Homeಮುಖಪುಟಸಂಗ್ರೂರ್ ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

ಸಂಗ್ರೂರ್ ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಪಟಿಯಾಲದ ಸಂಗ್ರೂರ್ ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಇಬ್ಬರು ಕೈದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ಎಂಟು ಕೈದಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಮಲೇರ್‌ಕೋಟ್ಲಾದ ಮೊಹಮ್ಮದ್ ಹ್ಯಾರಿಸ್, ಕಲ್ಯಾಣ್‌ನ ಧರ್ಮಿಂದರ್ ಸಿಂಗ್ ಘೋರಾ, ಮಲೇರ್‌ಕೋಟ್ಲಾದ ಸೆಹಬಾಜ್ ಗೋಮಾ ಮತ್ತು ಹಮಿದಿಯ ಗಗನ್‌ದೀಪ್ ಸಿಂಗ್ ಮೇಲೆ ಆರೋಪಿಗಳ ಗುಂಪು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದೆ. ಧರ್ಮಿಂದರ್ ಘೋರಾ ಮತ್ತು ಮೊಹಮ್ಮದ್ ಹರೀಶ್ ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲಾ ಕಾರಾಗೃಹದಲ್ಲಿ ನಡೆದ ಘರ್ಷಣೆಯಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರು ಕೈದಿಗಳನ್ನು ಆಸ್ಪತ್ರೆಗೆ ತರಲಾಗಿದ್ದು, ಇಬ್ಬರು ಆಗಲೇ ಸಾವನ್ನಪ್ಪಿದ್ದರು. ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಟಿಯಾಲಯದ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಸಂಗ್ರೂರು ಜಿಲ್ಲಾಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಜೈಲಿನೊಳಗೆ ಗ್ಯಾಂಗ್‌ ವಾರ್‌ ನಡೆದಿಲ್ಲ, ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ಗಂಭೀರ ಅಪರಾಧಗಳ ಪ್ರಕರಣದಲ್ಲಿ ಬಂಧಿತ ಕೆಲವರ ನಡುವೆ ಘರ್ಷಣೆ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ತ್ವರಿತವಾಗಿ ಮಧ್ಯಪ್ರವೇಶಿಸಿದ್ದಾರೆ ಎಂದು ಪೊಲೀಸರು ಮತ್ತು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಸಂಗ್ರೂರ್ ಜೈಲಿನ ಡೆಪ್ಯುಟಿ ಸೂಪರಿಂಟೆಂಡೆಂಟ್ ಆದರ್ಶಪಾಲ್ ಸಿಂಗ್ ಅವರ ದೂರಿನ ಮೇರೆಗೆ ಘರ್ಷಣೆಗೆ ಸಂಬಂಧಿಸಿ ಪೊಲೀಸರು ಎಂಟು ಕೈದಿಗಳ ವಿರುದ್ಧ ಸೆಕ್ಷನ್ 302 (ಕೊಲೆ), 307 (ಕೊಲೆಗೆ ಯತ್ನ), 353, 186, 148 (ಗಲಭೆ), 149ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳನ್ನು ಅಮೃತಸರದ ರಸೂಲ್‌ಪುರ್ ಕುಲಾರ್‌ನ ಸಿಮ್ರಂಜಿತ್ ಸಿಂಗ್ ಅಲಿಯಾಸ್ ಜುಜರ್, ಸಂಗ್ರೂರಿನ ಭವಾನಿಗಢದ ಅಮನದೀಪ್ ಸಿಂಗ್ ಅಲಿಯಾಸ್ ಅಮರ್, ಸತ್ಗುರ್ ಸಿಂಗ್ ಐಲಾಸ್ ಲಾಲಿ, ಸಂಗ್ರೂರಿನ ಚಜ್ಜ್ಲಿ, ಸಂಗ್ರೂರಿನ  ಗುರ್ಧಿಯನ್ ಸಿಂಗ್ ಅಲಿಯಾಸ್ ಭೋಲಾ, ಫರೀದ್‌ಕೋಟ್‌ನ ಮಂಜಿಂದರ್ ಸಿಂಗ್ ಕಾಲಾ, ಅರ್ಷದೀಪ್ ಸಿಂಗ್ ಭಿಖಿ, ಸಿಮ್ರಂಜಿತ್ ಸಿಂಗ್ ಅಲಿಯಾಸ್ ಸಿಮ್ಮಿ ಮತ್ತು ತರ್ನ್ ತರನ್‌ನ ದಿಲ್‌ಪ್ರಿತ್ ಸಿಂಗ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಶುಕ್ರವಾರ ತಡರಾತ್ರಿ ತಮ್ಮ ಬ್ಯಾರಕ್‌ನಿಂದ ಹೊರಬಂದು ಜೈಲಿನಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಹಲ್ಲೆ ನಡೆಸಿ ನಂತರ ಕೆಲವು ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಸಂಗ್ರೂರ್‌ನ ಎಸ್‌ಎಸ್‌ಪಿ ಸರ್ತಾಜ್ ಸಿಂಗ್ ಚಾಹಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಗುಂಪುಗಳ ನಡುವಿನ ದ್ವೇಷದಿಂದ ಕೃತ್ಯ ನಡೆದಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲಾಯಿತು, ಆದರೆ ಇಬ್ಬರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಈ  ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...