಸ್ಪೃಶ್ಯ, ಅವನನ್ನು ಮುಟ್ಟಬಾರದು ಎಂದು ಆ ಮಗುವಿನ ಸಾವಿಗೆ ಕಾರಣವಾದ ಮನಸ್ಥಿತಿಗೂ ಅಂತಹ ಯಾವ ವ್ಯತ್ಯಾಸಗಳೂ ಇಲ್ಲ. ಇನ್ನು ಭೂಮಿಯ ಪ್ರಶ್ನೆ ಬಂದಾಗ ಚೋಮನಂತೆ ಇವತ್ತಿಗೂ ಗೇಣು ಭೂಮಿಗಾಗಿ ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಪರದಾಡುತ್ತಿರುವ ಕೋಟ್ಯಂತರ ಚೋಮರನ್ನು ಕಾಣಬಹುದು. ಪ್ರಜಾಪ್ರಭುತ್ವ ವ್ಯವಸ್ಥೆ ಬಂದು ಏಳು ದಶಕಗಳೇ ಕಳೆದುಹೋದರೂ ಅಸ್ಪೃಶ್ಯ ಜನಾಂಗಗಳ ಬದುಕುಗಳಲ್ಲಿ ಯಾವ ಮಟ್ಟದ ಸುಧಾರಣೆಗಳು ಸಾಧ್ಯವಾಗಿವೆ ಎಂಬುದು ಇವತ್ತಿಗೂ ಪ್ರಶ್ನೆಗಳಾಗಿಯೇ ಉಳಿದಿವೆ.

ಅಂದ ಮಾತ್ರಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಶೋಷಿತ ಸಮುದಾಯಗಳ ಬದುಕಿಗೆ ಆಸರೆಯಾಗಿಲ್ಲವೇ ಎಂಬ ಪ್ರಶ್ನೆಯು ಬರುತ್ತದೆ; ಸಂವಿಧಾನ ಮತ್ತು ಪ್ರಜಾಪ್ರಭುತ್ವ ಈ ಸ್ಥಗಿತ ಸಮಾಜವು ಚಲನೆಗೊಳ್ಳಲು ನೆರವಾಗಿವೆ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಆದರೆ ದಲಿತರ ಮೇಲೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮಾತ್ರ ದಿನೇದಿನೇ ಹೆಚ್ಚಾಗುತ್ತಲೇ ಇವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ದಲಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆ ಆದ ಪ್ರಮಾಣ ಅತ್ಯಂತ ಕಡಿಮೆ ಎಂಬುದು ದುರಂತ ಸಂಗತಿ. ಇವತ್ತಿಗೂ ಪತ್ರಿಕೆಗಳಲ್ಲಿ ಮತ್ತು ಇತರ ಸುದ್ದಿ ಮಾಧ್ಯಮಗಳಲ್ಲಿ ದಿನಕ್ಕೊಂದಾದರು ದಲಿತರ ಮೇಲಿನ ದೌರ್ಜನ್ಯ, ಬಹಿಷ್ಕಾರ, ದಲಿತ ಹೆಣ್ಣು ಮಕ್ಕಳನ್ನು ಮೇಲೆ ಅತ್ಯಾಚಾರ ಮುಂತಾದ ಸುದ್ದಿಗಳು ಇದ್ದೇ ಇರುತ್ತವೆ. ದಲಿತ ಸಮುದಾಯಗಳ ವ್ಯಕ್ತಿಗಳ ಮೇಲಿನ ಈ ದೌರ್ಜನ್ಯ, ಶೋಷಣೆ ಮತ್ತು ದಬ್ಬಾಳಿಕೆಗಳನ್ನು ತಡೆಯುವಲ್ಲಿ ಸರ್ಕಾರಗಳಿಗಾಗಲೀ, ದಲಿತ ಚಳವಳಿಗಳಿಗಾಗಲೀ ಏಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ನಾವೆಲ್ಲರೂ ಅವಲೋಕನ ಮಾಡಿಕೊಳ್ಳಬೇಕಾಗಿದೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಕರ್ನಾಟಕದ ದಲಿತ ಚಳವಳಿಗಳು ಇಲ್ಲಿನ ದಮನಿತ ಜನಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿರುವುದು ನಿಜವೇ ಆದರೂ ದಲಿತರನ್ನು ರಾಜಕೀಯವಾಗಿ ಪ್ರಬಲಗೊಳಿಸುವಲ್ಲಿ ಯಶಸ್ವಿಯಾಗಿಲ್ಲ. ಇದಕ್ಕಿಂತ ಮುಖ್ಯವಾದ ಸಂಗತಿ, ದಲಿತ ಚಳವಳಿ ಬದಲಾದ ಕಾಲಘಟ್ಟಕ್ಕೆ ಬೇಕಿರುವ ಹೊಸ ನಾಯಕತ್ವವನ್ನು ಬೆಳೆಸದಿರುವುದರ ಜೊತೆಗೆ ಚಳವಳಿಯಲ್ಲಿ ಬೆಳೆದ ನಾಯಕತ್ವದ ಬಿಕ್ಕಟ್ಟು ಮತ್ತು ಉಪಜಾತಿಗಳ ಸಂಘರ್ಷಗಳು ಈ ಚಳವಳಿಯ ಪರಿಣಾಮವನ್ನು ಕುಂಠಿಸುವುದಕ್ಕೆ ಕಾರಣವಾದವು. ಇವೆಲ್ಲವುದರಿಂದ ದಲಿತರ ಬಗೆಗಿನ ನೈಜ ಕಾಳಜಿ ಹಿನ್ನೆಲೆಗೆ ಸರಿದಿರುವುದು ನಮ್ಮೆಲ್ಲರಿಗೂ ತಿಳಿಯದಿರುವ ವಿಚಾರವೇನಲ್ಲ.

