Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...