Homeಕರ್ನಾಟಕಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

- Advertisement -
- Advertisement -

2022-23ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಬಿಸಿಯೂಟ ಸಹಾಯಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳ ಗೌರವಧನ ಹೆಚ್ಚಿಸಲಾಗಿದೆ. ಇದರಿಂದ 4.45 ಲಕ್ಷ ಜನರಿಗೆ ಫಲ ದೊರೆತಿದ್ದು, ಒಟ್ಟು 775 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿಯವರು ಈ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಆದರೆ ಕಳೆದ ವರ್ಷ ಸರ್ಕಾರ ಅಷ್ಟೆಲ್ಲ ಮಾಡಿದರೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೊಮ್ಮಾಯಿಯವರು ಮೇಲೆ ಉಲ್ಲೇಖಿಸಿದ ಬಹುತೇಕ ಸಮುದಾಯಗಳು ಇಂದಿಗೂ ಹೋರಾಟದಲ್ಲಿ ನಿರತವಾಗಿವೆ.

ಅಲಹಾಬಾದ್ ಹೈಕೋರ್ಟ್ ಆದೇಶದಂತೆ ಶಾಲೆಗಳಲ್ಲಿ ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ (AITUC) ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.

ಬಿಸಿಯೂಟ ತಯಾರಕರ ಹೋರಾಟ

ಆರೋಗ್ಯ ಇಲಾಖೆಯ NHM ಒಳಗುತ್ತಿಗೆ ನೌಕರರು ಖಾಯಂ ಮಾಡಲು ಒತ್ತಾಯಿಸಿ ಪ್ರತಿಭಟನೆಗೆ ಕೂತಿದ್ದಾರೆ.

ಸ್ಥಳೀಯ ಸಂಸ್ಥೆಗಳ ನೌಕರರೆಂದು ಪರಿಗಣಿಸಿ, ಶತಮಾನಗಳ ಬಿಟ್ಟಿ ಚಾಕರಿ ತೊಲಗಿಸಿ ಎಂದು ಆಗ್ರಹಿಸಿ ಮಸಣ ಕಾರ್ಮಿಕರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

PCP ನೌಕರರ ಹುದ್ದೆ ವ್ಯತ್ಯಾಸ ಗೊಳಿಸಿ ಹೊರಗುತ್ತಿಗೆಗೆ ಬದಲಾಯಿಸಿರುವ ಕ್ರಮವನ್ನು ವಿರೋಧಿಸಿ, ಕಳೆದ ಎರಡು ವರ್ಷಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯದ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರನ್ನು ʼಡಿʼ ಗ್ರೂಪ್‌ ನೌಕರರ ಪಟ್ಟಿಗೆ ಸೇರಿಸಿ ಮೇಲ್ದರ್ಜೆಗೇರಿಸಬೇಕು, ಗೌರವಧನ ಬೇಡ ನಿಶ್ಚಿತ ವೇತನ ಕೊಡಿ ಎಂದು ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘ ಹೋರಾಟ ನಡೆಸುತ್ತಿದೆ.

ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಿ ದೌರ್ಜನ್ಯ ಎಸಗಿದ BJP ಸರ್ಕಾರ
ಅಂಗನವಾಡಿ ಅವ್ವಂದಿರನ್ನು ಪೊಲೀಸರು ಬಂಧಿಸಿದ್ದರು

ಕಳೆದ ತಿಂಗಳು ಅಂಗನವಾಡಿ ಅವ್ವಂದಿರು ವಾರಗಳ ಕಾಲ ಹಗಲು ರಾತ್ರಿ ಫ್ರೀಡಂ ಪಾರ್ಕ್‌ನಲ್ಲಿ ಚಳಿಯನ್ನು ಲೆಕ್ಕಿಸದೇ ಹೋರಾಟ ನಡೆಸಿದ್ದರು. ಅದಕ್ಕೂ ಹಿಂದೆ ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು ತಿಂಗಳುಗಟ್ಟಲೇ ಹೋರಾಟ ನಡೆಸಿದ್ದರು.

ಆಶಾ ಕಾರ್ಯಕರ್ತೆಯರು ಸಾಗರೋಪಾದಿಯಾಗಿ ಬೆಂಗಳೂರಿಗೆ ಆಗಮಿಸಿ ಹತ್ತಾರು ಹೋರಾಟಗಳನ್ನು ನಡೆಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ.

ಇನ್ನು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾರಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಎರಡು ತಿಂಗಳಿನಿಂದ ಹೋರಾಟ ನಿರತವಾಗಿದೆ.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ

ಬೊಮ್ಮಾಯಿಯವರು ನಾವು 4.45 ಲಕ್ಷ ಜನರಿಗೆ ಫಲ ದೊರೆಯಲು ಒಟ್ಟು 775 ಕೋಟಿ ರೂ ಬಿಡುಗಡೆ ಮಾಡಿದ್ದೇವೆ ಎಂದು ಬಜೆಟ್ ಸಂದರ್ಭದಲ್ಲಿ ಹೇಳಿಕೊಳ್ಳುತ್ತಿದ್ದಾರೆ. ಹಾಗಿದ್ದರೂ ಇಂದೂ ಸಹ ಆ ಸಮುದಾಯಗಳು ಏಕೆ ಹೋರಾಟ ನಿರತವಾಗಿವೆ? ಅವರ ನೋವುಗಳನ್ನು ಕೇಳಲು, ಬಗೆಹರಿಸಲು ಯಾವ ಕ್ರಮ ಕೈಗೊಂಡಿದ್ದಾರೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಲೇ ಇವೆ.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...