Homeರಾಷ್ಟ್ರೀಯ18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

- Advertisement -
- Advertisement -

ಕಳೆದ 18 ದಿನಗಳಲ್ಲಿ ಎಂಟು ವೈಫಲ್ಯದ ಘಟನೆಗಳ‌ನ್ನು ಉಲ್ಲೇಖಿಸಿ ವೈಮಾನಿಕ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಸ್ಪೈಸ್‌ಜೆಟ್‌ಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಸ್ಪೈಸ್‌ಜೆಟ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ನೋಟೀಸ್‌ನಲ್ಲಿ ಡಿಜಿಸಿಎ, “ನಿಯಮ 134 ಮತ್ತು ಏರ್‌ಕ್ರಾಫ್ಟ್ ರೂಲ್ಸ್-1937 ರ ವೇಳಾಪಟ್ಟಿ XI ರ ಅಡಿಯಲ್ಲಿ ‘ಸುರಕ್ಷಿತ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ನೀಡಲು’ ಸ್ಪೈಸ್‌ಜೆಟ್ ವಿಫಲವಾಗಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಜಿಸಿಎ ಸೂಚನೆಗೆ ಪ್ರತಿಕ್ರಿಯಿಸಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಪ್ರಯಾಣಿಕರ ಸುರಕ್ಷತೆಯೇ ಅತಿಮುಖ್ಯ ಎಂದು ಪ್ರತಿಪಾದಿಸಿದ್ದು, “ಸುರಕ್ಷತೆಗೆ ಅಡ್ಡಿಯಾಗುವ ಸಣ್ಣ ದೋಷವನ್ನು ಸಹ ಕೂಲಂಕಷವಾಗಿ ತನಿಖೆ ಮಾಡಲಾಗುತ್ತದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್ಸು, ಕಾರು ಓಕೆ, ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ

“ಕಳಪೆ ಆಂತರಿಕ ಸುರಕ್ಷತಾ ಮೇಲ್ವಿಚಾರಣೆ ಯಿಂದ ಹಿಡಿದು, ಬಿಡಿಭಾಗಗಳ ಮಾರಾಟಗಾರರಿಗೆ ಸಮಯಕ್ಕೆ ಸರಿಯಾಗಿ ಪಾವತಿಸದಿರುವ ಸಮಸ್ಯೆಗಳಿಂದ ಸ್ಪೈಸ್‌ಜೆಟ್‌ಗೆ ಬಿಡಿಭಾಗಗಳ ಕೊರತೆಯಾಗಿದೆ” ಎಂದು ನೋಟಿಸ್ ಹೇಳಿದೆ.

ನಿನ್ನೆ, ಚೀನಾಕ್ಕೆ ಹಾರುತ್ತಿದ್ದ ಸ್ಪೈಸ್‌ಜೆಟ್‌ನ ಸರಕು ವಿಮಾನದ ಹವಾಮಾನ ರಾಡಾರ್ ಕೆಲಸ ಮಾಡುವುದು ನಿಲ್ಲಿಸಿದ ಕಾರಣ ಕೋಲ್ಕತ್ತಾದಲ್ಲಿ ಇಳಿಯಿತು. ಕಳೆದ 18 ದಿನಗಳ ನಡುವೆ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಎಂಟನೇ ಘಟನೆ ಇದಾಗಿದೆ.

ಸ್ಪೈಸ್‌ಜೆಟ್ ವಿಮಾನವನ್ನು ಒಳಗೊಂಡ ಇತ್ತೀಚಿನ ಕೆಲವು ಘಟನೆಗಳು:

ಮೇ 4: ಆಯಿಲ್ ಫಿಲ್ಟರ್ ವಾರ್ನಿಂಗ್‌ನಿಂದಾಗಿ ಅದರ ಇಂಜಿನ್ ಒಂದನ್ನು ಹಾರಾಡುತ್ತಿರಬೇಕಾದರೆ ಸ್ಥಗಿತಗೊಳಿಸಬೇಕಾಗಿ ಬಂದು ಚೆನ್ನೈ-ದುರ್ಗಾಪುರ ವಿಮಾನವು ಹಾಗೆಯೆ ಹಿಂತಿರುಗಿತ್ತು.

ಮೇ 28: ಮುಂಬೈ-ಗೋರಖ್‌ಪುರ ತೆರಳುತ್ತಿದ್ದ ವಿಮಾನದ ವಿಂಡ್‌ಶೀಲ್ಡ್ 23,000 ಅಡಿಗಳಷ್ಟು ಎತ್ತರದಲ್ಲಿ ಬಿರುಕುಗೊಂಡ ನಂತರ ಮರಳಿತ್ತು.

ಇದನ್ನೂ ಓದಿ:  ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಜೂನ್ 19: ತಾಂತ್ರಿಕ ಸಮಸ್ಯೆಯಿಂದ ಜಬಲ್ಪುರಕ್ಕೆ ಹೊರಟ ವಿಮಾನ ದೆಹಲಿಗೆ ಮರಳಿತು.

ಜೂನ್ 19: ಪಟ್ನಾ-ದೆಹಲಿ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದು ಅದರ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ತುರ್ತು ಭೂಸ್ಪರ್ಶ ಮಾಡಿತು.

ಜುಲೈ 2: ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಜಬಲ್‌ಪುರಕ್ಕೆ ಹೊರಟಿದ್ದ ವಿಮಾನ ದೆಹಲಿಗೆ ಮರಳಿತು.

ಜುಲೈ 5: ವಿಮಾನದ ವಿಂಡ್ ಶೀಲ್ಡ್ ಬಿರುಕು ಬಿಟ್ಟ ಪರಿಣಾಮ ಕಾಂಡ್ಲಾ-ಮುಂಬೈ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು.

ಜುಲೈ 5: ಇಂಧನ ಸೂಚಕವು ಅಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ನಂತರ ದೆಹಲಿ-ದುಬೈ ವಿಮಾನವು ಕರಾಚಿಯಲ್ಲಿ ಇಳಿಯಿತು.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ಜುಲೈ 5: ಹವಾಮಾನ ರಾಡಾರ್ ವಿಫಲವಾದ ಕಾರಣ ಚೀನಾಕ್ಕೆ ತೆರಳುತ್ತಿದ್ದ ಕಾರ್ಗೋ ವಿಮಾನ ಕೋಲ್ಕತ್ತಾಗೆ ಹಿಂತಿರುಗಿತು.

ಕಳೆದ ಮೂರು ವರ್ಷಗಳಿಂದ ಸ್ಪೈಸ್ ಜೆಟ್ ನಷ್ಟದ ಹಾದಿ ಹಿಡಿದಿದೆ. 2018-19, 2019-20 ಮತ್ತು 2020-21 ರಲ್ಲಿ ಕ್ರಮವಾಗಿ 316 ಕೋಟಿ ರೂ., 934 ಕೋಟಿ ರೂ. ಮತ್ತು 998 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...