Homeಅಂತರಾಷ್ಟ್ರೀಯಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ "ಲಿಟಲ್ ಬಾಯ್" ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕೂ ಹೆಚ್ಚು ಜನರನ್ನು ಕೊಂದಿತ್ತು.

- Advertisement -
- Advertisement -

ಜಪಾನ್‌ನ ಹಿರೋಷಿಮಾ ನಗರದ ಮೇಲೆ ವಿಶ್ವದ ಮೊದಲ ಪರಮಾಣು ಬಾಂಬ್ ದಾಳಿಗೆ 75 ವರ್ಷ ತುಂಬಿದೆ. ಆಗಸ್ಟ್ 6 ರಂದು ಪ್ರಾರಂಭವಾಗಿ ಮೂರು ದಿನಗಳ ನಂತರ ಎರಡನೆಯ ಬಾರಿ ಮತ್ತು ಕೊನೆಯದಾಗಿ ನಾಗಸಾಕಿಯ ಮೇಲೆ ನಡೆದ ದಾಳಿಯು ಎರಡನೆಯ ಮಹಾಯುದ್ಧದ ಅಂತ್ಯಕ್ಕೆ ಕಾರಣವಾಯಿತು.

ಈ ದಾಳಿಯಲ್ಲಿ 2,00,000ಕ್ಕೂ ಹೆಚ್ಚು ಜೀವ ಹಾನಿ ಮತ್ತು ಊಹಿಸಲಾಗದಷ್ಟು ಆಸ್ತಿಪಾಸ್ತಿ ಹಾನಿಗೊಳಗಾಗಿದ್ದವು.

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ “ಲಿಟಲ್ ಬಾಯ್” ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕು ಹೆಚ್ಚು ಜನರನ್ನು ಕೊಂದಿತ್ತು. ಲಕ್ಷಾಂತರ ಜನರು ಗಾಯಗೊಂಡಿದ್ದರು. ಅವರಲ್ಲಿ ಹಲವರು ಮುಂದಿನ ವರ್ಷಗಳಲ್ಲಿ ಸಾವನ್ನಪ್ಪಿದರು.

ಸ್ಫೋಟದ ತಾಪಮಾನವು ಅಂದಾಜು 7,000 ಡಿಗ್ರಿ ಸೆಲ್ಸಿಯಸ್ (12,600 ಫ್ಯಾರನ್‌ಹೀಟ್) ತಲುಪಿತ್ತು. ಇದು ವೃತ್ತಾಕಾರವಾಗಿ ಸುಮಾರು ಮೂರು ಕಿಲೋಮೀಟರ್ ವರೆಗೂ ಮಾರಣಾಂತಿಕವಾಗಿ ವ್ಯಾಪಿಸಿತ್ತು.

ಆಗಸ್ಟ್ 9 ರಂದು, ಯುನೈಟೆಡ್ ಸ್ಟೇಟ್ಸ್ ನಾಗಾಸಾಕಿ ನಗರದ ಮೇಲೆ “ಫ್ಯಾಟ್ ಮ್ಯಾನ್” ಎಂಬ ಮತ್ತೊಂದು ಅಡ್ಡಹೆಸರಿನ ಬಾಂಬ್ ಅನ್ನು ಬೀಳಿಸಿ 75,000 ಕ್ಕೂ ಹೆಚ್ಚು ಜನರನ್ನು ಕೊಂದಿತು.

ದುರಂತ ಘಟನೆಯಿಂದ ದಟ್ಟ ಮೋಡ ಬೆಳೆಯಿತು. ಅದು 9,000 ಮೀಟರ್ (30,000 ಅಡಿ) ಎತ್ತರವಿತ್ತು ಎಂಬುದಕ್ಕೆ ಹಲವಾರು ಐತಿಹಾಸಿಕ ಚಿತ್ರಗಳು ಸಾಕ್ಷಿಯಾಗಿವೆ.

ಈ ದಾಳಿಯ ಬಳಿಕ ಜಪಾನ್ ಆರು ದಿನಗಳ ನಂತರ ಶರಣಾಗಿ, ಎರಡನೆಯ ಮಹಾಯುದ್ಧ ಕೊನೆಗೊಂಡಿತು. ಈ ಎರಡು ಬಾಂಬ್ ದಾಳಿಯು ಯುದ್ಧಕಾಲದಲ್ಲಿ ಪರಮಾಣು ಬಾಂಬುಗಳನ್ನು ಬಳಸಿದ ಏಕೈಕ ಸಮಯವಾಗಿದೆ.

ಪರಮಾಣು ದಾಳಿಗೆ 75 ವರ್ಷ ತುಂಬಿದ ಸ್ಮರಣಾರ್ಥವಾಗಿ ಜಗತ್ತಿನ ಹಲವೆಡೆ ಮಡಿದವರಿಗಾಗಿ ಮೌನಾಚರಣೆ ಮಾಡಲಾಯಿತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಸ್ಮರಣಾರ್ಥ ಸಮಯವನ್ನು ಕಡಿಮೆಗೊಳಿಸಲಾಗಿದೆ.


ಇದನ್ನೂ ಓದಿ: ಮಾನವ ನಿರ್ಮಿತ ಪಿಡುಗಿಗೆ 75 ವರ್ಷ: ಹಿರೋಶಿಮಾ ಬಾಂಬ್ ದಾಳಿಯಿಂದ ಜಗತ್ತು ಕಲಿತ ಪಾಠವೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...