Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...