Homeಮುಖಪುಟ2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

- Advertisement -
- Advertisement -

ಈ ಅಂಕಿಅಂಶವು ಸಚಿವಾಲಯದಿಂದ ಬಿಡುಗಡೆ ಆಗಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ಸಮುದಾಯದ ಪ್ರಾತಿನಿಧ್ಯವನ್ನು ಖಾತರಿಪಡಿಸುವಲ್ಲಿ ಕೊಲಿಜಿಯಂ ವಿಫಲವಾಗಿದೆ ಎಂದು ಎತ್ತಿ ತೋರುತ್ತಿದೆ.
ಇಂದಿರಾ ಜೈನ್‌ಸಿಂಗ್ ಅವರು ಡಿಸೆಂಬರ್ 26ರಂದು ಲೀಫ್‌ಲೆಟ್ ಅಂತರ್ಜಾಲ ಪತ್ರಿಕೆಗೆ ಬರೆದ ಲೇಖನದ ಅನುಸಾರ, “ಸರ್ಕಾರದ ನಿರಂತರ ದಾಳಿಯಿಂದಾಗಿ ಸುಪ್ರೀಂಕೋರ್ಟ್ ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಇತ್ತೀಚಿಗೆ ಕೇಂದ್ರ ಕಾನೂನು ಸಚಿವರು ಮತ್ತು ಉಪ ರಾಷ್ಟ್ರಪತಿಗಳು ಮಾಡಿದ ಭಾಷಣದಿಂದ ಇದು ಇನ್ನಷ್ಟು ಸ್ಪಷ್ಟವಾಗಿದೆ. ನ್ಯಾಯಾಂಗ ನೇಮಕಾತಿಗಳಲ್ಲಿ ಪ್ರಾತಿನಿಧ್ಯ ಮುಖ್ಯವಾದ ಅಗತ್ಯವಾಗಿದ್ದರೂ, ಕಾಯಿಲೆಗಿಂತಲೂ ಚಿಕಿತ್ಸೆಯೇ ಕೆಟ್ಟದಾಗಿದೆ”.

ಈ ಹಿನ್ನಲೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವರದಿಯ ಪ್ರಕಾರ, ಕಳೆದ 5 ವರ್ಷಗಳಲ್ಲಿ (2018ರಿಂದ 2022ರ ಅವಧಿಯಲ್ಲಿ) ಹೈಕೋರ್ಟ್‌ಗೆ ನೇಮಕಗೊಂಡ ನ್ಯಾಯಧೀಶರ ಪೈಕಿ ಶೇ. 79 ಪ್ರಮಾಣದಷ್ಟು ಬಲಾಢ್ಯ ಜಾತಿಗಳೇ ಇದ್ದಾರೆಂಬುದು ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ಅಸಮಾನ ಪ್ರಾತಿನಿಧ್ಯವನ್ನು ಸ್ಪಷ್ಟಪಡಿಸುತ್ತದೆ. ಸಂಸದೀಯ ಸಮಿತಿ ಮುಂದೆ ಕೇಂದ್ರ ಕಾನೂನು ಸಚಿವಾಲಯವು ಈ ಅಂಕಿಅಂಶಗಳನ್ನು ಮಂಡಿಸಿದೆ.

ಕಾನೂನು ಮತ್ತು ನ್ಯಾಯದ ಸಂಸದೀಯ ಸ್ಥಾಯಿ ಸಮಿತಿಯ ಎದುರು ಕಾನೂನು ಸಚಿವಾಲಯ ಈ ವಿಷಯವನ್ನು ಬಹಿರಂಗಪಡಿಸಿದೆ; ಉನ್ನತ ನ್ಯಾಯಾಂಗದಲ್ಲಿ ಎಲ್ಲ ಸಮುದಾಯದವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸುಪ್ರೀಂಕೋರ್ಟ್ ಮೊದಲಿಗೆ ಮಾರ್ಗಸೂಚಿಯನ್ನು ರೂಪಿಸಲಾಗಿತ್ತು; ಕೊಲಿಜಿಯಂ ವ್ಯವಸ್ಥೆಯು 30 ವರ್ಷಗಳಿಂದ ಅಸ್ತಿತ್ವದಲ್ಲಿ ಇದ್ದರು ಕೂಡ ನ್ಯಾಯಾಧೀಶರುಗಳ ನೇಮಕಾತಿಯಲ್ಲಿ ಮಾರ್ಗಸೂಚಿಯ ಅನಿಷ್ಠಾನ ಕಾಣೆಯಾಗಿದೆ ಎಂದು ಕೂಡ ಹೇಳಿದೆ.

