Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...