Homeಮುಖಪುಟ2018ರಿಂದ ನೇಮಕಗೊಂಡ ಹೈಕೋರ್ಟ್ ನ್ಯಾಯಾಧೀಶರಲ್ಲಿ 77% ಪ್ರಬಲ ಜಾತಿಯವರು: ಕಾನೂನು ಸಚಿವಾಲಯ

2018ರಿಂದ ನೇಮಕಗೊಂಡ ಹೈಕೋರ್ಟ್ ನ್ಯಾಯಾಧೀಶರಲ್ಲಿ 77% ಪ್ರಬಲ ಜಾತಿಯವರು: ಕಾನೂನು ಸಚಿವಾಲಯ

- Advertisement -
- Advertisement -

ದೇಶದ ಹೈಕೋರ್ಟ್‌ಗಳಲ್ಲಿ 2018ರಿಂದ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇಕಡ 77ರಷ್ಟು ಮಂದಿ ಪ್ರಬಲ ಜಾತಿಗಳಿಗೆ ಸೇರಿದವರು ಎಂದು ಕೇಂದ್ರ ಕಾನೂನು ಸಚಿವಾಲಯ ಮಾರ್ಚ್ 20ರಂದು ಸಂಸತ್ತಿಗೆ ಒದಗಿಸಿದ ಮಾಹಿತಿಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಸಂಸದ ಮನೋಜ್ ಕುಮಾರ್ ಝಾ ಅವರು ಉನ್ನತ ನ್ಯಾಯಾಂಗದಲ್ಲಿನ ಸಾಮಾಜಿಕ ವೈವಿಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವಾಲಯ, ನೇಮಕಾತಿಗಳ ಜಾತಿವಾರು ದತ್ತಾಂಶ ಲಭ್ಯವಿಲ್ಲ ಎಂದು ಹೇಳಿದೆ. ಏಕೆಂದರೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರನ್ನು ಸಂವಿಧಾನದ ವಿಧಿಗಳ ಅಡಿಯಲ್ಲಿ ನೇಮಕ ಮಾಡಲಾಗುತ್ತದೆ. ಅವುಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಇಲ್ಲ ಎಂದಿದೆ.

ಆದಾಗ್ಯೂ, 2018ರಿಂದ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳಿಗೆ ಶಿಫಾರಸು ಮಾಡಲ್ಪಡುವವರು ತಮ್ಮ ಸಾಮಾಜಿಕ ಹಿನ್ನೆಲೆಯ ಬಗ್ಗೆ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಆದ್ದರಿಂದ, ಕೇಂದ್ರ ಸರ್ಕಾರ ಒದಗಿಸಿದ ದತ್ತಾಂಶವು ಶಿಫಾರಸು ಮಾಡಲ್ಪಟ್ಟವರು ಒದಗಿಸಿದ ಮಾಹಿತಿಯನ್ನು ಆಧರಿಸಿದೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

2018ರಿಂದ ಹೈಕೋರ್ಟ್‌ಗೆ ನೇಮಕಗೊಂಡ 715 ನ್ಯಾಯಾಧೀಶರಲ್ಲಿ 551 ಜನರು ಸಾಮಾನ್ಯ ವರ್ಗಕ್ಕೆ (General Category) ಸೇರಿದವರು ಎಂದು ಮೇಘವಾಲ್ ತಿಳಿಸಿದ್ದಾರೆ. 715 ನ್ಯಾಯಾಧೀಶರಲ್ಲಿ 22 (3%) ಜನರು ಪರಿಶಿಷ್ಟ ಜಾತಿ ಸಮುದಾಯಗಳಿಗೆ ಸೇರಿದವರು, 16 (2.2%) ಜನರು ಪರಿಶಿಷ್ಟ ಪಂಗಡಗಳಿಗೆ ಸೇರಿದವರು ಮತ್ತು 89 (12.4%) ಜನರು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ.

ಕಾನೂನು ಮತ್ತು ನ್ಯಾಯದ ಸ್ಥಾಯಿ ಸಮಿತಿಯು ಆಗಸ್ಟ್ 2023ರಲ್ಲಿ ಸಂಸತ್ತಿಗೆ ಇದೇ ರೀತಿಯ ಡೇಟಾವನ್ನು ಮಂಡಿಸಿತ್ತು.

ನ್ಯಾಯಾಂಗ ನೇಮಕಾತಿಗಳಲ್ಲಿ ಸಾಮಾಜಿಕ ವೈವಿಧ್ಯತೆಯನ್ನು ಕಾಪಾಡಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಅನ್ನು ಅನುಸರಿಸಿದೆಯೇ ಎಂಬ ಬಗ್ಗೆ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವಾಲಯ, “ಪ್ರಸ್ತಾವನೆಗಳನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ವಹಿಸಲಾಗಿದೆ” ಎಂದು ಹೇಳಿದೆ.

“ಆದಾಗ್ಯೂ, ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ನೇಮಕಾತಿಯಲ್ಲಿ ಸಾಮಾಜಿಕ ವೈವಿಧ್ಯತೆಯನ್ನು ಖಚಿತಪಡಿಸಿಕೊಳ್ಳಲು, ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಗೆ ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಸರ್ಕಾರ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವಿನಂತಿಸುತ್ತಿದೆ” ಎಂದು ಸಚಿವಾಲಯ ತಿಳಿಸಿದೆ.

ಅಂಬೇಡ್ಕರ್ ಸ್ಮಾರಕಕ್ಕೆ ಭೂಮಿ ನೀಡುವಂತೆ ದಲಿತ ನಾಯಕರಿಂದ ಫಡ್ನವೀಸ್‌ಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮೇಲ್ವಿಚಾರಕರ ಕಿರುಕುಳದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಎಲ್‌ಒ; ಸಹೋದ್ಯೋಗಿಗಳಿಂದ ಪ್ರತಿಭಟನೆ

ತೀವ್ರ ಕಳವಳಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯದಲ್ಲಿ ತೊಡಗಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುರಳಿಪುರ ನಿವಾಸಿ 25...

ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ...

ಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...