Homeಮುಖಪುಟ2018ರಿಂದ ನೇಮಕಗೊಂಡ ಹೈಕೋರ್ಟ್ ನ್ಯಾಯಾಧೀಶರಲ್ಲಿ 77% ಪ್ರಬಲ ಜಾತಿಯವರು: ಕಾನೂನು ಸಚಿವಾಲಯ

2018ರಿಂದ ನೇಮಕಗೊಂಡ ಹೈಕೋರ್ಟ್ ನ್ಯಾಯಾಧೀಶರಲ್ಲಿ 77% ಪ್ರಬಲ ಜಾತಿಯವರು: ಕಾನೂನು ಸಚಿವಾಲಯ

- Advertisement -
- Advertisement -

ದೇಶದ ಹೈಕೋರ್ಟ್‌ಗಳಲ್ಲಿ 2018ರಿಂದ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇಕಡ 77ರಷ್ಟು ಮಂದಿ ಪ್ರಬಲ ಜಾತಿಗಳಿಗೆ ಸೇರಿದವರು ಎಂದು ಕೇಂದ್ರ ಕಾನೂನು ಸಚಿವಾಲಯ ಮಾರ್ಚ್ 20ರಂದು ಸಂಸತ್ತಿಗೆ ಒದಗಿಸಿದ ಮಾಹಿತಿಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಸಂಸದ ಮನೋಜ್ ಕುಮಾರ್ ಝಾ ಅವರು ಉನ್ನತ ನ್ಯಾಯಾಂಗದಲ್ಲಿನ ಸಾಮಾಜಿಕ ವೈವಿಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವಾಲಯ, ನೇಮಕಾತಿಗಳ ಜಾತಿವಾರು ದತ್ತಾಂಶ ಲಭ್ಯವಿಲ್ಲ ಎಂದು ಹೇಳಿದೆ. ಏಕೆಂದರೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರನ್ನು ಸಂವಿಧಾನದ ವಿಧಿಗಳ ಅಡಿಯಲ್ಲಿ ನೇಮಕ ಮಾಡಲಾಗುತ್ತದೆ. ಅವುಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಇಲ್ಲ ಎಂದಿದೆ.

ಆದಾಗ್ಯೂ, 2018ರಿಂದ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳಿಗೆ ಶಿಫಾರಸು ಮಾಡಲ್ಪಡುವವರು ತಮ್ಮ ಸಾಮಾಜಿಕ ಹಿನ್ನೆಲೆಯ ಬಗ್ಗೆ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಆದ್ದರಿಂದ, ಕೇಂದ್ರ ಸರ್ಕಾರ ಒದಗಿಸಿದ ದತ್ತಾಂಶವು ಶಿಫಾರಸು ಮಾಡಲ್ಪಟ್ಟವರು ಒದಗಿಸಿದ ಮಾಹಿತಿಯನ್ನು ಆಧರಿಸಿದೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

2018ರಿಂದ ಹೈಕೋರ್ಟ್‌ಗೆ ನೇಮಕಗೊಂಡ 715 ನ್ಯಾಯಾಧೀಶರಲ್ಲಿ 551 ಜನರು ಸಾಮಾನ್ಯ ವರ್ಗಕ್ಕೆ (General Category) ಸೇರಿದವರು ಎಂದು ಮೇಘವಾಲ್ ತಿಳಿಸಿದ್ದಾರೆ. 715 ನ್ಯಾಯಾಧೀಶರಲ್ಲಿ 22 (3%) ಜನರು ಪರಿಶಿಷ್ಟ ಜಾತಿ ಸಮುದಾಯಗಳಿಗೆ ಸೇರಿದವರು, 16 (2.2%) ಜನರು ಪರಿಶಿಷ್ಟ ಪಂಗಡಗಳಿಗೆ ಸೇರಿದವರು ಮತ್ತು 89 (12.4%) ಜನರು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ.

ಕಾನೂನು ಮತ್ತು ನ್ಯಾಯದ ಸ್ಥಾಯಿ ಸಮಿತಿಯು ಆಗಸ್ಟ್ 2023ರಲ್ಲಿ ಸಂಸತ್ತಿಗೆ ಇದೇ ರೀತಿಯ ಡೇಟಾವನ್ನು ಮಂಡಿಸಿತ್ತು.

ನ್ಯಾಯಾಂಗ ನೇಮಕಾತಿಗಳಲ್ಲಿ ಸಾಮಾಜಿಕ ವೈವಿಧ್ಯತೆಯನ್ನು ಕಾಪಾಡಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಅನ್ನು ಅನುಸರಿಸಿದೆಯೇ ಎಂಬ ಬಗ್ಗೆ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವಾಲಯ, “ಪ್ರಸ್ತಾವನೆಗಳನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ವಹಿಸಲಾಗಿದೆ” ಎಂದು ಹೇಳಿದೆ.

“ಆದಾಗ್ಯೂ, ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ನೇಮಕಾತಿಯಲ್ಲಿ ಸಾಮಾಜಿಕ ವೈವಿಧ್ಯತೆಯನ್ನು ಖಚಿತಪಡಿಸಿಕೊಳ್ಳಲು, ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಗೆ ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಸರ್ಕಾರ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವಿನಂತಿಸುತ್ತಿದೆ” ಎಂದು ಸಚಿವಾಲಯ ತಿಳಿಸಿದೆ.

ಅಂಬೇಡ್ಕರ್ ಸ್ಮಾರಕಕ್ಕೆ ಭೂಮಿ ನೀಡುವಂತೆ ದಲಿತ ನಾಯಕರಿಂದ ಫಡ್ನವೀಸ್‌ಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...