Homeಅಂಕಣಗಳುಸ್ವಾತಂತ್ರ್ಯದ ಅಮೃತ ಮಹೋತ್ಸವ; ಲಾಂಛನಗಳು ಕೇವಲ ಸಾಂಕೇತಿಕವಾಗದೆ ನಡೆನುಡಿಯನ್ನೂ ಪ್ರಭಾವಿಸಲಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ; ಲಾಂಛನಗಳು ಕೇವಲ ಸಾಂಕೇತಿಕವಾಗದೆ ನಡೆನುಡಿಯನ್ನೂ ಪ್ರಭಾವಿಸಲಿ

- Advertisement -
- Advertisement -

ದೇಶವನ್ನು-ರಾಜ್ಯವನ್ನು ಪ್ರತಿನಿಧಿಸುವ ಸಂಕೇತಗಳು ಅದರಲ್ಲಿಯೂ ರಾಷ್ಟ್ರ ಧ್ವಜ, ರಾಷ್ಟ್ರ ಗೀತೆ, ನಾಡ ಧ್ವಜ, ನಾಡ ಗೀತೆ ಇವುಗಳು ಭಾವನಾತ್ಮಕ ನೆಲೆಯಲ್ಲಿ ಜನಸಾಮಾನ್ಯರನ್ನು ರಾಜಕೀಯ ವಾಸ್ತವಗಳತ್ತ ಸೆಳೆಯುವ ಜನಪ್ರಿಯ ಸಾಧನಗಳು. ಈ ಸಂಕೇತಗಳು ವಿಶಾಲ ಅರ್ಥದಲ್ಲಿ ಜನರನ್ನು, ಸಮುದಾಯಗಳನ್ನು ಬೆಸೆಯುವ, ಎಲ್ಲರ ಒಳಿತಿಗಾಗಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಒಗ್ಗೂಡಿಸುವ, ಅವಕಾಶವಂಚಿತ-ತುಳಿತಕ್ಕೊಳಗಾದ ಜನಸಾಮಾನ್ಯರ ಮತ್ತು ಸಮುದಾಯಗಳ ಏಳಿಗೆಗಾಗಿ- ಅದಕ್ಕಾಗಿ ಸಮಾನತೆಯನ್ನು ಸಾಧಿಸಲು ಎಲ್ಲ ನಾಗರಿಕರೂ ಕೈಜೋಡಿಸಬೇಕೆಂಬ ಸಂದೇಶವನ್ನು ಜನರ ಮನಸ್ಸಿನಲ್ಲಿ ನಾಟುವ ಉದ್ದೇಶ ಮತ್ತು ಶಕ್ತಿಯನ್ನು ಹೊಂದಿವೆ. ’ಭಾರತ ದೇಶಕ್ಕೆ ಜಯವಾಗಲಿ’, ’ಜೈ ಜವಾನ್ (ಸೈನಿಕ)-ಜೈ ಕಿಸಾನ್ (ರೈತ)’ ಮುಂತಾದ ಘೋಷಣೆಗಳಲ್ಲೂ ವೈವಿಧ್ಯ ಸಮುದಾಯಗಳ ಜನರನ್ನು ಬೆಸೆಯುವ ಅಂತಹ ಶಕ್ತಿ ಇತ್ತು. ಸ್ವಾತಂತ್ರ್ಯದ ನಂತರ ಭಾರತ ಬಹುತ್ವವನ್ನು ಮೈಗೂಡಿಸಿಕೊಂಡು, ಎಲ್ಲ ನಾಗರಿಕರು ಕಲೆತು ಪ್ರಗತಿಯತ್ತ ದೇಶವನ್ನು ಮುನ್ನಡೆಸಬೇಕೆಂಬ ಇರಾದೆಯಿಂದ ಈ ರಾಷ್ಟ್ರೀಯ ಸಂಕೇತಗಳನ್ನು ಎಚ್ಚರಿಕೆಯಿಂದ ರೂಪಿಸಿಕೊಳ್ಳಲಾಗಿತ್ತು. ರಾಷ್ಟ್ರ ಧ್ವಜವೂ ಸೇರಿದಂತೆ ರಾಷ್ಟ್ರೀಯ ಚಿಹ್ನೆಗಳನ್ನು ಗೌರವಿಸುವುದೆಂದರೆ ಈ ದೇಶದ ಸಂವಿಧಾನದ ಪ್ರಕಾರ, ಈ ದೇಶದ ಪೂರ್ವಸೂರಿಗಳು ಹಾಕಿಕೊಟ್ಟ ನ್ಯಾಯದ, ಬಹುತ್ವದ, ಋಜತ್ವದ ಮಾರ್ಗದಲ್ಲಿ ನಡೆನುಡಿಗಳನ್ನು ರೂಪಿಸಿಕೊಳ್ಳುವುದೂ ಆಗಿದೆ. ಕೇವಲ ಸಂಕೇತಗಳನ್ನು ಡಿಪಿಗಳಲ್ಲಿ ಹಾಕಿಕೊಂಡು ವಿಜೃಂಭಿಸುವುದು ಮಾತ್ರವಲ್ಲ.

