Homeರಾಷ್ಟ್ರೀಯ18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

- Advertisement -
- Advertisement -

ಕಳೆದ 18 ದಿನಗಳಲ್ಲಿ ಎಂಟು ವೈಫಲ್ಯದ ಘಟನೆಗಳ‌ನ್ನು ಉಲ್ಲೇಖಿಸಿ ವೈಮಾನಿಕ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಸ್ಪೈಸ್‌ಜೆಟ್‌ಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಸ್ಪೈಸ್‌ಜೆಟ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ನೋಟೀಸ್‌ನಲ್ಲಿ ಡಿಜಿಸಿಎ, “ನಿಯಮ 134 ಮತ್ತು ಏರ್‌ಕ್ರಾಫ್ಟ್ ರೂಲ್ಸ್-1937 ರ ವೇಳಾಪಟ್ಟಿ XI ರ ಅಡಿಯಲ್ಲಿ ‘ಸುರಕ್ಷಿತ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ನೀಡಲು’ ಸ್ಪೈಸ್‌ಜೆಟ್ ವಿಫಲವಾಗಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಜಿಸಿಎ ಸೂಚನೆಗೆ ಪ್ರತಿಕ್ರಿಯಿಸಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಪ್ರಯಾಣಿಕರ ಸುರಕ್ಷತೆಯೇ ಅತಿಮುಖ್ಯ ಎಂದು ಪ್ರತಿಪಾದಿಸಿದ್ದು, “ಸುರಕ್ಷತೆಗೆ ಅಡ್ಡಿಯಾಗುವ ಸಣ್ಣ ದೋಷವನ್ನು ಸಹ ಕೂಲಂಕಷವಾಗಿ ತನಿಖೆ ಮಾಡಲಾಗುತ್ತದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್ಸು, ಕಾರು ಓಕೆ, ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ

“ಕಳಪೆ ಆಂತರಿಕ ಸುರಕ್ಷತಾ ಮೇಲ್ವಿಚಾರಣೆ ಯಿಂದ ಹಿಡಿದು, ಬಿಡಿಭಾಗಗಳ ಮಾರಾಟಗಾರರಿಗೆ ಸಮಯಕ್ಕೆ ಸರಿಯಾಗಿ ಪಾವತಿಸದಿರುವ ಸಮಸ್ಯೆಗಳಿಂದ ಸ್ಪೈಸ್‌ಜೆಟ್‌ಗೆ ಬಿಡಿಭಾಗಗಳ ಕೊರತೆಯಾಗಿದೆ” ಎಂದು ನೋಟಿಸ್ ಹೇಳಿದೆ.

ನಿನ್ನೆ, ಚೀನಾಕ್ಕೆ ಹಾರುತ್ತಿದ್ದ ಸ್ಪೈಸ್‌ಜೆಟ್‌ನ ಸರಕು ವಿಮಾನದ ಹವಾಮಾನ ರಾಡಾರ್ ಕೆಲಸ ಮಾಡುವುದು ನಿಲ್ಲಿಸಿದ ಕಾರಣ ಕೋಲ್ಕತ್ತಾದಲ್ಲಿ ಇಳಿಯಿತು. ಕಳೆದ 18 ದಿನಗಳ ನಡುವೆ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಎಂಟನೇ ಘಟನೆ ಇದಾಗಿದೆ.

ಸ್ಪೈಸ್‌ಜೆಟ್ ವಿಮಾನವನ್ನು ಒಳಗೊಂಡ ಇತ್ತೀಚಿನ ಕೆಲವು ಘಟನೆಗಳು:

ಮೇ 4: ಆಯಿಲ್ ಫಿಲ್ಟರ್ ವಾರ್ನಿಂಗ್‌ನಿಂದಾಗಿ ಅದರ ಇಂಜಿನ್ ಒಂದನ್ನು ಹಾರಾಡುತ್ತಿರಬೇಕಾದರೆ ಸ್ಥಗಿತಗೊಳಿಸಬೇಕಾಗಿ ಬಂದು ಚೆನ್ನೈ-ದುರ್ಗಾಪುರ ವಿಮಾನವು ಹಾಗೆಯೆ ಹಿಂತಿರುಗಿತ್ತು.

ಮೇ 28: ಮುಂಬೈ-ಗೋರಖ್‌ಪುರ ತೆರಳುತ್ತಿದ್ದ ವಿಮಾನದ ವಿಂಡ್‌ಶೀಲ್ಡ್ 23,000 ಅಡಿಗಳಷ್ಟು ಎತ್ತರದಲ್ಲಿ ಬಿರುಕುಗೊಂಡ ನಂತರ ಮರಳಿತ್ತು.

ಇದನ್ನೂ ಓದಿ:  ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಜೂನ್ 19: ತಾಂತ್ರಿಕ ಸಮಸ್ಯೆಯಿಂದ ಜಬಲ್ಪುರಕ್ಕೆ ಹೊರಟ ವಿಮಾನ ದೆಹಲಿಗೆ ಮರಳಿತು.

ಜೂನ್ 19: ಪಟ್ನಾ-ದೆಹಲಿ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದು ಅದರ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ತುರ್ತು ಭೂಸ್ಪರ್ಶ ಮಾಡಿತು.

ಜುಲೈ 2: ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಜಬಲ್‌ಪುರಕ್ಕೆ ಹೊರಟಿದ್ದ ವಿಮಾನ ದೆಹಲಿಗೆ ಮರಳಿತು.

ಜುಲೈ 5: ವಿಮಾನದ ವಿಂಡ್ ಶೀಲ್ಡ್ ಬಿರುಕು ಬಿಟ್ಟ ಪರಿಣಾಮ ಕಾಂಡ್ಲಾ-ಮುಂಬೈ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು.

ಜುಲೈ 5: ಇಂಧನ ಸೂಚಕವು ಅಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ನಂತರ ದೆಹಲಿ-ದುಬೈ ವಿಮಾನವು ಕರಾಚಿಯಲ್ಲಿ ಇಳಿಯಿತು.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ಜುಲೈ 5: ಹವಾಮಾನ ರಾಡಾರ್ ವಿಫಲವಾದ ಕಾರಣ ಚೀನಾಕ್ಕೆ ತೆರಳುತ್ತಿದ್ದ ಕಾರ್ಗೋ ವಿಮಾನ ಕೋಲ್ಕತ್ತಾಗೆ ಹಿಂತಿರುಗಿತು.

ಕಳೆದ ಮೂರು ವರ್ಷಗಳಿಂದ ಸ್ಪೈಸ್ ಜೆಟ್ ನಷ್ಟದ ಹಾದಿ ಹಿಡಿದಿದೆ. 2018-19, 2019-20 ಮತ್ತು 2020-21 ರಲ್ಲಿ ಕ್ರಮವಾಗಿ 316 ಕೋಟಿ ರೂ., 934 ಕೋಟಿ ರೂ. ಮತ್ತು 998 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...