Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...