ಚಕ್ರತೀರ್ಥ ಸಮಿತಿ ಕೈಬಿಟ್ಟ ಮುಹಮದ್ ಸಾದುಲ್ಲಾ ರಾಷ್ಟ್ರಧ್ವಜದ ಬಗ್ಗೆ ನೀಡಿದ ವ್ಯಾಖ್ಯಾನ ಗೊತ್ತೇ?

ಭಾರತದ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಬಗ್ಗೆ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಮಾತನಾಡುತ್ತಿದೆ. ಒಂದು ಕಾಲಕ್ಕೆ ರಾಷ್ಟ್ರಧ್ವಜವನ್ನು ಅವಮಾನಿಸಿದ ಆರ್‌ಎಸ್‌ಎಸ್ ಬೆಂಬಲಿತ ಸರ್ಕಾರ ಇಂದು ರಾಜ್ಯ ಮತ್ತು ಒಕ್ಕೂಟಗಳಲ್ಲಿ ಆಡಳಿತ ನಡೆಸುತ್ತಿದೆ. ಈ ಸರ್ಕಾರಗಳ ರಾಷ್ಟ್ರಧ್ವಜದ ಬಗೆಗಿನ ಪ್ರೀತಿ ಕೇವಲ ’ರಂಗುರಂಗಿನ’ ತೋರಿಕೆಯ ಕಲ್ಪನೆ ಮಾತ್ರವಾಗಿದ್ದು, ನಮ್ಮ ಧ್ವಜ ಪ್ರತಿನಿಧಿಸುವ, ಅದರ ಬಣ್ಣಗಳು ಪ್ರತೀಕವಾಗಿರುವ ಭಾವನೆಯನ್ನು ಮೈಗೂಡಿಸಿಕೊಂಡಿಲ್ಲ ಎಂಬುದಕ್ಕೆ ಹೇರಳ ಉದಾಹರಣೆಗಳಿವೆ. ಬಹುತ್ವವನ್ನು ನಾಶಪಡಿಸುವ ಎಷ್ಟೋ ಕೆಲಸಗಳಲ್ಲಿ ಸಂಘ ಪರಿವಾರದ ಮುಖಂಡರು ಭಾಗಿಯಾಗಿರುವುದು ಪದೇಪದೇ ಸಾಬೀತಾಗುತ್ತಿದೆ. ಅದರಲ್ಲಿ ಇತ್ತೀಚಿನ ಉದಾಹರಣೆ ಕರ್ನಾಟಕದಲ್ಲಿ ಅಸಂವಿಧಾನಿಕವಾಗಿ ನಡೆದ ಪಠ್ಯ ಪುನರ್‌ಪರಿಷ್ಕರಣೆಯ ಪ್ರಹಸನ. ಒಂದು ಕಡೆಗೆ ತ್ರಿವರ್ಣ ಧ್ವಜದ ಬಗ್ಗೆ ಅಗೌರವ ತೋರಿಸಿದ್ದ ಆರ್‌ಎಸ್‌ಎಸ್‌ನ ಹೆಡ್ಗೇವಾರ್‌ರ ಪಾಠವನ್ನು ಸೇರಿಸುವುದಲ್ಲದೆ, ಡಾ. ಅಂಬೇಡ್ಕರ್ ಅವರ ಹೆಸರಿನ ಜೊತೆಗಿದ್ದ ’ಸಂವಿಧಾನ ಶಿಲ್ಪಿ’ ಸಂಬೋಧನೆಯನ್ನು ಕೈಬಿಡುತ್ತಾರೆ. (ಈಗ ಸಂವಿಧಾನ ಶಿಲ್ಪಿ ಮತ್ತೆ ಸೇರಿಸುವುದಾಗಿ ಸರ್ಕಾರ ಹೇಳಿದೆ, ಅದು ಬೇರೆ ಮಾತು).

