Homeಮುಖಪುಟ2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

- Advertisement -
- Advertisement -

ಈ ಅಂಕಿಅಂಶವು ಸಚಿವಾಲಯದಿಂದ ಬಿಡುಗಡೆ ಆಗಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ಸಮುದಾಯದ ಪ್ರಾತಿನಿಧ್ಯವನ್ನು ಖಾತರಿಪಡಿಸುವಲ್ಲಿ ಕೊಲಿಜಿಯಂ ವಿಫಲವಾಗಿದೆ ಎಂದು ಎತ್ತಿ ತೋರುತ್ತಿದೆ.
ಇಂದಿರಾ ಜೈನ್‌ಸಿಂಗ್ ಅವರು ಡಿಸೆಂಬರ್ 26ರಂದು ಲೀಫ್‌ಲೆಟ್ ಅಂತರ್ಜಾಲ ಪತ್ರಿಕೆಗೆ ಬರೆದ ಲೇಖನದ ಅನುಸಾರ, “ಸರ್ಕಾರದ ನಿರಂತರ ದಾಳಿಯಿಂದಾಗಿ ಸುಪ್ರೀಂಕೋರ್ಟ್ ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಇತ್ತೀಚಿಗೆ ಕೇಂದ್ರ ಕಾನೂನು ಸಚಿವರು ಮತ್ತು ಉಪ ರಾಷ್ಟ್ರಪತಿಗಳು ಮಾಡಿದ ಭಾಷಣದಿಂದ ಇದು ಇನ್ನಷ್ಟು ಸ್ಪಷ್ಟವಾಗಿದೆ. ನ್ಯಾಯಾಂಗ ನೇಮಕಾತಿಗಳಲ್ಲಿ ಪ್ರಾತಿನಿಧ್ಯ ಮುಖ್ಯವಾದ ಅಗತ್ಯವಾಗಿದ್ದರೂ, ಕಾಯಿಲೆಗಿಂತಲೂ ಚಿಕಿತ್ಸೆಯೇ ಕೆಟ್ಟದಾಗಿದೆ”.

ಈ ಹಿನ್ನಲೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವರದಿಯ ಪ್ರಕಾರ, ಕಳೆದ 5 ವರ್ಷಗಳಲ್ಲಿ (2018ರಿಂದ 2022ರ ಅವಧಿಯಲ್ಲಿ) ಹೈಕೋರ್ಟ್‌ಗೆ ನೇಮಕಗೊಂಡ ನ್ಯಾಯಧೀಶರ ಪೈಕಿ ಶೇ. 79 ಪ್ರಮಾಣದಷ್ಟು ಬಲಾಢ್ಯ ಜಾತಿಗಳೇ ಇದ್ದಾರೆಂಬುದು ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ಅಸಮಾನ ಪ್ರಾತಿನಿಧ್ಯವನ್ನು ಸ್ಪಷ್ಟಪಡಿಸುತ್ತದೆ. ಸಂಸದೀಯ ಸಮಿತಿ ಮುಂದೆ ಕೇಂದ್ರ ಕಾನೂನು ಸಚಿವಾಲಯವು ಈ ಅಂಕಿಅಂಶಗಳನ್ನು ಮಂಡಿಸಿದೆ.

ಕಾನೂನು ಮತ್ತು ನ್ಯಾಯದ ಸಂಸದೀಯ ಸ್ಥಾಯಿ ಸಮಿತಿಯ ಎದುರು ಕಾನೂನು ಸಚಿವಾಲಯ ಈ ವಿಷಯವನ್ನು ಬಹಿರಂಗಪಡಿಸಿದೆ; ಉನ್ನತ ನ್ಯಾಯಾಂಗದಲ್ಲಿ ಎಲ್ಲ ಸಮುದಾಯದವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸುಪ್ರೀಂಕೋರ್ಟ್ ಮೊದಲಿಗೆ ಮಾರ್ಗಸೂಚಿಯನ್ನು ರೂಪಿಸಲಾಗಿತ್ತು; ಕೊಲಿಜಿಯಂ ವ್ಯವಸ್ಥೆಯು 30 ವರ್ಷಗಳಿಂದ ಅಸ್ತಿತ್ವದಲ್ಲಿ ಇದ್ದರು ಕೂಡ ನ್ಯಾಯಾಧೀಶರುಗಳ ನೇಮಕಾತಿಯಲ್ಲಿ ಮಾರ್ಗಸೂಚಿಯ ಅನಿಷ್ಠಾನ ಕಾಣೆಯಾಗಿದೆ ಎಂದು ಕೂಡ ಹೇಳಿದೆ.

