Homeಮುಖಪುಟ2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

- Advertisement -
- Advertisement -

ಈ ಅಂಕಿಅಂಶವು ಸಚಿವಾಲಯದಿಂದ ಬಿಡುಗಡೆ ಆಗಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ಸಮುದಾಯದ ಪ್ರಾತಿನಿಧ್ಯವನ್ನು ಖಾತರಿಪಡಿಸುವಲ್ಲಿ ಕೊಲಿಜಿಯಂ ವಿಫಲವಾಗಿದೆ ಎಂದು ಎತ್ತಿ ತೋರುತ್ತಿದೆ.
ಇಂದಿರಾ ಜೈನ್‌ಸಿಂಗ್ ಅವರು ಡಿಸೆಂಬರ್ 26ರಂದು ಲೀಫ್‌ಲೆಟ್ ಅಂತರ್ಜಾಲ ಪತ್ರಿಕೆಗೆ ಬರೆದ ಲೇಖನದ ಅನುಸಾರ, “ಸರ್ಕಾರದ ನಿರಂತರ ದಾಳಿಯಿಂದಾಗಿ ಸುಪ್ರೀಂಕೋರ್ಟ್ ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಇತ್ತೀಚಿಗೆ ಕೇಂದ್ರ ಕಾನೂನು ಸಚಿವರು ಮತ್ತು ಉಪ ರಾಷ್ಟ್ರಪತಿಗಳು ಮಾಡಿದ ಭಾಷಣದಿಂದ ಇದು ಇನ್ನಷ್ಟು ಸ್ಪಷ್ಟವಾಗಿದೆ. ನ್ಯಾಯಾಂಗ ನೇಮಕಾತಿಗಳಲ್ಲಿ ಪ್ರಾತಿನಿಧ್ಯ ಮುಖ್ಯವಾದ ಅಗತ್ಯವಾಗಿದ್ದರೂ, ಕಾಯಿಲೆಗಿಂತಲೂ ಚಿಕಿತ್ಸೆಯೇ ಕೆಟ್ಟದಾಗಿದೆ”.

ಈ ಹಿನ್ನಲೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವರದಿಯ ಪ್ರಕಾರ, ಕಳೆದ 5 ವರ್ಷಗಳಲ್ಲಿ (2018ರಿಂದ 2022ರ ಅವಧಿಯಲ್ಲಿ) ಹೈಕೋರ್ಟ್‌ಗೆ ನೇಮಕಗೊಂಡ ನ್ಯಾಯಧೀಶರ ಪೈಕಿ ಶೇ. 79 ಪ್ರಮಾಣದಷ್ಟು ಬಲಾಢ್ಯ ಜಾತಿಗಳೇ ಇದ್ದಾರೆಂಬುದು ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ಅಸಮಾನ ಪ್ರಾತಿನಿಧ್ಯವನ್ನು ಸ್ಪಷ್ಟಪಡಿಸುತ್ತದೆ. ಸಂಸದೀಯ ಸಮಿತಿ ಮುಂದೆ ಕೇಂದ್ರ ಕಾನೂನು ಸಚಿವಾಲಯವು ಈ ಅಂಕಿಅಂಶಗಳನ್ನು ಮಂಡಿಸಿದೆ.

ಕಾನೂನು ಮತ್ತು ನ್ಯಾಯದ ಸಂಸದೀಯ ಸ್ಥಾಯಿ ಸಮಿತಿಯ ಎದುರು ಕಾನೂನು ಸಚಿವಾಲಯ ಈ ವಿಷಯವನ್ನು ಬಹಿರಂಗಪಡಿಸಿದೆ; ಉನ್ನತ ನ್ಯಾಯಾಂಗದಲ್ಲಿ ಎಲ್ಲ ಸಮುದಾಯದವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸುಪ್ರೀಂಕೋರ್ಟ್ ಮೊದಲಿಗೆ ಮಾರ್ಗಸೂಚಿಯನ್ನು ರೂಪಿಸಲಾಗಿತ್ತು; ಕೊಲಿಜಿಯಂ ವ್ಯವಸ್ಥೆಯು 30 ವರ್ಷಗಳಿಂದ ಅಸ್ತಿತ್ವದಲ್ಲಿ ಇದ್ದರು ಕೂಡ ನ್ಯಾಯಾಧೀಶರುಗಳ ನೇಮಕಾತಿಯಲ್ಲಿ ಮಾರ್ಗಸೂಚಿಯ ಅನಿಷ್ಠಾನ ಕಾಣೆಯಾಗಿದೆ ಎಂದು ಕೂಡ ಹೇಳಿದೆ.