ಅಷ್ಟೇ ಅಲ್ಲದೆ ಅದೇ ಪಠ್ಯದಲ್ಲಿ ಸಂವಿಧಾನ ಕರಡು ಸಮಿತಿಯಲ್ಲಿನ ಸದಸ್ಯರ ಪಟ್ಟಿಯಿಂದ ಮಹಮದ್ ಸಾದುಲ್ಲಾ ಅವರ ಹೆಸರನ್ನು ಈ ಸಮಿತಿ ಡಿಲೀಟ್ ಮಾಡಿ ’ಪರಿಷ್ಕರಣೆ’ ನಡೆಸುತ್ತದೆ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸದಾ ವಿಷ ಕಾರುವ ಸಂಘ ಪರಿವಾರದ ಪ್ರತಿಪಾದಕರು ಈ ಹೆಸರು ಕೈಬಿಡುವ ಹುನ್ನಾರ ನಡೆಸುತ್ತಾರೆ ಆದರೆ ರಾಷ್ಟ್ರಧ್ವಜದ ಬಗ್ಗೆ ತಮ್ಮ ಹುಸಿ ಪ್ರೇಮವನ್ನು ಎಗ್ಗಿಲ್ಲದೆ ಪ್ರದರ್ಶಿಸುತ್ತಾರೆ.

ಸಯ್ಯದ್ ಮುಹಮದ್ ಸಾದುಲ್ಲಾ ಮುಸ್ಲಿಂ ಲೀಗ್ ಸದಸ್ಯರಾಗಿದ್ದವರು. ಸಂವಿಧಾನ ನಡಾವಳಿ ಸಭೆಗಳನ್ನು ಮುಸ್ಲಿಂ ಲೀಗ್ ಬಹಿಷ್ಕರಿಸಿದ್ದರೂ, ಅದನ್ನು ಧಿಕ್ಕರಿಸಿ ಸಂವಿಧಾನ ಕರಡು ಸಮಿತಿ ಸದಸ್ಯರಾಗಿ ಚರ್ಚೆಗಳಲ್ಲಿ ಪಾಲ್ಗೊಂಡವರು. ಸಂವಿಧಾನ ರಚನಾ ಸಭೆಯಲ್ಲಿ ಅವರು ನಮ್ಮ ರಾಷ್ಟ್ರಧ್ವಜದ ಬಗ್ಗೆ ಮಾಡಿದ ಭಾಷಣ ಸ್ವತಂತ್ರ ಭಾರತದಲ್ಲಿ ಧ್ವಜದ ಬಣ್ಣಗಳ ಪ್ರಾಮುಖ್ಯತೆಯನ್ನು ಎತ್ತಿಹಿಡಿದ ದಿಕ್ಸೂಚಿ ಭಾಷಣವೆಂದೇ ಪರಿಗಣಿತವಾಗಿದೆ. ಅವರ ಮಾತುಗಳನ್ನು ಇಲ್ಲಿ ಸಂಗ್ರಹಿಸಬಹುದಾದರೆ..