ಇದನ್ನೂ ಓದಿರಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ದೇಶದ ಎಲ್ಲಾ 25 ಹೈಕೋರ್ಟ್‌‌ಗಳಲ್ಲಿ ನೇಮಕ ಆದ ನ್ಯಾಯಾಮೂರ್ತಿಗಳಲ್ಲಿ ಹೆಚ್ಚಿನವರೆಲ್ಲಾ ಸವರ್ಣೀಯ ಜಾರಿಯವರು ಎಂಬ ಅಂಶ ಅಘಾತಕಾರಿಯಾಗಿದೆ. ನ್ಯಾಯಾಂಗ ನೇಮಕಾತಿಯಲ್ಲಿ ‘ತಾರತಮ್ಯ’ ಆಗಿದೆ; ದೇಶದಲ್ಲಿ ಹಿಂದುಳಿದ ವರ್ಗದವರು (ಒಬಿಸಿ) 35% ಜನಸಂಖ್ಯೆ ಹೊಂದಿದ್ದಾರೆ. ಆದರೆ ಆ ವರ್ಗದಿಂದ ನ್ಯಾಯಪೀಠ ಸ್ಥಾನದಲ್ಲಿ 11%ಕ್ಕಿಂತ ಕಡಿಮೆ ನ್ಯಾಯಾಧೀಶರು ನೇಮಕ ಆಗಿದ್ದಾರೆ. ಮತ್ತೊಂದು ತಾರತಮ್ಯದ ಆರೋಪವೆಂದರೆ ದೇಶದ ಎಲ್ಲಾ ಹೈಕೋರ್ಟ್‌ಗಳಲ್ಲಿ 2018ರಿಂದ ಒಟ್ಟು 537 ನ್ಯಾಯಾಧೀಶರುಗಳು ನೇಮಕ ಆಗಿದ್ದಾರೆ. ಅವರಲ್ಲಿ ಅಲ್ಪಸಂಖ್ಯಾತ ಸಮುದಾಯದವರು 2.6%, ಪರಿಶಿಷ್ಟ ಜಾತಿಯವರು 2.8%, ಪರಿಶಿಷ್ಟ ಪಂಗಡದವರು ಕೇವಲ 1.3% ನೇಮಕ ಆಗಿದ್ದಾರೆ.

ಕಾನೂನು ಸಚಿವಾಲಯದ ಪ್ರಕಾರ, “ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ನ್ಯಾಯಾಲಯದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಿಯಾಗಿ ನಿಭಾಯಿಸುವ ಪ್ರಾಥಮಿಕ ಹೊಣೆಗಾರಿಕೆಯು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಹಾಗೂ ಹೈಕೋರ್ಟ್‌ನ ಕೊಲಿಜಿಯಂದು ಆಗಿರುತ್ತದೆ”.

ಮೇಲಿನ ಹೇಳಿಕೆಯನ್ನು ಸ್ಥಾಯಿ ಸಮಿತಿ ಮುಂದೆ ನೀಡುವ ಮೂಲಕ ಕಾನೂನು ಸಚಿವಾಲಯವು ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಂಗವು ನ್ಯಾಯಾಧೀಶರ ನೇಮಕಾತಿಯಲ್ಲಿ ಪ್ರಾತಿನಿಧ್ಯದ ಪ್ರಶ್ನೆಯನ್ನು ಆದ್ಯತೆಯಾಗಿ ಮಾಡಿಕೊಳ್ಳಬೇಕು. ಆದ್ದರಿಂದ ಇದನ್ನು ನ್ಯಾಯಾಂಗವೇ ಸ್ವತಃ ಪರಿಹರಿಸಬೇಕಾಗಿದೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳು ಎಂದು ನ್ಯಾಯಾಧೀಶರ ಕೊಲಿಜಿಯಂ ಎರಡು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತದೆ. ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದ 4 ಸದಸ್ಯರ ಸುಪ್ರೀಂಕೋರ್ಟ್‌‍ನ ಕೊಲಿಜಿಯಂ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕ ಮಾಡಲು ಪ್ರಸ್ತಾಪವನ್ನು ತಯಾರು ಮಾಡುತ್ತದೆ. ಮುಖ್ಯ ನ್ಯಾಯಾಧೀಶರ ನೇತೃತ್ವದ 3 ಸದಸ್ಯರ ಹೈಕೋರ್ಟ್ ಕೊಲಿಜಿಯಂ ಹೆಸರುಗಳನ್ನು ಶಿಫಾರಸು ಮಾಡುತ್ತದೆ.

ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಕಾನೂನು ಸಚಿವಾಲಯವು ಉನ್ನತ ನ್ಯಾಯಾಂಗದಲ್ಲಿ “ಸಾಮಾಜಿಕ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಸಮಸ್ಯೆಯನ್ನು ಪರಿಹರಿಸುವ” ಅಗತ್ಯವನ್ನು ಒತ್ತಿ ಹೇಳಿದೆ. ಕೊಲಿಜಿಯಂನ ಮುಖ್ಯ ಕೆಲಸಗಳಲ್ಲಿ ಒಂದಾದ ನ್ಯಾಯಾಧೀಶರ ನೇಮಕಾತಿಯಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಅದಕ್ಕೆ ಸಾಧ್ಯವಾಗಿಲ್ಲ ಎಂದು ಕಾನೂನಿನ ಸಂಸದೀಯ ಸ್ಥಾಯಿ ಸಮಿತಿ ಮುಂದೆ ಕಾನೂನು ಸಚಿವಾಲಯ ಹೇಳಿದೆ.

“ಸರ್ಕಾರವು ಆಯಾ ನ್ಯಾಯಾಲಯದ ಕೊಲಿಜಿಯಂನಿಂದ ಶಿಫಾರಸು ಮಾಡಲ್ಪಟ್ಟ ಜನರನ್ನು ಮಾತ್ರ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರನ್ನಾಗಿ ನೇಮಿಸುತ್ತದೆ” ಎಂದು ಕೂಡ ಸಚಿವಾಲಯ ಹೇಳಿದೆ.

ಆದಾಗ್ಯೂ, ಸಚಿವಾಲಯವು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ನೀತಿಗಳನ್ನೂ ಸ್ಪಷ್ಟಪಡಿಸಿತು. ಸಂವಿಧಾನದ 217 ಮತ್ತು 224 ವಿಧಿಗಳ ಪ್ರಕಾರ ಯಾವುದೇ ಜಾತಿ ಅಥವಾ ವರ್ಗದ ವ್ಯಕ್ತಿಗಳಿಗೆ ಮೀಸಲಾತಿಯನ್ನು ಒದಗಿಸುವುದಿಲ್ಲ. ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ ಸಾಮಾಜಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಿ ಪಟ್ಟಿ ನೀಡಬೇಕು ಎಂದು ಮುಖ್ಯ ನ್ಯಾಯಾಧೀಶರುಗಳನ್ನು ಕಾಲಕಾಲಕ್ಕೆ ಸಚಿವಾಲಯ ಆಗ್ರಹಿಸುತ್ತಿದೆ ಎಂದಿದೆ.

ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳಿಸಿದ ಶಿಫಾರಸುಗಳನ್ನು ಕಾನೂನು ಸಚಿವಾಲಯವು ಪರಿಶೀಲಿಸುತ್ತದೆ. ಗುಪ್ತಚರ ಇಲಾಖೆಯು ಶಿಫಾರಸ್ಸು ಮಾಡಲಾದ ಈ ಅಭ್ಯರ್ಥಿಗಳ ಹಿನ್ನಲೆಯನ್ನು ಪರಿಶೀಲಿಸುತ್ತದೆ. ನಂತರ ಹೈಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಒಳಗೊಂಡಂತೆ ವಿವರವಾದ ವರದಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂಗೆ ಅವರ ಸಲಹೆಗಾಗಿ ಕಳುಹಿಸಲಾಗುತ್ತದೆ. ನಂತರ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂನಿಂದ ಹೆಸರುಗಳು ಅಂತಿಮಗೊಳ್ಳುತ್ತದೆ, ಕೇಂದ್ರ ಸರ್ಕಾರ ನೇಮಕಾತಿಗಳ ಅಧಿಸೂಚನೆ ಪ್ರಕಟಿಸುತ್ತದೆ.