ಇದನ್ನೂ ಓದಿರಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ದೇಶದ ಎಲ್ಲಾ 25 ಹೈಕೋರ್ಟ್‌‌ಗಳಲ್ಲಿ ನೇಮಕ ಆದ ನ್ಯಾಯಾಮೂರ್ತಿಗಳಲ್ಲಿ ಹೆಚ್ಚಿನವರೆಲ್ಲಾ ಸವರ್ಣೀಯ ಜಾರಿಯವರು ಎಂಬ ಅಂಶ ಅಘಾತಕಾರಿಯಾಗಿದೆ. ನ್ಯಾಯಾಂಗ ನೇಮಕಾತಿಯಲ್ಲಿ ‘ತಾರತಮ್ಯ’ ಆಗಿದೆ; ದೇಶದಲ್ಲಿ ಹಿಂದುಳಿದ ವರ್ಗದವರು (ಒಬಿಸಿ) 35% ಜನಸಂಖ್ಯೆ ಹೊಂದಿದ್ದಾರೆ. ಆದರೆ ಆ ವರ್ಗದಿಂದ ನ್ಯಾಯಪೀಠ ಸ್ಥಾನದಲ್ಲಿ 11%ಕ್ಕಿಂತ ಕಡಿಮೆ ನ್ಯಾಯಾಧೀಶರು ನೇಮಕ ಆಗಿದ್ದಾರೆ. ಮತ್ತೊಂದು ತಾರತಮ್ಯದ ಆರೋಪವೆಂದರೆ ದೇಶದ ಎಲ್ಲಾ ಹೈಕೋರ್ಟ್‌ಗಳಲ್ಲಿ 2018ರಿಂದ ಒಟ್ಟು 537 ನ್ಯಾಯಾಧೀಶರುಗಳು ನೇಮಕ ಆಗಿದ್ದಾರೆ. ಅವರಲ್ಲಿ ಅಲ್ಪಸಂಖ್ಯಾತ ಸಮುದಾಯದವರು 2.6%, ಪರಿಶಿಷ್ಟ ಜಾತಿಯವರು 2.8%, ಪರಿಶಿಷ್ಟ ಪಂಗಡದವರು ಕೇವಲ 1.3% ನೇಮಕ ಆಗಿದ್ದಾರೆ.

ಕಾನೂನು ಸಚಿವಾಲಯದ ಪ್ರಕಾರ, “ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ನ್ಯಾಯಾಲಯದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಿಯಾಗಿ ನಿಭಾಯಿಸುವ ಪ್ರಾಥಮಿಕ ಹೊಣೆಗಾರಿಕೆಯು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಹಾಗೂ ಹೈಕೋರ್ಟ್‌ನ ಕೊಲಿಜಿಯಂದು ಆಗಿರುತ್ತದೆ”.

ಮೇಲಿನ ಹೇಳಿಕೆಯನ್ನು ಸ್ಥಾಯಿ ಸಮಿತಿ ಮುಂದೆ ನೀಡುವ ಮೂಲಕ ಕಾನೂನು ಸಚಿವಾಲಯವು ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಂಗವು ನ್ಯಾಯಾಧೀಶರ ನೇಮಕಾತಿಯಲ್ಲಿ ಪ್ರಾತಿನಿಧ್ಯದ ಪ್ರಶ್ನೆಯನ್ನು ಆದ್ಯತೆಯಾಗಿ ಮಾಡಿಕೊಳ್ಳಬೇಕು. ಆದ್ದರಿಂದ ಇದನ್ನು ನ್ಯಾಯಾಂಗವೇ ಸ್ವತಃ ಪರಿಹರಿಸಬೇಕಾಗಿದೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳು ಎಂದು ನ್ಯಾಯಾಧೀಶರ ಕೊಲಿಜಿಯಂ ಎರಡು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತದೆ. ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದ 4 ಸದಸ್ಯರ ಸುಪ್ರೀಂಕೋರ್ಟ್‌‍ನ ಕೊಲಿಜಿಯಂ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕ ಮಾಡಲು ಪ್ರಸ್ತಾಪವನ್ನು ತಯಾರು ಮಾಡುತ್ತದೆ. ಮುಖ್ಯ ನ್ಯಾಯಾಧೀಶರ ನೇತೃತ್ವದ 3 ಸದಸ್ಯರ ಹೈಕೋರ್ಟ್ ಕೊಲಿಜಿಯಂ ಹೆಸರುಗಳನ್ನು ಶಿಫಾರಸು ಮಾಡುತ್ತದೆ.

ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಕಾನೂನು ಸಚಿವಾಲಯವು ಉನ್ನತ ನ್ಯಾಯಾಂಗದಲ್ಲಿ “ಸಾಮಾಜಿಕ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಸಮಸ್ಯೆಯನ್ನು ಪರಿಹರಿಸುವ” ಅಗತ್ಯವನ್ನು ಒತ್ತಿ ಹೇಳಿದೆ. ಕೊಲಿಜಿಯಂನ ಮುಖ್ಯ ಕೆಲಸಗಳಲ್ಲಿ ಒಂದಾದ ನ್ಯಾಯಾಧೀಶರ ನೇಮಕಾತಿಯಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಅದಕ್ಕೆ ಸಾಧ್ಯವಾಗಿಲ್ಲ ಎಂದು ಕಾನೂನಿನ ಸಂಸದೀಯ ಸ್ಥಾಯಿ ಸಮಿತಿ ಮುಂದೆ ಕಾನೂನು ಸಚಿವಾಲಯ ಹೇಳಿದೆ.

“ಸರ್ಕಾರವು ಆಯಾ ನ್ಯಾಯಾಲಯದ ಕೊಲಿಜಿಯಂನಿಂದ ಶಿಫಾರಸು ಮಾಡಲ್ಪಟ್ಟ ಜನರನ್ನು ಮಾತ್ರ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರನ್ನಾಗಿ ನೇಮಿಸುತ್ತದೆ” ಎಂದು ಕೂಡ ಸಚಿವಾಲಯ ಹೇಳಿದೆ.

ಆದಾಗ್ಯೂ, ಸಚಿವಾಲಯವು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ನೀತಿಗಳನ್ನೂ ಸ್ಪಷ್ಟಪಡಿಸಿತು. ಸಂವಿಧಾನದ 217 ಮತ್ತು 224 ವಿಧಿಗಳ ಪ್ರಕಾರ ಯಾವುದೇ ಜಾತಿ ಅಥವಾ ವರ್ಗದ ವ್ಯಕ್ತಿಗಳಿಗೆ ಮೀಸಲಾತಿಯನ್ನು ಒದಗಿಸುವುದಿಲ್ಲ. ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ ಸಾಮಾಜಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಿ ಪಟ್ಟಿ ನೀಡಬೇಕು ಎಂದು ಮುಖ್ಯ ನ್ಯಾಯಾಧೀಶರುಗಳನ್ನು ಕಾಲಕಾಲಕ್ಕೆ ಸಚಿವಾಲಯ ಆಗ್ರಹಿಸುತ್ತಿದೆ ಎಂದಿದೆ.

ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳಿಸಿದ ಶಿಫಾರಸುಗಳನ್ನು ಕಾನೂನು ಸಚಿವಾಲಯವು ಪರಿಶೀಲಿಸುತ್ತದೆ. ಗುಪ್ತಚರ ಇಲಾಖೆಯು ಶಿಫಾರಸ್ಸು ಮಾಡಲಾದ ಈ ಅಭ್ಯರ್ಥಿಗಳ ಹಿನ್ನಲೆಯನ್ನು ಪರಿಶೀಲಿಸುತ್ತದೆ. ನಂತರ ಹೈಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಒಳಗೊಂಡಂತೆ ವಿವರವಾದ ವರದಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂಗೆ ಅವರ ಸಲಹೆಗಾಗಿ ಕಳುಹಿಸಲಾಗುತ್ತದೆ. ನಂತರ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂನಿಂದ ಹೆಸರುಗಳು ಅಂತಿಮಗೊಳ್ಳುತ್ತದೆ, ಕೇಂದ್ರ ಸರ್ಕಾರ ನೇಮಕಾತಿಗಳ ಅಧಿಸೂಚನೆ ಪ್ರಕಟಿಸುತ್ತದೆ.