ಇವೆಲ್ಲವೂ ಚಳವಳಿಯ ಧ್ವನಿ ಕಡಿಮೆಯಾಗಲು ಮುಖ್ಯ ಕಾರಣವಾಗಿದ್ದರೆ, ಇದರ ದುಷ್ಪರಿಣಾಮಗಳು ನೇರವಾಗಿ ದಲಿತ ಸಮುದಾಯದ ಮೇಲೆ ಆಗುತ್ತಿದ್ದು, ದೌರ್ಜನ್ಯಗಳು ಹೆಚ್ಚಾಗಲೂ ಕಾರಣವಾಗುತ್ತಿದೆ. ಈ ಸಂಗತಿಗಳನ್ನು ಗಂಭೀರವಾಗಿ ತೆಗೆದುಕೊಂಡು ದಲಿತ ಚಳವಳಿ ಕಾಲಕ್ಕೆ ತಕ್ಕಂತೆ ತನ್ನ ಸ್ವರೂಪವನ್ನು ಬದಲಿಸಿಕೊಂಡು ಮರುರೂಪುಗೊಳ್ಳಬೇಕಿದೆ ಹಾಗೂ ಅದರ ಜೊತೆಗೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಪ್ರಬಲಗೊಳ್ಳಬೇಕಾದ ಅನಿವಾರ್ಯತೆಯ ಕಾಲದಲ್ಲಿ ನಾವಿದ್ದೇವೆ. ಇಲ್ಲದಿದ್ದರೆ ದಲಿತರ ಅಮೂಲ್ಯವಾದ ಮತಗಳು ಎಂದಿನಂತೆ ಉಳ್ಳವರ ಸರಕಾಗಿ ದಲಿತರ ಶತಮಾನಗಳ ಸ್ಥಿತಿ-ಗತಿ ಯಥಾಸ್ಥಿತಿಯಾಗಿಯೇ ಉಳಿದುಕೊಳ್ಳಲಿದೆ.

ಡಾ. ನಾರಾಯಣ್ ಕ್ಯಾಸಂಬಳ್ಳಿ

ಡಾ. ನಾರಾಯಣ್ ಕ್ಯಾಸಂಬಳ್ಳಿ
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರು. ಹಲವು ಚಳವಳಿ ಮತ್ತು ಹೋರಾಟಗಳ ಸಂಗಾತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....