“ನನ್ನ ಅನಿಸಿಕೆಯ ಪ್ರಕಾರ ಧ್ವಜ, ನಮ್ಮ ಆಕಾಂಕ್ಷೆಗಳು ಹೇಗೆ ವಿಕಸನಗೊಂಡವು, ನಮ್ಮ ಹೋರಾಟ ಹೇಗೆ ಸಾಕಾರಗೊಂಡಿತು ಎಂಬುದರ ಜೊತೆಗೆ ನಮ್ಮೆಲ್ಲರ ತ್ಯಾಗಗಳ ಅಂತಿಮ ಫಲದ ಪ್ರತೀಕವಾಗಿದೆ. ಪ್ರಕೃತಿಯಿಂದ ಹೋಲಿಕೆಯನ್ನು ಮಾಡಬಹುದಾದರೆ, ಭಾರತದಲ್ಲಿ ಉರಿಯುವ ಸೂರ್ಯನ ಶಾಖದಿಂದ ಏರ್ಪಟ್ಟ ಭೂಮಿಯ ಮೇಲಿನ ಸುಡುವ ನೆಲದ ಪರಿಸ್ಥಿತಿಯನ್ನು ಕೇಸರಿ ಬಣ್ಣ ಪ್ರತಿನಿಧಿಸುತ್ತದೆ. ಸ್ಫಟಿಕದಂತಹ ಮಳೆಹನಿಗಳು ಮತ್ತು ಹಿಮ ಪರ್ವತ ಹಾಗೂ ನದಿಗಳಿಂದ ನೀರು ಹರಿದುಬಂದಾಗ, ನಮ್ಮ ಒಣ ಭೂಪ್ರದೇಶ ನಗುವ ಹಸಿರು ಹೊಲಗಳಾಗಿ ಕಂಗೊಳಿಸುತ್ತದೆ. ಆ ಹಸಿರು ಬೆಳೆಗಳು ನಮ್ಮನ್ನು ಕಾಪಾಡುತ್ತವೆ ಮತ್ತು ಜನರ ಬೆಳವಣಿಗೆಗೆ ಕಾರಣವಾಗುತ್ತವೆ. ಇದೇ ರೀತಿ ನಮ್ಮ ರಾಜಕೀಯ ಹೋರಾಟದಲ್ಲಿ ಸುಡುತ್ತಿದ್ದ ಭೂಮಿಯ ದಿನಗಳಿದ್ದವು ಆದರೆ ನಂತರ ಭರವಸೆಯ ದಿನಗಳು ಬಂದವು ಮತ್ತು ಇಂದು ಸದನದಲ್ಲಿ ಬಿಚ್ಚಿಟ್ಟಿರುವ ಈ ಧ್ವಜ ನಮ್ಮ ಹಿಂದಿನ ಹೋರಾಟದ ಅಂತಿಮ ಗುರಿಯನ್ನು ನಮ್ಮತ್ತ ಹೊತ್ತುತಂದಿದೆ…”

