Homeರಾಷ್ಟ್ರೀಯ18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

- Advertisement -
- Advertisement -

ಕಳೆದ 18 ದಿನಗಳಲ್ಲಿ ಎಂಟು ವೈಫಲ್ಯದ ಘಟನೆಗಳ‌ನ್ನು ಉಲ್ಲೇಖಿಸಿ ವೈಮಾನಿಕ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಸ್ಪೈಸ್‌ಜೆಟ್‌ಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಸ್ಪೈಸ್‌ಜೆಟ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ನೋಟೀಸ್‌ನಲ್ಲಿ ಡಿಜಿಸಿಎ, “ನಿಯಮ 134 ಮತ್ತು ಏರ್‌ಕ್ರಾಫ್ಟ್ ರೂಲ್ಸ್-1937 ರ ವೇಳಾಪಟ್ಟಿ XI ರ ಅಡಿಯಲ್ಲಿ ‘ಸುರಕ್ಷಿತ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ನೀಡಲು’ ಸ್ಪೈಸ್‌ಜೆಟ್ ವಿಫಲವಾಗಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಜಿಸಿಎ ಸೂಚನೆಗೆ ಪ್ರತಿಕ್ರಿಯಿಸಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಪ್ರಯಾಣಿಕರ ಸುರಕ್ಷತೆಯೇ ಅತಿಮುಖ್ಯ ಎಂದು ಪ್ರತಿಪಾದಿಸಿದ್ದು, “ಸುರಕ್ಷತೆಗೆ ಅಡ್ಡಿಯಾಗುವ ಸಣ್ಣ ದೋಷವನ್ನು ಸಹ ಕೂಲಂಕಷವಾಗಿ ತನಿಖೆ ಮಾಡಲಾಗುತ್ತದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್ಸು, ಕಾರು ಓಕೆ, ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ

“ಕಳಪೆ ಆಂತರಿಕ ಸುರಕ್ಷತಾ ಮೇಲ್ವಿಚಾರಣೆ ಯಿಂದ ಹಿಡಿದು, ಬಿಡಿಭಾಗಗಳ ಮಾರಾಟಗಾರರಿಗೆ ಸಮಯಕ್ಕೆ ಸರಿಯಾಗಿ ಪಾವತಿಸದಿರುವ ಸಮಸ್ಯೆಗಳಿಂದ ಸ್ಪೈಸ್‌ಜೆಟ್‌ಗೆ ಬಿಡಿಭಾಗಗಳ ಕೊರತೆಯಾಗಿದೆ” ಎಂದು ನೋಟಿಸ್ ಹೇಳಿದೆ.

ನಿನ್ನೆ, ಚೀನಾಕ್ಕೆ ಹಾರುತ್ತಿದ್ದ ಸ್ಪೈಸ್‌ಜೆಟ್‌ನ ಸರಕು ವಿಮಾನದ ಹವಾಮಾನ ರಾಡಾರ್ ಕೆಲಸ ಮಾಡುವುದು ನಿಲ್ಲಿಸಿದ ಕಾರಣ ಕೋಲ್ಕತ್ತಾದಲ್ಲಿ ಇಳಿಯಿತು. ಕಳೆದ 18 ದಿನಗಳ ನಡುವೆ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಎಂಟನೇ ಘಟನೆ ಇದಾಗಿದೆ.

ಸ್ಪೈಸ್‌ಜೆಟ್ ವಿಮಾನವನ್ನು ಒಳಗೊಂಡ ಇತ್ತೀಚಿನ ಕೆಲವು ಘಟನೆಗಳು:

ಮೇ 4: ಆಯಿಲ್ ಫಿಲ್ಟರ್ ವಾರ್ನಿಂಗ್‌ನಿಂದಾಗಿ ಅದರ ಇಂಜಿನ್ ಒಂದನ್ನು ಹಾರಾಡುತ್ತಿರಬೇಕಾದರೆ ಸ್ಥಗಿತಗೊಳಿಸಬೇಕಾಗಿ ಬಂದು ಚೆನ್ನೈ-ದುರ್ಗಾಪುರ ವಿಮಾನವು ಹಾಗೆಯೆ ಹಿಂತಿರುಗಿತ್ತು.

ಮೇ 28: ಮುಂಬೈ-ಗೋರಖ್‌ಪುರ ತೆರಳುತ್ತಿದ್ದ ವಿಮಾನದ ವಿಂಡ್‌ಶೀಲ್ಡ್ 23,000 ಅಡಿಗಳಷ್ಟು ಎತ್ತರದಲ್ಲಿ ಬಿರುಕುಗೊಂಡ ನಂತರ ಮರಳಿತ್ತು.

ಇದನ್ನೂ ಓದಿ:  ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಜೂನ್ 19: ತಾಂತ್ರಿಕ ಸಮಸ್ಯೆಯಿಂದ ಜಬಲ್ಪುರಕ್ಕೆ ಹೊರಟ ವಿಮಾನ ದೆಹಲಿಗೆ ಮರಳಿತು.

ಜೂನ್ 19: ಪಟ್ನಾ-ದೆಹಲಿ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದು ಅದರ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ತುರ್ತು ಭೂಸ್ಪರ್ಶ ಮಾಡಿತು.

ಜುಲೈ 2: ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಜಬಲ್‌ಪುರಕ್ಕೆ ಹೊರಟಿದ್ದ ವಿಮಾನ ದೆಹಲಿಗೆ ಮರಳಿತು.

ಜುಲೈ 5: ವಿಮಾನದ ವಿಂಡ್ ಶೀಲ್ಡ್ ಬಿರುಕು ಬಿಟ್ಟ ಪರಿಣಾಮ ಕಾಂಡ್ಲಾ-ಮುಂಬೈ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು.

ಜುಲೈ 5: ಇಂಧನ ಸೂಚಕವು ಅಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ನಂತರ ದೆಹಲಿ-ದುಬೈ ವಿಮಾನವು ಕರಾಚಿಯಲ್ಲಿ ಇಳಿಯಿತು.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ಜುಲೈ 5: ಹವಾಮಾನ ರಾಡಾರ್ ವಿಫಲವಾದ ಕಾರಣ ಚೀನಾಕ್ಕೆ ತೆರಳುತ್ತಿದ್ದ ಕಾರ್ಗೋ ವಿಮಾನ ಕೋಲ್ಕತ್ತಾಗೆ ಹಿಂತಿರುಗಿತು.

ಕಳೆದ ಮೂರು ವರ್ಷಗಳಿಂದ ಸ್ಪೈಸ್ ಜೆಟ್ ನಷ್ಟದ ಹಾದಿ ಹಿಡಿದಿದೆ. 2018-19, 2019-20 ಮತ್ತು 2020-21 ರಲ್ಲಿ ಕ್ರಮವಾಗಿ 316 ಕೋಟಿ ರೂ., 934 ಕೋಟಿ ರೂ. ಮತ್ತು 998 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...