Homeಮುಖಪುಟಹರಿದ್ವಾರದ ದ್ವೇಷ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಕ್ರಮಕ್ಕಾಗಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದ 76 ಖ್ಯಾತ ವಕೀಲರು

ಹರಿದ್ವಾರದ ದ್ವೇಷ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಕ್ರಮಕ್ಕಾಗಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದ 76 ಖ್ಯಾತ ವಕೀಲರು

- Advertisement -
- Advertisement -

ಕಳೆದ ವಾರ ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಎರಡು ಸಭೆಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಮಾಡಲಾಗಿರುವ ದ್ವೇಷ ಭಾಷಣಗಳ ಸಂಭಾವ್ಯ ಪರಿಣಾಮಗಳನ್ನು ತಡೆಗಟ್ಟುವಂತೆ ದೇಶದ 76 ಖ್ಯಾತ ವಕೀಲರು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಎನ್‌.ವಿ. ರಮಣ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ಸಭೆಗಳಲ್ಲಿ ಬಲಪಂಥೀಯ ಹಿಂದೂ ಧಾರ್ಮಿಕ ಮುಖಂಡರು ಭಾರತದ ಜನಾಂಗೀಯ ಶುದ್ಧೀಕರಣಕ್ಕೆ ಕರೆ ನೀಡಿದ್ದರು. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ವಿಚಾರಣೆ ಮಾಡುವಂತೆ ಪತ್ರವು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ.

“ಮೇಲೆ ತಿಳಿಸಿದ ಘಟನೆಗಳು ಮತ್ತು ಅದೇ ಸಮಯದಲ್ಲಿ ಮಾಡಿದ ಭಾಷಣಗಳು ಕೇವಲ ದ್ವೇಷದ ಭಾಷಣಗಳಲ್ಲ. ಅದು ಇಡೀ ಸಮುದಾಯದ ಹತ್ಯೆಗೆ ಮುಕ್ತ ಕರೆ ನೀಡಿದ್ದಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

“ಅಲ್ಲಿ ಮಾಡಲಾಗಿರುವ ದ್ವೇಷ ಭಾಷಣಗಳಿಗೆ ಸಂಬಂಧಿಸಿದಂತೆ IPC ಯ 153, 153A, 153B, 295A, 504, 506, 120B, 34 ರ ನಿಬಂಧನೆಗಳ ಅಡಿಯಲ್ಲಿ ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಇನ್ನೂ ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ, ಇಂತಹ ಘಟನೆಗಳನ್ನು ತಡೆಯಲು ತುರ್ತು ನ್ಯಾಯಾಂಗ ಹಸ್ತಕ್ಷೇಪದ ಅಗತ್ಯವಿದೆ” ಎಂದು ಹೇಳಲಾಗಿದೆ.

ಪತ್ರ ಬರೆದ ಪ್ರಮುಖರದಲ್ಲಿ ವಕೀಲರು ಮತ್ತು ಪಾಟ್ನಾ ಹೈಕೋರ್ಟ್‌ ಮಾಜಿ ನ್ಯಾಯಾಧೀಶರಾಗಿರುವ ಅಂಜನಾ ಪ್ರಕಾಶ್, ವಕೀಲ ಸಲ್ಮಾನ್ ಖುರ್ಷಿದ್, ವಕೀಲ ಪ್ರಶಾಂತ್ ಭೂಷಣ್ ಸೇರಿದಂತೆ ಅನೇಕರು ಇದ್ದಾರೆ.

“… ಹೀಗೆ ಹೇಳಿದ ಭಾಷಣಗಳು ನಮ್ಮ ದೇಶದ ಏಕತೆ ಮತ್ತು ಸಮಗ್ರತೆಗೆ ಗಂಭೀರ ಬೆದರಿಕೆಯನ್ನುಂಟುಮಾಡುತ್ತವೆ. ಜೊತೆಗೆ ಲಕ್ಷಾಂತರ ಮುಸ್ಲಿಂ ನಾಗರಿಕರ ಜೀವಕ್ಕೆ ಅಪಾಯವನ್ನುಂಟುಮಾಡುತ್ತವೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ:ಸಿಎಂ ಕೇಜ್ರಿವಾಲ್‌ಗೆ ಶೂಟ್‌ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ ನರಸಿಂಗಾನಂದ ಹಿಂಬಾಲಕ

ಹಿಂದೂ ಹಿಂದೂ ರಕ್ಷಣಾ ಸೇನೆಯ ಪ್ರಬೋಧಾನಂದ ಗಿರಿ ಅವರು ಮ್ಯಾನ್ಮಾರ್ ಮಾದರಿಯಲ್ಲಿ ಭಾರತವನ್ನು ಕೂಡಾ “ಜನಾಂಗೀಯ ಶುದ್ಧೀಕರಣ” ಕ್ಕೆ ಕರೆ ನೀಡಿದ್ದ ಪ್ರಚೋದಕ ಹೇಳಿಕೆಗಳನ್ನು ವಕೀಲರು ಪತ್ರದಲ್ಲಿ ಎತ್ತಿ ತೋರಿಸಿದ್ದಾರೆ.

ಇವರು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಸೇರಿದಂತೆ ಬಿಜೆಪಿ ನಾಯಕರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಾರೆ.

ಸಮಾವೇಶದಲ್ಲಿ ‘ಸಾಧ್ವಿ ಅನ್ನಪೂರ್ಣ’ ಮಾಡಿದ ಮತ್ತೊಂದು ಭಾಷಣದಲ್ಲಿ, ಮುಸ್ಲಿಮರನ್ನು ಕೊಲ್ಲಲು ಮತ್ತು ಸೋಲಿಸಲು ಹಿಂದೂ ‘ಸೈನಿಕರ’ ಅಗತ್ಯವಿದೆ ಎಂದು ಹೇಳಿದ್ದರು. ಈ ಸಮಾವೇಶವನ್ನು ಧಾರ್ಮಿಕ ಮುಖಂಡರಾದ ಯತಿ ನರಸಿಂಹಾನಂದ್ ಅವರು ಆಯೋಜಿಸಿದ್ದರು.

ಇದನ್ನೂ ಓದಿ:ವಿವಾದಿತ ಯತಿ ನರಸಿಂಗಾನಂದ ಅರ್ಚಕನಾಗಿರುವ ದೇವಾಲಯದಲ್ಲಿ ವ್ಯಕ್ತಿಗೆ ಚೂರಿ ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...