“ಭಾರತ ತನ್ನ ಆಧ್ಯಾತ್ಮಿಕ ಉನ್ನತಿಗೆ ಚಿರಪರಿಚಿತವೇ. ಜಗತ್ತಿನ ವಿವಿಧ ದೇಶಗಳಿಗೆ ಅತ್ಯುನ್ನತ ಆಧ್ಯಾತ್ಮಿಕ ಸಂದೇಶವನ್ನು ಕಳುಹಿಸುವ ಛಾತಿಯನ್ನು ಭಾರತ ಹೊಂದಿದೆ ಎಂದು ಎಲ್ಲೆಲ್ಲೂ ನಂಬಲಾಗಿದೆ. ಎಲ್ಲರಿಗೂ ತಿಳಿದಿರುವಂತೆಯೇ, ಕೇಸರಿ ಅಂತಹ ಆಧ್ಯಾತ್ಮಿಕ ಜೀವನವನ್ನು ಬದುಕಿದವರ ಸಂಕೇತ; ಅದು ಹಿಂದೂಗಳಿಗೆ ಮಾತ್ರವಲ್ಲದೆ ಮುಸಲ್ಮಾನರಿಗೂ. ಆದುದರಿಂದ ನಮ್ಮ ಸಾಧುಸಂತರು, ಪೀರ್‌ಗಳ ಮತ್ತು ಪಂಡಿತರ ಕಾರ್ಯಕ್ಷೇತ್ರವಾದ ಆತ್ಮಸಮರ್ಪಣೆಯ ತ್ಯಾಗದ ಅತ್ಯುನ್ನತ ತಳಹದಿಯನ್ನು ಕೇಸರಿ ನಮಗೆ ಸದಾ ನೆನಪಿಸಬೇಕು. ಆದುದರಿಂದ ಧ್ವಜದಲ್ಲಿ ಈ ಬಣ್ಣದ ಸೇರ್ಪಡೆಯನ್ನು ನಾನು ಸ್ವಾಗತಿಸುತ್ತೇನೆ…”

ಹೀಗೆ ಮುಂದುವೆರಿದು ಬಿಳಿ ಬಣ್ಣ, ನಮ್ಮ ಜೀವನದ ಧ್ಯೇಯ ವೈಯಕ್ತಿಕವಾಗಿ ಹಾಗೂ ಪ್ರಭುತ್ವದ ಜೊತೆಗಿನ ಸಂಬಂಧದಲ್ಲಿ ಶುದ್ಧವಾಗಿರಬೇಕು ಎಂದು ಸೂಚಿಸುತ್ತದೆ ಎನ್ನುತ್ತಾರೆ. ಹಸಿರು ಬಣ್ಣ ಭಾರತದ ಸ್ವಾತಂತ್ರ್ಯ ಹೋರಾಟದ ಬಂಡಾಯವನ್ನು ಸೂಚಿಸುವುದರ ಬಗ್ಗೆ ವಿವರಿಸಿ ಅಶೋಕ ಚಕ್ರದ ಕಡೆಗೆ ಗಮನ ಸೆಳೆಯುತ್ತಾರೆ.

