Homeಮುಖಪುಟ75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ಆತಂಕದ ನಡುವೆ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗಿದೆ.

ಭಾಷಣದಲ್ಲಿ ದೇಶದ ಯೋಜನೆಗಳು ಶೇ 100 ರಷ್ಟು ಜನರಿಗೆ ತಲುಪಬೇಕು ಎಂದಿರುವ ಪ್ರಧಾನಿ, ಎರಡು ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗೆ ಕರೆ ನೀಡಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಸುದೀರ್ಘ ಮತ್ತು ಕಠಿಣ ಹೋರಾಟವನ್ನು ನಡೆಸಿದೆ ಎಲ್ಲಾ ಹಿಂದಿನ ನಾಯಕರಿಗೆ ಪ್ರಧಾನಿ ಗೌರವ ಸಲ್ಲಿಸಿದ್ದಾರೆ. ಜವಾಗಹರ್‌ ಲಾಲ್ ನೆಹರೂ, ಸರ್ದಾರ್ ಪಟೇಲ್, ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಚಂದ್ರಶೇಖರ್ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮ ಮುಂತಾದ ಮಹನೀಯರನ್ನು ಸ್ಮರಿಸಿದ್ದಾರೆ. ಭಾರತಕ್ಕೆ ಭವಿಷ್ಯದ ಹಾದಿಯನ್ನು ತೋರಿಸಿದ ಇವರುಗಳಿಗೆ ದೇಶವು ಋಣಿಯಾಗಿದೆ ಎಂದಿದ್ದಾರೆ.

“ನಮ್ಮ ಹಳ್ಳಿಗಳಿಗೆ 100% ರಸ್ತೆಗಳಿವೆ, ಶೇ.100 ರಷ್ಟು ಮನೆಗಳಿಗೆ ಬ್ಯಾಂಕ್ ಖಾತೆಗಳಿವೆ, ಶೇ.100 ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಇದೆ, ಶೇ.100 ರಷ್ಟು ಅರ್ಹ ವ್ಯಕ್ತಿಗಳಿಗೆ ಉಜ್ವಲ ಅನಿಲ ಯೋಜನೆಯ ಸಂಪರ್ಕವಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಉತ್ಪಾದನೆ ಮತ್ತು ಉದ್ಯೋಗವನ್ನು ಉತ್ತೇಜಿಸಲು ಸರ್ಕಾರವು 100 ಕೋಟಿ ರೂ.ಮೌಲ್ಯದ ಗತಿ ಶಕ್ತಿ ಯೋಜನೆಯನ್ನು ಆರಂಭಿಸಲಿದೆ. “ಎಲ್ಲಾ ತಯಾರಕರು ಜಾಗತಿಕ ಮಾರುಕಟ್ಟೆಯನ್ನು ಗುರಿಯಾಗಿಸಿಕೊಳ್ಳಬೇಕು. ಭಾರತವು ಜಾಗತಿಕ ಮಾರುಕಟ್ಟೆಯ ಕೇಂದ್ರವಾಗಬೇಕು” ಎಂದು ಎಂದು ಪ್ರಧಾನಿ ಹೇಳಿದ್ದಾರೆ.

ಬಾಲಕಿಯರಿಗಾಗಿ ಸೈನಿಕ ಶಾಲೆಗಳನ್ನು ತೆರೆಯಲಾಗುವುದು. 75 ವಂದೇ ಭಾರತ್ ರೈಲುಗಳು ಅಮೃತ್ ಹಬ್ಬದ 75 ವಾರಗಳಲ್ಲಿ ದೇಶದ ಮೂಲೆ ಮೂಲೆಯನ್ನು ಸಂಪರ್ಕಿಸಲಿವೆ. ಇನ್ನು ಮುಂದೆ, ಆಗಸ್ಟ್ 14 ಅನ್ನು “ವಿಭಜನೆಯ ಕರಾಳ ದಿನ” ಎಂದು ಆಚರಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹಾಜರಿದ್ದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ” ಒಲಂಪಿಕ್ಸ್ ನಲ್ಲಿ ನಮಗೆ ಹೆಮ್ಮೆ ತಂದ ಕ್ರೀಡಾಪಟುಗಳು ಇಂದು ನಮ್ಮ ನಡುವೆ ಇದ್ದಾರೆ. ಅವರ ಸಾಧನೆಯನ್ನು ಶ್ಲಾಘಿಸುವಂತೆ ನಾನು ರಾಷ್ಟ್ರವನ್ನು ಒತ್ತಾಯಿಸುತ್ತೇನೆ. ಅವರು ನಮ್ಮ ಹೃದಯವನ್ನು ಗೆಲ್ಲುವುದಲ್ಲದೆ ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಲಾಗುತ್ತದೆ. ಅಲ್ಲಿಯವರೆಗೆ ನಮ್ಮ ಗುರಿ ಭಾರತದ ನಿರ್ಮಾಣ ಆಗಿರಬೇಕು. ಯಾವ ರಾಷ್ಟ್ರಕ್ಕೂ ನಾವು ಕಡಿಮೆ ಇಲ್ಲ ಎನ್ನುವಂತೆ ಬೆಳೆಯಬೇಕು. ನಮ್ಮ ಎಲ್ಲಾ ಗುರಿಗಳ ಸಾಧನೆಗೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಬಹಳ ಮುಖ್ಯವಾಗಿದೆ” ಎಂದರು.

ರಾಷ್ಟ್ರೀಯ ಹೈಡ್ರೋಜನ್‌ ಮಿಷನ್‌ ಘೋಷಣೆ. ನಾವು ಭಾರತವನ್ನು ಹಸಿರು ಜಲಜನಕದ ಉತ್ಪಾದನೆ ಮತ್ತು ರಫ್ತು ಮಾಡುವ ಕೇಂದ್ರವನ್ನಾಗಿಸಬೇಕು. ಈಶಾನ್ಯ ಭಾಗ, ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕರಾವಳಿ ಪ್ರದೇಶ ಮತ್ತು ಬುಡಕಟ್ಟು ಪ್ರದೇಶಗಳು ಭವಿಷ್ಯದಲ್ಲಿ ಭಾರತದ ಅಭಿವೃದ್ಧಿಗೆ ಅಡಿಪಾಯಗಳಾಗಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿರ್ಣಯದ ಆಯೋಗವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ 54 ಕೋಟಿ ಜನರು ಲಸಿಕೆ ಪಡೆದಿದ್ದಾರೆ. ಎಲ್ಲಾ ಪ್ರಯತ್ನಗಳ ಹೊರತಾಗಿಯೂ ನಾವು ಅನೇಕ ಜನರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅನೇಕ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...