ಒಂದು ವೇಳೆ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಭಿನ್ನಾಭಿಪ್ರಾಯ ಬಂದರೆ, ಸರ್ಕಾರವು ಅಂತಹ ಹೆಸರುಗಳನ್ನು ಮರುಪರಿಶೀಲನೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂಗೆ ವಾಪಾಸು ಕಳಿಸುತ್ತದೆ. ಆದರೆ ಅಸ್ತಿತ್ವದಲ್ಲಿರುವ ಕೊಲಿಜಿಯಂ ವ್ಯವಸ್ಥೆ ಪ್ರಕಾರ ಸುಪ್ರೀಂಕೋರ್ಟ್‌ನ ಕೊಲಿಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ ಅವರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡುವುದಕ್ಕೆ ಸರ್ಕಾರವು ಬದ್ಧವಾಗಿರಬೇಕಿರುತ್ತದೆ.

ಇದನ್ನೂ ಓದಿರಿ: ಅದಾನಿ ಹಗರಣ ವಿಚಾರ: ಹೂಡಿಕೆದಾರರ ರಕ್ಷಣೆಗೆ ಸಮಿತಿ ರಚಿಸಲು ಅಭ್ಯಂತರವಿಲ್ಲ ಎಂದ ಕೇಂದ್ರ

ಈ ಪರಿಸ್ಥಿತಿ ನ್ಯಾಯಾಲಯದಲ್ಲಿ ಮಾತ್ರವಲ್ಲ, ಮೀಸಲಾತಿ ಇಲ್ಲದ ಎಲ್ಲಾ ವಲಯಗಳಲ್ಲಿ ಇದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮೇಲಿನ ತಾರತಮ್ಯವು ಸಾಂಸ್ಥಿಕವಾದದ್ದು ಮತ್ತು ವ್ಯವಸ್ಥಿತವಾದದ್ದು ಆಗಿದೆ. ದೇಶ ಸ್ವತಂತ್ರಗೊಂಡ ಇಷ್ಟು ವರ್ಷಗಳ ನಂತರ ಇಂದಿಗೂ ದುರ್ಬಲ ವರ್ಗಗಳು ತಮ್ಮ ಅಸ್ತಿತ್ವಕ್ಕಾಗಿ, ಪ್ರಾತಿನಿಧ್ಯಗಾಗಿ ಹೋರಾಡಲೇ ಬೇಕಾದಂತಹ ಪರಿಸ್ಥಿತಿ ಇದೆ. ಉನ್ನತ ನ್ಯಾಯಾಂಗದಲ್ಲಿನ ಈ ತಾರತಮ್ಯ ಪ್ರಜಾಪ್ರಭುತ್ವದ ಅಡಿಪಾಯವನ್ನೆ ಅಣಕಿಸುತ್ತಿದೆ. ಸಂವಿಧಾನದ ಅನುಷ್ಠಾನ ಮತ್ತು ಪಾಲನೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ಪ್ರಧಾನ ಕರ್ತವ್ಯ.

ಸಮಾಜದ ಎಲ್ಲಾ ರಂಗಗಳಲ್ಲಿ ದುರ್ಬಲ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸಿಕೊಡಬೇಕು ಎಂಬುದು ಸಂವಿಧಾನದ ಆಶಯ ಆಗಿದೆ. ಕಲ್ಪಿಸಿ ಕೊಡುವುದು ಉನ್ನತ ನ್ಯಾಯಾಲಯದ ಕರ್ತವ್ಯ. ಸುಪ್ರೀಂಕೋರ್ಟ್ ಈ ತಾರತಮ್ಯ ಹೋಗಲಾಡಿಸಲು ಮುಂದಾಗಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಯಾಂಗವನ್ನು ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ನಮಗೆ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯು ಬೇಕಿದೆ. ಸ್ವತಂತ್ರ ನ್ಯಾಯಾಂಗದೊಳಗೆ ಸಮಾನ ಪ್ರಾತಿನಿಧ್ಯವು ಬೇಕಿದೆ. ಆಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ.

ಲೇಖನ: ಮಹೇಶ್ ಕುಮಾರ್
ಅನುವಾದ: ಸಂಜಯ್
ಮೂಲ: ನ್ಯೂಸ್‌ಕ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...