“ಅಶೋಕನ ಧರ್ಮಚಕ್ರ ಬೌದ್ಧ ದೊರೆಯ ಭಾರತದ ಕಾಲದ ಜನರ ಪರಿಸ್ಥಿತಿಯನ್ನು ನಮಗೆ ನೆನಪಿಸುತ್ತದೆ. ಅವನು ತನ್ನ ವೈಯಕ್ತಿಕ ಆಕ್ರಮಣಕಾರಿ ಭವ್ಯತೆಗಾಗಿ ಆಳಲಿಲ್ಲ ಬದಲಾಗಿ ಅವನ ಆಡಳಿತದಲ್ಲಿದ್ದ ಜನರ ಸಂತೋಷ, ಶಾಂತಿ ಮತ್ತು ಅಭ್ಯುದಯಕ್ಕಾಗಿ ರಾಜ್ಯಭಾರ ನಡೆಸಿದ್ದು. ಈಗ ನಮ್ಮ ರಾಷ್ಟ್ರ ಧ್ವಜದಲ್ಲಿ ರಾರಾಜಿಸುತ್ತಿರುವ ಈ ಲಾಂಛನ, ನಾವು ನಮ್ಮ ಭೂತಕಾಲವನ್ನು ಮರೆತು ಬೌದ್ಧ ರಾಜನ ಪರಂಪರೆಯನ್ನು ಭವಿಷ್ಯದತ್ತ ಕೊಂಡೊಯ್ಯಬೇಕೆಂದು ಈ ಒಕ್ಕೂಟದ ಪ್ರತಿ ಆಡಳಿತಗಾರ ಮತ್ತು ಪ್ರತಿ ಪ್ರಜೆಯನ್ನು ನೆನಪಿಸುತ್ತದೆ” ಎಂದು ನಮ್ಮ ರಾಷ್ಟ್ರ ಧ್ವಜವನ್ನು ವಿಶಾಲ ದೃಷ್ಟಿಕೋನದಲ್ಲಿ ವ್ಯಾಖ್ಯಾನಿಸುತ್ತಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊಸ್ತಿಲಲ್ಲೇ ನಡೆದ ಈ ಪಠ್ಯಪರಿಷ್ಕರಣೆಯ ಪ್ರಹಸನ ರಾಷ್ಟ್ರಧ್ವಜದ ಬಗ್ಗೆ ವೈಶಾಲ್ಯತೆ ಮೆರೆದ ವ್ಯಕ್ತಿಯನ್ನು, ಹಿಂದಿನ ಪಠ್ಯದಲ್ಲಿದ್ದ ಸಂವಿಧಾನ ಕರಡು ರಚನಾ ಸಮಿತಿ ಸದಸ್ಯರ ಪಟ್ಟಿಯಿಂದ ಕೈಬಿಡುವ ಮೂಲಕ ಸಂಕುಚಿತತೆಯನ್ನು ಮೆರೆಯಿತು. ಇಂದು ಈ ಸಂಕುಚಿತತೆ ಇಡೀ ರಾಷ್ಟ್ರದಾದ್ಯಂತ ಹೆಮ್ಮರವಾಗಿ ಬೆಳೆದು ಆಳುವ ಪಕ್ಷದ ಧೋರಣೆಗೆ ಸಾಂಕೇತಿಕವಾಗಿದೆ. ಭಾರತ ಸ್ವತಂತ್ರ ಪಡೆದು 75 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಪ್ರಭುತ್ವ ಒಂದು ಕಡೆಗೆ ಸಾರನಾಥದ ಸೌಮ್ಯ ಹಾಗೂ ಗಂಭೀರ ಮುದ್ರೆಯ ಸಿಂಹಗಳನ್ನು ಎದೆಯುಬ್ಬಿಸಿ ಘರ್ಜಿಸುವಂತೆ ತಿರುಚಿ ರೂಪಿಸುವ ಕೆಲಸ ಮಾಡುತ್ತಾ ಮತ್ತೊಂದು ಕಡೆ ಕೇವಲ ತೋರ್ಪಡಿಕೆಗಾಗಿ ರಾಷ್ಟ್ರ ಲಾಂಛನಗಳನ್ನು ಗೌರವಿಸುವ ಮಾತನಾಡುತ್ತಿದೆ. ಆದರೆ ತನ್ನ ಆಚರಣೆ, ನಡೆ-ನುಡಿಗಳಲ್ಲಿ ಈ ಲಾಂಛನಗಳು ಪ್ರತಿನಿಧಿಸುವ ತತ್ವಗಳನ್ನು ಅನುಷ್ಠಾನಗೊಳಿಸುತ್ತಿಲ್ಲ. ಈ ಅಮೃತ ಮಹೋತ್ಸವದ ಸಮಯದಲ್ಲಿ ಕೇಸರಿ-ಬಿಳಿ-ಹಸಿರು ಮತ್ತು ನೀಲಿ ಬಣ್ಣದ ಅಶೋಕ ಚಕ್ರ ಯಾವುದನ್ನು ಪ್ರತಿನಿಧಿಸುತ್ತದೆ ಎಂಬುದು ಪ್ರಭುತ್ವದ ಅಂತರಂಗಕ್ಕೆ ಇಳಿಯುವುದೇ? ಸಂಘ ಪರಿವಾರದ ರಾಜಕೀಯಕ್ಕೆ ಜ್ಞಾನೋದಯ ಸಾಧ್ಯವೇ?

ಎಲ್ಲರಿಗೂ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಕನಸನ್ನು ಉಳಿಸಿಕೊಳ್ಳಲು ನಾವು ಎಚ್ಚರವಾಗಿರೋಣ!


ಇದನ್ನೂ ಓದಿ: ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...