Homeಅಂತರಾಷ್ಟ್ರೀಯಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ "ಲಿಟಲ್ ಬಾಯ್" ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕೂ ಹೆಚ್ಚು ಜನರನ್ನು ಕೊಂದಿತ್ತು.

- Advertisement -
- Advertisement -

ಜಪಾನ್‌ನ ಹಿರೋಷಿಮಾ ನಗರದ ಮೇಲೆ ವಿಶ್ವದ ಮೊದಲ ಪರಮಾಣು ಬಾಂಬ್ ದಾಳಿಗೆ 75 ವರ್ಷ ತುಂಬಿದೆ. ಆಗಸ್ಟ್ 6 ರಂದು ಪ್ರಾರಂಭವಾಗಿ ಮೂರು ದಿನಗಳ ನಂತರ ಎರಡನೆಯ ಬಾರಿ ಮತ್ತು ಕೊನೆಯದಾಗಿ ನಾಗಸಾಕಿಯ ಮೇಲೆ ನಡೆದ ದಾಳಿಯು ಎರಡನೆಯ ಮಹಾಯುದ್ಧದ ಅಂತ್ಯಕ್ಕೆ ಕಾರಣವಾಯಿತು.

ಈ ದಾಳಿಯಲ್ಲಿ 2,00,000ಕ್ಕೂ ಹೆಚ್ಚು ಜೀವ ಹಾನಿ ಮತ್ತು ಊಹಿಸಲಾಗದಷ್ಟು ಆಸ್ತಿಪಾಸ್ತಿ ಹಾನಿಗೊಳಗಾಗಿದ್ದವು.

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ “ಲಿಟಲ್ ಬಾಯ್” ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕು ಹೆಚ್ಚು ಜನರನ್ನು ಕೊಂದಿತ್ತು. ಲಕ್ಷಾಂತರ ಜನರು ಗಾಯಗೊಂಡಿದ್ದರು. ಅವರಲ್ಲಿ ಹಲವರು ಮುಂದಿನ ವರ್ಷಗಳಲ್ಲಿ ಸಾವನ್ನಪ್ಪಿದರು.

ಸ್ಫೋಟದ ತಾಪಮಾನವು ಅಂದಾಜು 7,000 ಡಿಗ್ರಿ ಸೆಲ್ಸಿಯಸ್ (12,600 ಫ್ಯಾರನ್‌ಹೀಟ್) ತಲುಪಿತ್ತು. ಇದು ವೃತ್ತಾಕಾರವಾಗಿ ಸುಮಾರು ಮೂರು ಕಿಲೋಮೀಟರ್ ವರೆಗೂ ಮಾರಣಾಂತಿಕವಾಗಿ ವ್ಯಾಪಿಸಿತ್ತು.

ಆಗಸ್ಟ್ 9 ರಂದು, ಯುನೈಟೆಡ್ ಸ್ಟೇಟ್ಸ್ ನಾಗಾಸಾಕಿ ನಗರದ ಮೇಲೆ “ಫ್ಯಾಟ್ ಮ್ಯಾನ್” ಎಂಬ ಮತ್ತೊಂದು ಅಡ್ಡಹೆಸರಿನ ಬಾಂಬ್ ಅನ್ನು ಬೀಳಿಸಿ 75,000 ಕ್ಕೂ ಹೆಚ್ಚು ಜನರನ್ನು ಕೊಂದಿತು.

ದುರಂತ ಘಟನೆಯಿಂದ ದಟ್ಟ ಮೋಡ ಬೆಳೆಯಿತು. ಅದು 9,000 ಮೀಟರ್ (30,000 ಅಡಿ) ಎತ್ತರವಿತ್ತು ಎಂಬುದಕ್ಕೆ ಹಲವಾರು ಐತಿಹಾಸಿಕ ಚಿತ್ರಗಳು ಸಾಕ್ಷಿಯಾಗಿವೆ.

ಈ ದಾಳಿಯ ಬಳಿಕ ಜಪಾನ್ ಆರು ದಿನಗಳ ನಂತರ ಶರಣಾಗಿ, ಎರಡನೆಯ ಮಹಾಯುದ್ಧ ಕೊನೆಗೊಂಡಿತು. ಈ ಎರಡು ಬಾಂಬ್ ದಾಳಿಯು ಯುದ್ಧಕಾಲದಲ್ಲಿ ಪರಮಾಣು ಬಾಂಬುಗಳನ್ನು ಬಳಸಿದ ಏಕೈಕ ಸಮಯವಾಗಿದೆ.

ಪರಮಾಣು ದಾಳಿಗೆ 75 ವರ್ಷ ತುಂಬಿದ ಸ್ಮರಣಾರ್ಥವಾಗಿ ಜಗತ್ತಿನ ಹಲವೆಡೆ ಮಡಿದವರಿಗಾಗಿ ಮೌನಾಚರಣೆ ಮಾಡಲಾಯಿತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಸ್ಮರಣಾರ್ಥ ಸಮಯವನ್ನು ಕಡಿಮೆಗೊಳಿಸಲಾಗಿದೆ.


ಇದನ್ನೂ ಓದಿ: ಮಾನವ ನಿರ್ಮಿತ ಪಿಡುಗಿಗೆ 75 ವರ್ಷ: ಹಿರೋಶಿಮಾ ಬಾಂಬ್ ದಾಳಿಯಿಂದ ಜಗತ್ತು ಕಲಿತ ಪಾಠವೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...