Homeಮುಖಪುಟನೀಟ್-ಯುಜಿ ಮರು ಪರೀಕ್ಷೆ | 1,563 ವಿದ್ಯಾರ್ಥಿಗಳ ಪೈಕಿ 750 ಮಂದಿ ಗೈರು: ಎನ್‌ಟಿಎ

ನೀಟ್-ಯುಜಿ ಮರು ಪರೀಕ್ಷೆ | 1,563 ವಿದ್ಯಾರ್ಥಿಗಳ ಪೈಕಿ 750 ಮಂದಿ ಗೈರು: ಎನ್‌ಟಿಎ

- Advertisement -
- Advertisement -

ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಮೇಘಾಲಯ ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಏಳು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ನಡೆಸಲಾದ 2024ರ ನೀಟ್-ಯುಜಿ ಮರು ಪರೀಕ್ಷೆಗೆ ಅರ್ಧದಷ್ಟು ಅರ್ಹ ಅಭ್ಯರ್ಥಿಗಳು ಗೈರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿದೆ.

ಒಟ್ಟು 1,563 ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಿಗದಿಯಾಗಿತ್ತು. ಆದರೆ, 813 (52%) ಮಂದಿ ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದ 750 (48%) ಮಂದಿ ಗೈರು ಹಾಜರಾಗಿದ್ದಾರೆ.

ಜೂನ್ 4ರಂದು ಪ್ರಕಟಗೊಂಡ 2024ರ ನೀಟ್-ಯುಜಿ ಫಲಿತಾಂಶದಲ್ಲಿ 1, 563 ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗಿದೆ.

ಕೃಪಾಂಕ ಮಾತ್ರವಲ್ಲದೆ, ನೀಟ್ ಪರೀಕ್ಷೆಯ ಸಂಬಂಧ ಕೇಳಿ ಬಂದಿರುವ ಇತರ ಅಕ್ರಮ ಆರೋಪಗಳ ಬಗ್ಗೆಯೂ ತನಿಖೆ ನಡೆಸಿ ಕಠಿಣ ಕ್ರಮಕ್ಕೆ ಕೇಂದ್ರ ಶಿಕ್ಷಣ ಸಚಿವಾಲಯ ಮುಂದಾಗಿದ್ದು, ಅಕ್ರಮದ ಆರೋಪದ ಮೇಲೆ ಮೇ 5ರಂದು ಪರೀಕ್ಷೆಗೆ ಹಾಜರಾಗಿದ್ದ ಬಿಹಾರದ 17 ಅಭ್ಯರ್ಥಿಗಳನ್ನು ಡಿಬಾರ್ ಮಾಡಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜನರ ವಿಶ್ವಾಸ ಗಳಿಸುವಲ್ಲಿ ವಿಫಲವಾಗಿದೆ ಎಂಬುವುದನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡಿದೆ ಎಂದು ಶಿಕ್ಷಣ ಸಚಿವಾಲಯದ ಉನ್ನತ ಮೂಲಗಳು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೇ 5 ರಂದು ನಡೆದ ನೀಟ್‌-ಯುಜಿ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ ದಿನದಂದು ಮರುಪರೀಕ್ಷೆ ನಡೆಸಲಾಗಿತ್ತು. ಗುಜರಾತ್ ಮತ್ತು ಬಿಹಾರದಲ್ಲಿ ಪೊಲೀಸರು ದಾಖಲಿಸಿರುವ ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲಿದೆ.

ಎನ್‌ಟಿಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಗುಣಮಟ್ಟ ವೃದ್ದಿಸಲು ಶಿಕ್ಷಣ ಸಚಿವಾಲಯ ಇಸ್ರೋ ಮಾಜಿ ಅಧ್ಯಕ್ಷ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ 7 ಸದಸ್ಯರ ಸಮಿತಿ ರಚಿಸಿದೆ.

ಇದನ್ನೂ ಓದಿ : ಬುಡಕಟ್ಟು ನಾಯಕನ ಡಿಎನ್‌ಎ ಪರೀಕ್ಷೆ ಮಾಡಿಸುವ ಹೇಳಿಕೆ: ರಾಜಸ್ಥಾನದ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...