Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...