ಇದನ್ನೂ ಓದಿರಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ದೇಶದ ಎಲ್ಲಾ 25 ಹೈಕೋರ್ಟ್‌‌ಗಳಲ್ಲಿ ನೇಮಕ ಆದ ನ್ಯಾಯಾಮೂರ್ತಿಗಳಲ್ಲಿ ಹೆಚ್ಚಿನವರೆಲ್ಲಾ ಸವರ್ಣೀಯ ಜಾರಿಯವರು ಎಂಬ ಅಂಶ ಅಘಾತಕಾರಿಯಾಗಿದೆ. ನ್ಯಾಯಾಂಗ ನೇಮಕಾತಿಯಲ್ಲಿ ‘ತಾರತಮ್ಯ’ ಆಗಿದೆ; ದೇಶದಲ್ಲಿ ಹಿಂದುಳಿದ ವರ್ಗದವರು (ಒಬಿಸಿ) 35% ಜನಸಂಖ್ಯೆ ಹೊಂದಿದ್ದಾರೆ. ಆದರೆ ಆ ವರ್ಗದಿಂದ ನ್ಯಾಯಪೀಠ ಸ್ಥಾನದಲ್ಲಿ 11%ಕ್ಕಿಂತ ಕಡಿಮೆ ನ್ಯಾಯಾಧೀಶರು ನೇಮಕ ಆಗಿದ್ದಾರೆ. ಮತ್ತೊಂದು ತಾರತಮ್ಯದ ಆರೋಪವೆಂದರೆ ದೇಶದ ಎಲ್ಲಾ ಹೈಕೋರ್ಟ್‌ಗಳಲ್ಲಿ 2018ರಿಂದ ಒಟ್ಟು 537 ನ್ಯಾಯಾಧೀಶರುಗಳು ನೇಮಕ ಆಗಿದ್ದಾರೆ. ಅವರಲ್ಲಿ ಅಲ್ಪಸಂಖ್ಯಾತ ಸಮುದಾಯದವರು 2.6%, ಪರಿಶಿಷ್ಟ ಜಾತಿಯವರು 2.8%, ಪರಿಶಿಷ್ಟ ಪಂಗಡದವರು ಕೇವಲ 1.3% ನೇಮಕ ಆಗಿದ್ದಾರೆ.

ಕಾನೂನು ಸಚಿವಾಲಯದ ಪ್ರಕಾರ, “ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ನ್ಯಾಯಾಲಯದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಿಯಾಗಿ ನಿಭಾಯಿಸುವ ಪ್ರಾಥಮಿಕ ಹೊಣೆಗಾರಿಕೆಯು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಹಾಗೂ ಹೈಕೋರ್ಟ್‌ನ ಕೊಲಿಜಿಯಂದು ಆಗಿರುತ್ತದೆ”.

ಮೇಲಿನ ಹೇಳಿಕೆಯನ್ನು ಸ್ಥಾಯಿ ಸಮಿತಿ ಮುಂದೆ ನೀಡುವ ಮೂಲಕ ಕಾನೂನು ಸಚಿವಾಲಯವು ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಂಗವು ನ್ಯಾಯಾಧೀಶರ ನೇಮಕಾತಿಯಲ್ಲಿ ಪ್ರಾತಿನಿಧ್ಯದ ಪ್ರಶ್ನೆಯನ್ನು ಆದ್ಯತೆಯಾಗಿ ಮಾಡಿಕೊಳ್ಳಬೇಕು. ಆದ್ದರಿಂದ ಇದನ್ನು ನ್ಯಾಯಾಂಗವೇ ಸ್ವತಃ ಪರಿಹರಿಸಬೇಕಾಗಿದೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳು ಎಂದು ನ್ಯಾಯಾಧೀಶರ ಕೊಲಿಜಿಯಂ ಎರಡು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತದೆ. ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದ 4 ಸದಸ್ಯರ ಸುಪ್ರೀಂಕೋರ್ಟ್‌‍ನ ಕೊಲಿಜಿಯಂ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕ ಮಾಡಲು ಪ್ರಸ್ತಾಪವನ್ನು ತಯಾರು ಮಾಡುತ್ತದೆ. ಮುಖ್ಯ ನ್ಯಾಯಾಧೀಶರ ನೇತೃತ್ವದ 3 ಸದಸ್ಯರ ಹೈಕೋರ್ಟ್ ಕೊಲಿಜಿಯಂ ಹೆಸರುಗಳನ್ನು ಶಿಫಾರಸು ಮಾಡುತ್ತದೆ.

ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಕಾನೂನು ಸಚಿವಾಲಯವು ಉನ್ನತ ನ್ಯಾಯಾಂಗದಲ್ಲಿ “ಸಾಮಾಜಿಕ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಸಮಸ್ಯೆಯನ್ನು ಪರಿಹರಿಸುವ” ಅಗತ್ಯವನ್ನು ಒತ್ತಿ ಹೇಳಿದೆ. ಕೊಲಿಜಿಯಂನ ಮುಖ್ಯ ಕೆಲಸಗಳಲ್ಲಿ ಒಂದಾದ ನ್ಯಾಯಾಧೀಶರ ನೇಮಕಾತಿಯಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಅದಕ್ಕೆ ಸಾಧ್ಯವಾಗಿಲ್ಲ ಎಂದು ಕಾನೂನಿನ ಸಂಸದೀಯ ಸ್ಥಾಯಿ ಸಮಿತಿ ಮುಂದೆ ಕಾನೂನು ಸಚಿವಾಲಯ ಹೇಳಿದೆ.

“ಸರ್ಕಾರವು ಆಯಾ ನ್ಯಾಯಾಲಯದ ಕೊಲಿಜಿಯಂನಿಂದ ಶಿಫಾರಸು ಮಾಡಲ್ಪಟ್ಟ ಜನರನ್ನು ಮಾತ್ರ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರನ್ನಾಗಿ ನೇಮಿಸುತ್ತದೆ” ಎಂದು ಕೂಡ ಸಚಿವಾಲಯ ಹೇಳಿದೆ.

ಆದಾಗ್ಯೂ, ಸಚಿವಾಲಯವು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ನೀತಿಗಳನ್ನೂ ಸ್ಪಷ್ಟಪಡಿಸಿತು. ಸಂವಿಧಾನದ 217 ಮತ್ತು 224 ವಿಧಿಗಳ ಪ್ರಕಾರ ಯಾವುದೇ ಜಾತಿ ಅಥವಾ ವರ್ಗದ ವ್ಯಕ್ತಿಗಳಿಗೆ ಮೀಸಲಾತಿಯನ್ನು ಒದಗಿಸುವುದಿಲ್ಲ. ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ ಸಾಮಾಜಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಿ ಪಟ್ಟಿ ನೀಡಬೇಕು ಎಂದು ಮುಖ್ಯ ನ್ಯಾಯಾಧೀಶರುಗಳನ್ನು ಕಾಲಕಾಲಕ್ಕೆ ಸಚಿವಾಲಯ ಆಗ್ರಹಿಸುತ್ತಿದೆ ಎಂದಿದೆ.

ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳಿಸಿದ ಶಿಫಾರಸುಗಳನ್ನು ಕಾನೂನು ಸಚಿವಾಲಯವು ಪರಿಶೀಲಿಸುತ್ತದೆ. ಗುಪ್ತಚರ ಇಲಾಖೆಯು ಶಿಫಾರಸ್ಸು ಮಾಡಲಾದ ಈ ಅಭ್ಯರ್ಥಿಗಳ ಹಿನ್ನಲೆಯನ್ನು ಪರಿಶೀಲಿಸುತ್ತದೆ. ನಂತರ ಹೈಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಒಳಗೊಂಡಂತೆ ವಿವರವಾದ ವರದಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂಗೆ ಅವರ ಸಲಹೆಗಾಗಿ ಕಳುಹಿಸಲಾಗುತ್ತದೆ. ನಂತರ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂನಿಂದ ಹೆಸರುಗಳು ಅಂತಿಮಗೊಳ್ಳುತ್ತದೆ, ಕೇಂದ್ರ ಸರ್ಕಾರ ನೇಮಕಾತಿಗಳ ಅಧಿಸೂಚನೆ ಪ್ರಕಟಿಸುತ್ತದೆ.

