Homeಅಂತರಾಷ್ಟ್ರೀಯಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ "ಲಿಟಲ್ ಬಾಯ್" ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕೂ ಹೆಚ್ಚು ಜನರನ್ನು ಕೊಂದಿತ್ತು.

- Advertisement -
- Advertisement -

ಜಪಾನ್‌ನ ಹಿರೋಷಿಮಾ ನಗರದ ಮೇಲೆ ವಿಶ್ವದ ಮೊದಲ ಪರಮಾಣು ಬಾಂಬ್ ದಾಳಿಗೆ 75 ವರ್ಷ ತುಂಬಿದೆ. ಆಗಸ್ಟ್ 6 ರಂದು ಪ್ರಾರಂಭವಾಗಿ ಮೂರು ದಿನಗಳ ನಂತರ ಎರಡನೆಯ ಬಾರಿ ಮತ್ತು ಕೊನೆಯದಾಗಿ ನಾಗಸಾಕಿಯ ಮೇಲೆ ನಡೆದ ದಾಳಿಯು ಎರಡನೆಯ ಮಹಾಯುದ್ಧದ ಅಂತ್ಯಕ್ಕೆ ಕಾರಣವಾಯಿತು.

ಈ ದಾಳಿಯಲ್ಲಿ 2,00,000ಕ್ಕೂ ಹೆಚ್ಚು ಜೀವ ಹಾನಿ ಮತ್ತು ಊಹಿಸಲಾಗದಷ್ಟು ಆಸ್ತಿಪಾಸ್ತಿ ಹಾನಿಗೊಳಗಾಗಿದ್ದವು.

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ “ಲಿಟಲ್ ಬಾಯ್” ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕು ಹೆಚ್ಚು ಜನರನ್ನು ಕೊಂದಿತ್ತು. ಲಕ್ಷಾಂತರ ಜನರು ಗಾಯಗೊಂಡಿದ್ದರು. ಅವರಲ್ಲಿ ಹಲವರು ಮುಂದಿನ ವರ್ಷಗಳಲ್ಲಿ ಸಾವನ್ನಪ್ಪಿದರು.

ಸ್ಫೋಟದ ತಾಪಮಾನವು ಅಂದಾಜು 7,000 ಡಿಗ್ರಿ ಸೆಲ್ಸಿಯಸ್ (12,600 ಫ್ಯಾರನ್‌ಹೀಟ್) ತಲುಪಿತ್ತು. ಇದು ವೃತ್ತಾಕಾರವಾಗಿ ಸುಮಾರು ಮೂರು ಕಿಲೋಮೀಟರ್ ವರೆಗೂ ಮಾರಣಾಂತಿಕವಾಗಿ ವ್ಯಾಪಿಸಿತ್ತು.

ಆಗಸ್ಟ್ 9 ರಂದು, ಯುನೈಟೆಡ್ ಸ್ಟೇಟ್ಸ್ ನಾಗಾಸಾಕಿ ನಗರದ ಮೇಲೆ “ಫ್ಯಾಟ್ ಮ್ಯಾನ್” ಎಂಬ ಮತ್ತೊಂದು ಅಡ್ಡಹೆಸರಿನ ಬಾಂಬ್ ಅನ್ನು ಬೀಳಿಸಿ 75,000 ಕ್ಕೂ ಹೆಚ್ಚು ಜನರನ್ನು ಕೊಂದಿತು.

ದುರಂತ ಘಟನೆಯಿಂದ ದಟ್ಟ ಮೋಡ ಬೆಳೆಯಿತು. ಅದು 9,000 ಮೀಟರ್ (30,000 ಅಡಿ) ಎತ್ತರವಿತ್ತು ಎಂಬುದಕ್ಕೆ ಹಲವಾರು ಐತಿಹಾಸಿಕ ಚಿತ್ರಗಳು ಸಾಕ್ಷಿಯಾಗಿವೆ.

ಈ ದಾಳಿಯ ಬಳಿಕ ಜಪಾನ್ ಆರು ದಿನಗಳ ನಂತರ ಶರಣಾಗಿ, ಎರಡನೆಯ ಮಹಾಯುದ್ಧ ಕೊನೆಗೊಂಡಿತು. ಈ ಎರಡು ಬಾಂಬ್ ದಾಳಿಯು ಯುದ್ಧಕಾಲದಲ್ಲಿ ಪರಮಾಣು ಬಾಂಬುಗಳನ್ನು ಬಳಸಿದ ಏಕೈಕ ಸಮಯವಾಗಿದೆ.

ಪರಮಾಣು ದಾಳಿಗೆ 75 ವರ್ಷ ತುಂಬಿದ ಸ್ಮರಣಾರ್ಥವಾಗಿ ಜಗತ್ತಿನ ಹಲವೆಡೆ ಮಡಿದವರಿಗಾಗಿ ಮೌನಾಚರಣೆ ಮಾಡಲಾಯಿತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಸ್ಮರಣಾರ್ಥ ಸಮಯವನ್ನು ಕಡಿಮೆಗೊಳಿಸಲಾಗಿದೆ.


ಇದನ್ನೂ ಓದಿ: ಮಾನವ ನಿರ್ಮಿತ ಪಿಡುಗಿಗೆ 75 ವರ್ಷ: ಹಿರೋಶಿಮಾ ಬಾಂಬ್ ದಾಳಿಯಿಂದ ಜಗತ್ತು ಕಲಿತ ಪಾಠವೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...