Homeಕರ್ನಾಟಕಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ವಸತಿ ಕಲ್ಪಸಿಕೊಡಲಾಗುವುದು

- Advertisement -
- Advertisement -

ಕೊರೊನಾ ಆತಂಕದ ಮಧ್ಯೆಯೇ ಭಾರತವು ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಅಮೃತ’ ಎಂಬ ಹೆಸರಿನೊಂದಿಗೆ ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾಹೋರಾಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ’ಕರ್ನಾಟಕ ನಾಡು, ನುಡಿ, ನೆಲ, ಜಲದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ದುಡಿಯುತ್ತೇನೆ. ರೈತರು, ನೇಕಾರರು ಸೇರಿದಂತೆ ವಿವಿಧ ಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತೇನೆ’ ಎಂದು ಹೇಳಿದ್ದಾರೆ.

“ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟ ಉತ್ತೇಜಿಸಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ 225 ಕೋಟಿ ರೂಪಾಯಿ ಮೂಲ ಬಂಡವಾಳವನ್ನು ಒದಗಿಸಿ, ಪ್ರತಿ ಸಂಸ್ಥೆಗೂ 30 ಲಕ್ಷ ರೂ ನೀಡಲಾಗುವುದು” ಎಂದು ಬೊಮ್ಮಾಯಿ ಪ್ರಕಟಿಸಿದ್ದಾರೆ.

ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಅಪ್ಪರ್‌ ಕೃಷ್ಣ 3ನೇ ಹಂತವನ್ನು ಮಾಡಿ 5.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅದಕ್ಕೆ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟದ ಅಗತ್ಯವಿದೆ. ಅದರೊಂದಿಗೆ ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

“ಮೇಕೆದಾಟು ಮತ್ತು ಮಹಾದಾಯಿ ಯೋಜನೆಗಳನ್ನು ಪ್ರಾರಂಭಿಸಬೇಕಾಗಿದೆ. ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಕಾನೂನಿನ ಎಲ್ಲಾ ಆಯಾಮಗಳನ್ನು ಅವರಿಗೆ ಮನವರಿಗೆ ಮಾಡಿ, ಪರವಾನಗಿ ಪಡೆದು, ಯೋಜನೆಯನ್ನ ಪ್ರಾರಂಭಿಸುತ್ತೇವೆ. ಬೆಂಗಳೂರು ಮತ್ತು ಹಲವು ಗ್ರಾಮಗಳಿಗೆ ಕುಡಿಯುವ ನೀರು ತರುತ್ತೇವೆ” ಎಂದು ಹೇಳಿದ್ದಾರೆ.

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಸಿಕೊಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಅಮೃತ ಗ್ರಾಮ ಪಂಚಾಯತಿ ಯೋಜನೆಯ ಅಡಿಯಲ್ಲಿ ಆಯ್ದ 750 ಗ್ರಾಮ ಪಂಚಾಯಿತಿಗಳಿಗೆ ಪ್ರತಿ ಮನೆಗೆ ಕುಡಿಯುವ ನೀರು, ಘನತ್ಯಾಜ್ಯ ವಿತರಣೆ, ವಿದ್ಯುತ್‌, ಡಿಜಿಟಲ್‌ ಲೈಬ್ರರಿಗಳನ್ನ ತೆರೆಯುತ್ತೇವೆ ಎಂದು ಹೇಳಿದ್ದಾರೆ.

ಅಮೃತ ನಿರ್ಮಲ ನಗರ ಯೋಜನೆಯಡಿ 75 ನಗರಗಳನ್ನು ಆಯ್ಕೆ ಮಾಡಿ, ಅವುಗಳ ಸ್ವಚ್ಛತೆ ಕಾಪಾಡಲು ಮತ್ತು ಸೌಂದರ್ಯ ವೃದ್ಧಿಗಾಗಿ ಪ್ರತಿ ನಗರಕ್ಕೂ ಒಂದು ಕೋಟಿ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರದ್ದಾದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲು!; ರಾಜ್ಯ ಮತ್ತು ಕೇಂದ್ರಾಡಳಿತಕ್ಕೆ ಸುಪ್ರೀಂ ನೋಟಿಸ್‌‌

ಶಾಲಾ ಸೌಲಭ್ಯ ಯೋಜನೆಯಡಿ 750 ಶಾಲೆಗಳಿಗೆ 75 ಕೋಟಿ ರೂಪಾಯಿ ಮೀಸಲಿಡಲಾಗುವುದು. ಈ ಪೈಕಿ ಪ್ರತಿ ಶಾಲೆಗಳಿಗೂ 10 ರೂಗಳನ್ನು ಒದಗಿಸಿ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಮೃತ ಅಂಗನವಾಡಿ ಕೇಂದ್ರಗಳ ನಿರ್ಮಾಣ ಯೋಜನೆಯಡಿ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 1 ಲಕ್ಷ ರೂಪಾಯೊ ಒದಗಿಸಲಾಗುತ್ತದೆ. ಬೆಂಗಳೂರಿನ 75 ಕೊಳೆಗೇರಿಗಳ ಸುಧಾರಣೆ ಮತ್ತು 75 ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಡಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯಗಳ್ನು ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ ವೆಚ್ಚ ಮಾಡಲಾಗುವುದು.

ಅಮೃತ ಕೌಶಲ ತರಬೇತಿ ಯೋಜನೆಗೆ 112 ಕೋಟಿ ನೀಡಲಾಗಿವುದು. ಈ ಯೋಜನೆಯ ಅಡಿಯಲ್ಲಿ 75,000 ಯುವಕ ಯುವತಿಯರಿಗೆ  ಕೌಶಲ್ಯ ತರಬೇತಿ ನೀಡಲಾಗುವುದು. ಅಮೃತ ಕ್ರೀಡಾ ಪ್ರೋತ್ಸಾಹ ಯೋಜನೆ ಅಡಿಯಲ್ಲಿ 76 ಕ್ರೀಡಾಪಟುಗಳನ್ನು ದತ್ತು ಪಡೆದುಕೊಂಡು ತರಬೇತಿ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ 75 ನವೋದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...