Homeರಾಷ್ಟ್ರೀಯ18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

18 ದಿನಗಳಲ್ಲಿ 8 ವೈಫಲ್ಯ ಘಟನೆ: ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌ ನೀಡಿದ ಸರ್ಕಾರ

- Advertisement -
- Advertisement -

ಕಳೆದ 18 ದಿನಗಳಲ್ಲಿ ಎಂಟು ವೈಫಲ್ಯದ ಘಟನೆಗಳ‌ನ್ನು ಉಲ್ಲೇಖಿಸಿ ವೈಮಾನಿಕ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಸ್ಪೈಸ್‌ಜೆಟ್‌ಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಸ್ಪೈಸ್‌ಜೆಟ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ನೋಟೀಸ್‌ನಲ್ಲಿ ಡಿಜಿಸಿಎ, “ನಿಯಮ 134 ಮತ್ತು ಏರ್‌ಕ್ರಾಫ್ಟ್ ರೂಲ್ಸ್-1937 ರ ವೇಳಾಪಟ್ಟಿ XI ರ ಅಡಿಯಲ್ಲಿ ‘ಸುರಕ್ಷಿತ, ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ನೀಡಲು’ ಸ್ಪೈಸ್‌ಜೆಟ್ ವಿಫಲವಾಗಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಜಿಸಿಎ ಸೂಚನೆಗೆ ಪ್ರತಿಕ್ರಿಯಿಸಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಪ್ರಯಾಣಿಕರ ಸುರಕ್ಷತೆಯೇ ಅತಿಮುಖ್ಯ ಎಂದು ಪ್ರತಿಪಾದಿಸಿದ್ದು, “ಸುರಕ್ಷತೆಗೆ ಅಡ್ಡಿಯಾಗುವ ಸಣ್ಣ ದೋಷವನ್ನು ಸಹ ಕೂಲಂಕಷವಾಗಿ ತನಿಖೆ ಮಾಡಲಾಗುತ್ತದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್ಸು, ಕಾರು ಓಕೆ, ವಿಮಾನ ತಳ್ಳುವುದನ್ನು ನೋಡಿದ್ದೀರಾ? ಇಲ್ಲವಾದರೆ ಇಲ್ಲಿ ನೋಡಿ

“ಕಳಪೆ ಆಂತರಿಕ ಸುರಕ್ಷತಾ ಮೇಲ್ವಿಚಾರಣೆ ಯಿಂದ ಹಿಡಿದು, ಬಿಡಿಭಾಗಗಳ ಮಾರಾಟಗಾರರಿಗೆ ಸಮಯಕ್ಕೆ ಸರಿಯಾಗಿ ಪಾವತಿಸದಿರುವ ಸಮಸ್ಯೆಗಳಿಂದ ಸ್ಪೈಸ್‌ಜೆಟ್‌ಗೆ ಬಿಡಿಭಾಗಗಳ ಕೊರತೆಯಾಗಿದೆ” ಎಂದು ನೋಟಿಸ್ ಹೇಳಿದೆ.

ನಿನ್ನೆ, ಚೀನಾಕ್ಕೆ ಹಾರುತ್ತಿದ್ದ ಸ್ಪೈಸ್‌ಜೆಟ್‌ನ ಸರಕು ವಿಮಾನದ ಹವಾಮಾನ ರಾಡಾರ್ ಕೆಲಸ ಮಾಡುವುದು ನಿಲ್ಲಿಸಿದ ಕಾರಣ ಕೋಲ್ಕತ್ತಾದಲ್ಲಿ ಇಳಿಯಿತು. ಕಳೆದ 18 ದಿನಗಳ ನಡುವೆ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಎಂಟನೇ ಘಟನೆ ಇದಾಗಿದೆ.

ಸ್ಪೈಸ್‌ಜೆಟ್ ವಿಮಾನವನ್ನು ಒಳಗೊಂಡ ಇತ್ತೀಚಿನ ಕೆಲವು ಘಟನೆಗಳು:

ಮೇ 4: ಆಯಿಲ್ ಫಿಲ್ಟರ್ ವಾರ್ನಿಂಗ್‌ನಿಂದಾಗಿ ಅದರ ಇಂಜಿನ್ ಒಂದನ್ನು ಹಾರಾಡುತ್ತಿರಬೇಕಾದರೆ ಸ್ಥಗಿತಗೊಳಿಸಬೇಕಾಗಿ ಬಂದು ಚೆನ್ನೈ-ದುರ್ಗಾಪುರ ವಿಮಾನವು ಹಾಗೆಯೆ ಹಿಂತಿರುಗಿತ್ತು.

ಮೇ 28: ಮುಂಬೈ-ಗೋರಖ್‌ಪುರ ತೆರಳುತ್ತಿದ್ದ ವಿಮಾನದ ವಿಂಡ್‌ಶೀಲ್ಡ್ 23,000 ಅಡಿಗಳಷ್ಟು ಎತ್ತರದಲ್ಲಿ ಬಿರುಕುಗೊಂಡ ನಂತರ ಮರಳಿತ್ತು.

ಇದನ್ನೂ ಓದಿ:  ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಜೂನ್ 19: ತಾಂತ್ರಿಕ ಸಮಸ್ಯೆಯಿಂದ ಜಬಲ್ಪುರಕ್ಕೆ ಹೊರಟ ವಿಮಾನ ದೆಹಲಿಗೆ ಮರಳಿತು.

ಜೂನ್ 19: ಪಟ್ನಾ-ದೆಹಲಿ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದು ಅದರ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ತುರ್ತು ಭೂಸ್ಪರ್ಶ ಮಾಡಿತು.

ಜುಲೈ 2: ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಜಬಲ್‌ಪುರಕ್ಕೆ ಹೊರಟಿದ್ದ ವಿಮಾನ ದೆಹಲಿಗೆ ಮರಳಿತು.

ಜುಲೈ 5: ವಿಮಾನದ ವಿಂಡ್ ಶೀಲ್ಡ್ ಬಿರುಕು ಬಿಟ್ಟ ಪರಿಣಾಮ ಕಾಂಡ್ಲಾ-ಮುಂಬೈ ವಿಮಾನ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು.

ಜುಲೈ 5: ಇಂಧನ ಸೂಚಕವು ಅಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ನಂತರ ದೆಹಲಿ-ದುಬೈ ವಿಮಾನವು ಕರಾಚಿಯಲ್ಲಿ ಇಳಿಯಿತು.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ಜುಲೈ 5: ಹವಾಮಾನ ರಾಡಾರ್ ವಿಫಲವಾದ ಕಾರಣ ಚೀನಾಕ್ಕೆ ತೆರಳುತ್ತಿದ್ದ ಕಾರ್ಗೋ ವಿಮಾನ ಕೋಲ್ಕತ್ತಾಗೆ ಹಿಂತಿರುಗಿತು.

ಕಳೆದ ಮೂರು ವರ್ಷಗಳಿಂದ ಸ್ಪೈಸ್ ಜೆಟ್ ನಷ್ಟದ ಹಾದಿ ಹಿಡಿದಿದೆ. 2018-19, 2019-20 ಮತ್ತು 2020-21 ರಲ್ಲಿ ಕ್ರಮವಾಗಿ 316 ಕೋಟಿ ರೂ., 934 ಕೋಟಿ ರೂ. ಮತ್ತು 998 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...