Homeಮುಖಪುಟಸಂಗ್ರೂರ್ ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

ಸಂಗ್ರೂರ್ ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಪಟಿಯಾಲದ ಸಂಗ್ರೂರ್ ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಇಬ್ಬರು ಕೈದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ, ಘಟನೆಗೆ ಸಂಬಂಧಿಸಿದಂತೆ ಎಂಟು ಕೈದಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಮಲೇರ್‌ಕೋಟ್ಲಾದ ಮೊಹಮ್ಮದ್ ಹ್ಯಾರಿಸ್, ಕಲ್ಯಾಣ್‌ನ ಧರ್ಮಿಂದರ್ ಸಿಂಗ್ ಘೋರಾ, ಮಲೇರ್‌ಕೋಟ್ಲಾದ ಸೆಹಬಾಜ್ ಗೋಮಾ ಮತ್ತು ಹಮಿದಿಯ ಗಗನ್‌ದೀಪ್ ಸಿಂಗ್ ಮೇಲೆ ಆರೋಪಿಗಳ ಗುಂಪು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದೆ. ಧರ್ಮಿಂದರ್ ಘೋರಾ ಮತ್ತು ಮೊಹಮ್ಮದ್ ಹರೀಶ್ ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲಾ ಕಾರಾಗೃಹದಲ್ಲಿ ನಡೆದ ಘರ್ಷಣೆಯಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರು ಕೈದಿಗಳನ್ನು ಆಸ್ಪತ್ರೆಗೆ ತರಲಾಗಿದ್ದು, ಇಬ್ಬರು ಆಗಲೇ ಸಾವನ್ನಪ್ಪಿದ್ದರು. ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಟಿಯಾಲಯದ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಸಂಗ್ರೂರು ಜಿಲ್ಲಾಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಜೈಲಿನೊಳಗೆ ಗ್ಯಾಂಗ್‌ ವಾರ್‌ ನಡೆದಿಲ್ಲ, ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ಗಂಭೀರ ಅಪರಾಧಗಳ ಪ್ರಕರಣದಲ್ಲಿ ಬಂಧಿತ ಕೆಲವರ ನಡುವೆ ಘರ್ಷಣೆ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ತ್ವರಿತವಾಗಿ ಮಧ್ಯಪ್ರವೇಶಿಸಿದ್ದಾರೆ ಎಂದು ಪೊಲೀಸರು ಮತ್ತು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಸಂಗ್ರೂರ್ ಜೈಲಿನ ಡೆಪ್ಯುಟಿ ಸೂಪರಿಂಟೆಂಡೆಂಟ್ ಆದರ್ಶಪಾಲ್ ಸಿಂಗ್ ಅವರ ದೂರಿನ ಮೇರೆಗೆ ಘರ್ಷಣೆಗೆ ಸಂಬಂಧಿಸಿ ಪೊಲೀಸರು ಎಂಟು ಕೈದಿಗಳ ವಿರುದ್ಧ ಸೆಕ್ಷನ್ 302 (ಕೊಲೆ), 307 (ಕೊಲೆಗೆ ಯತ್ನ), 353, 186, 148 (ಗಲಭೆ), 149ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳನ್ನು ಅಮೃತಸರದ ರಸೂಲ್‌ಪುರ್ ಕುಲಾರ್‌ನ ಸಿಮ್ರಂಜಿತ್ ಸಿಂಗ್ ಅಲಿಯಾಸ್ ಜುಜರ್, ಸಂಗ್ರೂರಿನ ಭವಾನಿಗಢದ ಅಮನದೀಪ್ ಸಿಂಗ್ ಅಲಿಯಾಸ್ ಅಮರ್, ಸತ್ಗುರ್ ಸಿಂಗ್ ಐಲಾಸ್ ಲಾಲಿ, ಸಂಗ್ರೂರಿನ ಚಜ್ಜ್ಲಿ, ಸಂಗ್ರೂರಿನ  ಗುರ್ಧಿಯನ್ ಸಿಂಗ್ ಅಲಿಯಾಸ್ ಭೋಲಾ, ಫರೀದ್‌ಕೋಟ್‌ನ ಮಂಜಿಂದರ್ ಸಿಂಗ್ ಕಾಲಾ, ಅರ್ಷದೀಪ್ ಸಿಂಗ್ ಭಿಖಿ, ಸಿಮ್ರಂಜಿತ್ ಸಿಂಗ್ ಅಲಿಯಾಸ್ ಸಿಮ್ಮಿ ಮತ್ತು ತರ್ನ್ ತರನ್‌ನ ದಿಲ್‌ಪ್ರಿತ್ ಸಿಂಗ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಶುಕ್ರವಾರ ತಡರಾತ್ರಿ ತಮ್ಮ ಬ್ಯಾರಕ್‌ನಿಂದ ಹೊರಬಂದು ಜೈಲಿನಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಹಲ್ಲೆ ನಡೆಸಿ ನಂತರ ಕೆಲವು ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಸಂಗ್ರೂರ್‌ನ ಎಸ್‌ಎಸ್‌ಪಿ ಸರ್ತಾಜ್ ಸಿಂಗ್ ಚಾಹಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಗುಂಪುಗಳ ನಡುವಿನ ದ್ವೇಷದಿಂದ ಕೃತ್ಯ ನಡೆದಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲಾಯಿತು, ಆದರೆ ಇಬ್ಬರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಈ  ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...