Homeಕರ್ನಾಟಕಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ವಸತಿ ಕಲ್ಪಸಿಕೊಡಲಾಗುವುದು

- Advertisement -
- Advertisement -

ಕೊರೊನಾ ಆತಂಕದ ಮಧ್ಯೆಯೇ ಭಾರತವು ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಅಮೃತ’ ಎಂಬ ಹೆಸರಿನೊಂದಿಗೆ ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾಹೋರಾಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ’ಕರ್ನಾಟಕ ನಾಡು, ನುಡಿ, ನೆಲ, ಜಲದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ದುಡಿಯುತ್ತೇನೆ. ರೈತರು, ನೇಕಾರರು ಸೇರಿದಂತೆ ವಿವಿಧ ಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತೇನೆ’ ಎಂದು ಹೇಳಿದ್ದಾರೆ.

“ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟ ಉತ್ತೇಜಿಸಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ 225 ಕೋಟಿ ರೂಪಾಯಿ ಮೂಲ ಬಂಡವಾಳವನ್ನು ಒದಗಿಸಿ, ಪ್ರತಿ ಸಂಸ್ಥೆಗೂ 30 ಲಕ್ಷ ರೂ ನೀಡಲಾಗುವುದು” ಎಂದು ಬೊಮ್ಮಾಯಿ ಪ್ರಕಟಿಸಿದ್ದಾರೆ.

ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಅಪ್ಪರ್‌ ಕೃಷ್ಣ 3ನೇ ಹಂತವನ್ನು ಮಾಡಿ 5.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅದಕ್ಕೆ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟದ ಅಗತ್ಯವಿದೆ. ಅದರೊಂದಿಗೆ ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

“ಮೇಕೆದಾಟು ಮತ್ತು ಮಹಾದಾಯಿ ಯೋಜನೆಗಳನ್ನು ಪ್ರಾರಂಭಿಸಬೇಕಾಗಿದೆ. ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಕಾನೂನಿನ ಎಲ್ಲಾ ಆಯಾಮಗಳನ್ನು ಅವರಿಗೆ ಮನವರಿಗೆ ಮಾಡಿ, ಪರವಾನಗಿ ಪಡೆದು, ಯೋಜನೆಯನ್ನ ಪ್ರಾರಂಭಿಸುತ್ತೇವೆ. ಬೆಂಗಳೂರು ಮತ್ತು ಹಲವು ಗ್ರಾಮಗಳಿಗೆ ಕುಡಿಯುವ ನೀರು ತರುತ್ತೇವೆ” ಎಂದು ಹೇಳಿದ್ದಾರೆ.

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಸಿಕೊಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಅಮೃತ ಗ್ರಾಮ ಪಂಚಾಯತಿ ಯೋಜನೆಯ ಅಡಿಯಲ್ಲಿ ಆಯ್ದ 750 ಗ್ರಾಮ ಪಂಚಾಯಿತಿಗಳಿಗೆ ಪ್ರತಿ ಮನೆಗೆ ಕುಡಿಯುವ ನೀರು, ಘನತ್ಯಾಜ್ಯ ವಿತರಣೆ, ವಿದ್ಯುತ್‌, ಡಿಜಿಟಲ್‌ ಲೈಬ್ರರಿಗಳನ್ನ ತೆರೆಯುತ್ತೇವೆ ಎಂದು ಹೇಳಿದ್ದಾರೆ.

ಅಮೃತ ನಿರ್ಮಲ ನಗರ ಯೋಜನೆಯಡಿ 75 ನಗರಗಳನ್ನು ಆಯ್ಕೆ ಮಾಡಿ, ಅವುಗಳ ಸ್ವಚ್ಛತೆ ಕಾಪಾಡಲು ಮತ್ತು ಸೌಂದರ್ಯ ವೃದ್ಧಿಗಾಗಿ ಪ್ರತಿ ನಗರಕ್ಕೂ ಒಂದು ಕೋಟಿ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರದ್ದಾದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲು!; ರಾಜ್ಯ ಮತ್ತು ಕೇಂದ್ರಾಡಳಿತಕ್ಕೆ ಸುಪ್ರೀಂ ನೋಟಿಸ್‌‌

ಶಾಲಾ ಸೌಲಭ್ಯ ಯೋಜನೆಯಡಿ 750 ಶಾಲೆಗಳಿಗೆ 75 ಕೋಟಿ ರೂಪಾಯಿ ಮೀಸಲಿಡಲಾಗುವುದು. ಈ ಪೈಕಿ ಪ್ರತಿ ಶಾಲೆಗಳಿಗೂ 10 ರೂಗಳನ್ನು ಒದಗಿಸಿ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಮೃತ ಅಂಗನವಾಡಿ ಕೇಂದ್ರಗಳ ನಿರ್ಮಾಣ ಯೋಜನೆಯಡಿ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 1 ಲಕ್ಷ ರೂಪಾಯೊ ಒದಗಿಸಲಾಗುತ್ತದೆ. ಬೆಂಗಳೂರಿನ 75 ಕೊಳೆಗೇರಿಗಳ ಸುಧಾರಣೆ ಮತ್ತು 75 ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಡಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯಗಳ್ನು ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ ವೆಚ್ಚ ಮಾಡಲಾಗುವುದು.

ಅಮೃತ ಕೌಶಲ ತರಬೇತಿ ಯೋಜನೆಗೆ 112 ಕೋಟಿ ನೀಡಲಾಗಿವುದು. ಈ ಯೋಜನೆಯ ಅಡಿಯಲ್ಲಿ 75,000 ಯುವಕ ಯುವತಿಯರಿಗೆ  ಕೌಶಲ್ಯ ತರಬೇತಿ ನೀಡಲಾಗುವುದು. ಅಮೃತ ಕ್ರೀಡಾ ಪ್ರೋತ್ಸಾಹ ಯೋಜನೆ ಅಡಿಯಲ್ಲಿ 76 ಕ್ರೀಡಾಪಟುಗಳನ್ನು ದತ್ತು ಪಡೆದುಕೊಂಡು ತರಬೇತಿ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ 75 ನವೋದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...