Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...