Homeರಾಷ್ಟ್ರೀಯ18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

- Advertisement -
- Advertisement -

ಕಳೆದ 18 ದಿನಗಳಲ್ಲಿ ಎಂಟು ವೈಫಲ್ಯದ ಘಟನೆಗಳ‌ನ್ನು ಉಲ್ಲೇಖಿಸಿ ವೈಮಾನಿಕ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಸ್ಪೈಸ್‌ಜೆಟ್‌ಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಸ್ಪೈಸ್‌ಜೆಟ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ನೋಟೀಸ್‌ನಲ್ಲಿ ಡಿಜಿಸಿಎ, “ನಿಯಮ 134 ಮತ್ತು ಏರ್‌ಕ್ರಾಫ್ಟ್ ರೂಲ್ಸ್-1937 ರ ವೇಳಾಪಟ್ಟಿ XI ರ ಅಡಿಯಲ್ಲಿ ‘ಸುರಕ್ಷಿತ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ನೀಡಲು’ ಸ್ಪೈಸ್‌ಜೆಟ್ ವಿಫಲವಾಗಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಜಿಸಿಎ ಸೂಚನೆಗೆ ಪ್ರತಿಕ್ರಿಯಿಸಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಪ್ರಯಾಣಿಕರ ಸುರಕ್ಷತೆಯೇ ಅತಿಮುಖ್ಯ ಎಂದು ಪ್ರತಿಪಾದಿಸಿದ್ದು, “ಸುರಕ್ಷತೆಗೆ ಅಡ್ಡಿಯಾಗುವ ಸಣ್ಣ ದೋಷವನ್ನು ಸಹ ಕೂಲಂಕಷವಾಗಿ ತನಿಖೆ ಮಾಡಲಾಗುತ್ತದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್ಸು, ಕಾರು ಓಕೆ, ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ

“ಕಳಪೆ ಆಂತರಿಕ ಸುರಕ್ಷತಾ ಮೇಲ್ವಿಚಾರಣೆ ಯಿಂದ ಹಿಡಿದು, ಬಿಡಿಭಾಗಗಳ ಮಾರಾಟಗಾರರಿಗೆ ಸಮಯಕ್ಕೆ ಸರಿಯಾಗಿ ಪಾವತಿಸದಿರುವ ಸಮಸ್ಯೆಗಳಿಂದ ಸ್ಪೈಸ್‌ಜೆಟ್‌ಗೆ ಬಿಡಿಭಾಗಗಳ ಕೊರತೆಯಾಗಿದೆ” ಎಂದು ನೋಟಿಸ್ ಹೇಳಿದೆ.

ನಿನ್ನೆ, ಚೀನಾಕ್ಕೆ ಹಾರುತ್ತಿದ್ದ ಸ್ಪೈಸ್‌ಜೆಟ್‌ನ ಸರಕು ವಿಮಾನದ ಹವಾಮಾನ ರಾಡಾರ್ ಕೆಲಸ ಮಾಡುವುದು ನಿಲ್ಲಿಸಿದ ಕಾರಣ ಕೋಲ್ಕತ್ತಾದಲ್ಲಿ ಇಳಿಯಿತು. ಕಳೆದ 18 ದಿನಗಳ ನಡುವೆ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಎಂಟನೇ ಘಟನೆ ಇದಾಗಿದೆ.

ಸ್ಪೈಸ್‌ಜೆಟ್ ವಿಮಾನವನ್ನು ಒಳಗೊಂಡ ಇತ್ತೀಚಿನ ಕೆಲವು ಘಟನೆಗಳು:

ಮೇ 4: ಆಯಿಲ್ ಫಿಲ್ಟರ್ ವಾರ್ನಿಂಗ್‌ನಿಂದಾಗಿ ಅದರ ಇಂಜಿನ್ ಒಂದನ್ನು ಹಾರಾಡುತ್ತಿರಬೇಕಾದರೆ ಸ್ಥಗಿತಗೊಳಿಸಬೇಕಾಗಿ ಬಂದು ಚೆನ್ನೈ-ದುರ್ಗಾಪುರ ವಿಮಾನವು ಹಾಗೆಯೆ ಹಿಂತಿರುಗಿತ್ತು.

ಮೇ 28: ಮುಂಬೈ-ಗೋರಖ್‌ಪುರ ತೆರಳುತ್ತಿದ್ದ ವಿಮಾನದ ವಿಂಡ್‌ಶೀಲ್ಡ್ 23,000 ಅಡಿಗಳಷ್ಟು ಎತ್ತರದಲ್ಲಿ ಬಿರುಕುಗೊಂಡ ನಂತರ ಮರಳಿತ್ತು.

ಇದನ್ನೂ ಓದಿ:  ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಜೂನ್ 19: ತಾಂತ್ರಿಕ ಸಮಸ್ಯೆಯಿಂದ ಜಬಲ್ಪುರಕ್ಕೆ ಹೊರಟ ವಿಮಾನ ದೆಹಲಿಗೆ ಮರಳಿತು.

ಜೂನ್ 19: ಪಟ್ನಾ-ದೆಹಲಿ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದು ಅದರ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ತುರ್ತು ಭೂಸ್ಪರ್ಶ ಮಾಡಿತು.

ಜುಲೈ 2: ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಜಬಲ್‌ಪುರಕ್ಕೆ ಹೊರಟಿದ್ದ ವಿಮಾನ ದೆಹಲಿಗೆ ಮರಳಿತು.

ಜುಲೈ 5: ವಿಮಾನದ ವಿಂಡ್ ಶೀಲ್ಡ್ ಬಿರುಕು ಬಿಟ್ಟ ಪರಿಣಾಮ ಕಾಂಡ್ಲಾ-ಮುಂಬೈ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು.

ಜುಲೈ 5: ಇಂಧನ ಸೂಚಕವು ಅಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ನಂತರ ದೆಹಲಿ-ದುಬೈ ವಿಮಾನವು ಕರಾಚಿಯಲ್ಲಿ ಇಳಿಯಿತು.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ಜುಲೈ 5: ಹವಾಮಾನ ರಾಡಾರ್ ವಿಫಲವಾದ ಕಾರಣ ಚೀನಾಕ್ಕೆ ತೆರಳುತ್ತಿದ್ದ ಕಾರ್ಗೋ ವಿಮಾನ ಕೋಲ್ಕತ್ತಾಗೆ ಹಿಂತಿರುಗಿತು.

ಕಳೆದ ಮೂರು ವರ್ಷಗಳಿಂದ ಸ್ಪೈಸ್ ಜೆಟ್ ನಷ್ಟದ ಹಾದಿ ಹಿಡಿದಿದೆ. 2018-19, 2019-20 ಮತ್ತು 2020-21 ರಲ್ಲಿ ಕ್ರಮವಾಗಿ 316 ಕೋಟಿ ರೂ., 934 ಕೋಟಿ ರೂ. ಮತ್ತು 998 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...