Homeಮುಖಪುಟಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

ಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

- Advertisement -
- Advertisement -

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಆಂಧ್ರ ಪ್ರದೇಶದಲ್ಲಿ ರಾಜಕೀಯ ಮೇಲಾಟ ಗರಿಗೆದರಿದೆ. ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು ಮಂಗಳವಾರ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) ತಲಾ ನಾಲ್ವರು ಸೇರಿ ಒಟ್ಟು 8 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಿದ್ದಾರೆ.

ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಮತ್ತು ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆಯಾ ಪಕ್ಷಗಳು ನೀಡಿದ್ದ ದೂರುಗಳ ಆಧಾರದ ಮೇಲೆ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

“ಭಾರತದ ಸಂವಿಧಾನದ ಶೆಡ್ಯೂಲ್ 10ರ ಅಡಿಯಲ್ಲಿ ಮತ್ತು ಆಂಧ್ರ ಪ್ರದೇಶ ವಿಧಾನಸಭೆಯ ಸದಸ್ಯರ ನಿಯಮ (ಪಕ್ಷಾಂತರ ಮತ್ತು ಅನರ್ಹತೆ ನಿಯಮಗಳು) 1986ರ ಆಧಾರದ ಮೇಲೆ ಆಂಧ್ರ ಪ್ರದೇಶ ವಿಧಾನಸಭೆಯಿಂದ ಈ ಕೆಳಗಿನ ಸದಸ್ಯರನ್ನು ಫೆಬ್ರವರಿ 26 ರಂದು ಗೌರವಾನ್ವಿತ ಸ್ಪೀಕರ್ ಅನರ್ಹಗೊಳಿಸಿದ್ದಾರೆ” ಎಂದು ಸ್ಪೀಕರ್ ಕಚೇರಿಯ ಸುತ್ತೋಲೆ ಹೇಳಿದೆ.

ಅನರ್ಹಗೊಂಡ ಶಾಸಕರಲ್ಲಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕರಾದ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಸೇರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ತೆಲುಗು ದೇಶಂ ಪಕ್ಷದ ಶಾಸಕರಾದ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ವಿಧಾನಸಭೆಯಿಂದ ಅನರ್ಹಗೊಂಡಿದ್ದಾರೆ.

ಅನರ್ಹಗೊಂಡ ಶಾಸಕರು ತಮ್ಮ ಮೂಲ ಪಕ್ಷಗಳಿಂದ ಇತರ ರಾಜಕೀಯ ಪಕ್ಷಗಳ ಕಡೆ ತಮ್ಮ ನಿಷ್ಠೆ ಬದಲಾಯಿಸಿದ್ದಾರೆ. ಇದು ಸ್ಪೀಕರ್ ದೃಷ್ಟಿಯಲ್ಲಿ ಪ್ರಜಾಪ್ರಭುತ್ವದ ರಚನೆ ಮತ್ತು ಮತದಾರರ ಆದೇಶವನ್ನು ದುರ್ಬಲಗೊಳಿಸುತ್ತದೆ ಎಂದು ವರದಿಗಳು ಹೇಳಿವೆ.

ಅನರ್ಹಗೊಳಿಸುವ ಮುನ್ನ ಎಲ್ಲಾ 8 ಶಾಸಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಸ್ಪೀಕರ್ ನೋಟಿಸ್ ನೀಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿರುವುದರಿಂದ ಶಾಸಕರ ಅನರ್ಹತೆಗೆ ಸಂಬಂಧಪಟ್ಟಂತೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಪರ ಅಡ್ಡ ಮತದಾನ: ಹಿಮಾಚಲ ಪ್ರದೇಶ ವಿಧಾನಸಭೆಯಿಂದ 6 ಕಾಂಗ್ರೆಸ್‌ ಶಾಸಕರು ಅನರ್ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...