ಒಂದು ವೇಳೆ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಭಿನ್ನಾಭಿಪ್ರಾಯ ಬಂದರೆ, ಸರ್ಕಾರವು ಅಂತಹ ಹೆಸರುಗಳನ್ನು ಮರುಪರಿಶೀಲನೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂಗೆ ವಾಪಾಸು ಕಳಿಸುತ್ತದೆ. ಆದರೆ ಅಸ್ತಿತ್ವದಲ್ಲಿರುವ ಕೊಲಿಜಿಯಂ ವ್ಯವಸ್ಥೆ ಪ್ರಕಾರ ಸುಪ್ರೀಂಕೋರ್ಟ್‌ನ ಕೊಲಿಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ ಅವರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡುವುದಕ್ಕೆ ಸರ್ಕಾರವು ಬದ್ಧವಾಗಿರಬೇಕಿರುತ್ತದೆ.

ಇದನ್ನೂ ಓದಿರಿ: ಅದಾನಿ ಹಗರಣ ವಿಚಾರ: ಹೂಡಿಕೆದಾರರ ರಕ್ಷಣೆಗೆ ಸಮಿತಿ ರಚಿಸಲು ಅಭ್ಯಂತರವಿಲ್ಲ ಎಂದ ಕೇಂದ್ರ

ಈ ಪರಿಸ್ಥಿತಿ ನ್ಯಾಯಾಲಯದಲ್ಲಿ ಮಾತ್ರವಲ್ಲ, ಮೀಸಲಾತಿ ಇಲ್ಲದ ಎಲ್ಲಾ ವಲಯಗಳಲ್ಲಿ ಇದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮೇಲಿನ ತಾರತಮ್ಯವು ಸಾಂಸ್ಥಿಕವಾದದ್ದು ಮತ್ತು ವ್ಯವಸ್ಥಿತವಾದದ್ದು ಆಗಿದೆ. ದೇಶ ಸ್ವತಂತ್ರಗೊಂಡ ಇಷ್ಟು ವರ್ಷಗಳ ನಂತರ ಇಂದಿಗೂ ದುರ್ಬಲ ವರ್ಗಗಳು ತಮ್ಮ ಅಸ್ತಿತ್ವಕ್ಕಾಗಿ, ಪ್ರಾತಿನಿಧ್ಯಗಾಗಿ ಹೋರಾಡಲೇ ಬೇಕಾದಂತಹ ಪರಿಸ್ಥಿತಿ ಇದೆ. ಉನ್ನತ ನ್ಯಾಯಾಂಗದಲ್ಲಿನ ಈ ತಾರತಮ್ಯ ಪ್ರಜಾಪ್ರಭುತ್ವದ ಅಡಿಪಾಯವನ್ನೆ ಅಣಕಿಸುತ್ತಿದೆ. ಸಂವಿಧಾನದ ಅನುಷ್ಠಾನ ಮತ್ತು ಪಾಲನೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ಪ್ರಧಾನ ಕರ್ತವ್ಯ.

ಸಮಾಜದ ಎಲ್ಲಾ ರಂಗಗಳಲ್ಲಿ ದುರ್ಬಲ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸಿಕೊಡಬೇಕು ಎಂಬುದು ಸಂವಿಧಾನದ ಆಶಯ ಆಗಿದೆ. ಕಲ್ಪಿಸಿ ಕೊಡುವುದು ಉನ್ನತ ನ್ಯಾಯಾಲಯದ ಕರ್ತವ್ಯ. ಸುಪ್ರೀಂಕೋರ್ಟ್ ಈ ತಾರತಮ್ಯ ಹೋಗಲಾಡಿಸಲು ಮುಂದಾಗಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಯಾಂಗವನ್ನು ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ನಮಗೆ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯು ಬೇಕಿದೆ. ಸ್ವತಂತ್ರ ನ್ಯಾಯಾಂಗದೊಳಗೆ ಸಮಾನ ಪ್ರಾತಿನಿಧ್ಯವು ಬೇಕಿದೆ. ಆಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ.

ಲೇಖನ: ಮಹೇಶ್ ಕುಮಾರ್
ಅನುವಾದ: ಸಂಜಯ್
ಮೂಲ: ನ್ಯೂಸ್‌ಕ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...