ಒಂದು ವೇಳೆ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಭಿನ್ನಾಭಿಪ್ರಾಯ ಬಂದರೆ, ಸರ್ಕಾರವು ಅಂತಹ ಹೆಸರುಗಳನ್ನು ಮರುಪರಿಶೀಲನೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂಗೆ ವಾಪಾಸು ಕಳಿಸುತ್ತದೆ. ಆದರೆ ಅಸ್ತಿತ್ವದಲ್ಲಿರುವ ಕೊಲಿಜಿಯಂ ವ್ಯವಸ್ಥೆ ಪ್ರಕಾರ ಸುಪ್ರೀಂಕೋರ್ಟ್‌ನ ಕೊಲಿಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ ಅವರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡುವುದಕ್ಕೆ ಸರ್ಕಾರವು ಬದ್ಧವಾಗಿರಬೇಕಿರುತ್ತದೆ.

ಇದನ್ನೂ ಓದಿರಿ: ಅದಾನಿ ಹಗರಣ ವಿಚಾರ: ಹೂಡಿಕೆದಾರರ ರಕ್ಷಣೆಗೆ ಸಮಿತಿ ರಚಿಸಲು ಅಭ್ಯಂತರವಿಲ್ಲ ಎಂದ ಕೇಂದ್ರ

ಈ ಪರಿಸ್ಥಿತಿ ನ್ಯಾಯಾಲಯದಲ್ಲಿ ಮಾತ್ರವಲ್ಲ, ಮೀಸಲಾತಿ ಇಲ್ಲದ ಎಲ್ಲಾ ವಲಯಗಳಲ್ಲಿ ಇದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮೇಲಿನ ತಾರತಮ್ಯವು ಸಾಂಸ್ಥಿಕವಾದದ್ದು ಮತ್ತು ವ್ಯವಸ್ಥಿತವಾದದ್ದು ಆಗಿದೆ. ದೇಶ ಸ್ವತಂತ್ರಗೊಂಡ ಇಷ್ಟು ವರ್ಷಗಳ ನಂತರ ಇಂದಿಗೂ ದುರ್ಬಲ ವರ್ಗಗಳು ತಮ್ಮ ಅಸ್ತಿತ್ವಕ್ಕಾಗಿ, ಪ್ರಾತಿನಿಧ್ಯಗಾಗಿ ಹೋರಾಡಲೇ ಬೇಕಾದಂತಹ ಪರಿಸ್ಥಿತಿ ಇದೆ. ಉನ್ನತ ನ್ಯಾಯಾಂಗದಲ್ಲಿನ ಈ ತಾರತಮ್ಯ ಪ್ರಜಾಪ್ರಭುತ್ವದ ಅಡಿಪಾಯವನ್ನೆ ಅಣಕಿಸುತ್ತಿದೆ. ಸಂವಿಧಾನದ ಅನುಷ್ಠಾನ ಮತ್ತು ಪಾಲನೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ಪ್ರಧಾನ ಕರ್ತವ್ಯ.

ಸಮಾಜದ ಎಲ್ಲಾ ರಂಗಗಳಲ್ಲಿ ದುರ್ಬಲ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸಿಕೊಡಬೇಕು ಎಂಬುದು ಸಂವಿಧಾನದ ಆಶಯ ಆಗಿದೆ. ಕಲ್ಪಿಸಿ ಕೊಡುವುದು ಉನ್ನತ ನ್ಯಾಯಾಲಯದ ಕರ್ತವ್ಯ. ಸುಪ್ರೀಂಕೋರ್ಟ್ ಈ ತಾರತಮ್ಯ ಹೋಗಲಾಡಿಸಲು ಮುಂದಾಗಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಯಾಂಗವನ್ನು ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ನಮಗೆ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯು ಬೇಕಿದೆ. ಸ್ವತಂತ್ರ ನ್ಯಾಯಾಂಗದೊಳಗೆ ಸಮಾನ ಪ್ರಾತಿನಿಧ್ಯವು ಬೇಕಿದೆ. ಆಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ.

ಲೇಖನ: ಮಹೇಶ್ ಕುಮಾರ್
ಅನುವಾದ: ಸಂಜಯ್
ಮೂಲ: ನ್ಯೂಸ್‌ಕ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...