Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...