Homeಮುಖಪುಟಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

ಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

- Advertisement -
- Advertisement -

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಆಂಧ್ರ ಪ್ರದೇಶದಲ್ಲಿ ರಾಜಕೀಯ ಮೇಲಾಟ ಗರಿಗೆದರಿದೆ. ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು ಮಂಗಳವಾರ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) ತಲಾ ನಾಲ್ವರು ಸೇರಿ ಒಟ್ಟು 8 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಿದ್ದಾರೆ.

ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಮತ್ತು ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆಯಾ ಪಕ್ಷಗಳು ನೀಡಿದ್ದ ದೂರುಗಳ ಆಧಾರದ ಮೇಲೆ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

“ಭಾರತದ ಸಂವಿಧಾನದ ಶೆಡ್ಯೂಲ್ 10ರ ಅಡಿಯಲ್ಲಿ ಮತ್ತು ಆಂಧ್ರ ಪ್ರದೇಶ ವಿಧಾನಸಭೆಯ ಸದಸ್ಯರ ನಿಯಮ (ಪಕ್ಷಾಂತರ ಮತ್ತು ಅನರ್ಹತೆ ನಿಯಮಗಳು) 1986ರ ಆಧಾರದ ಮೇಲೆ ಆಂಧ್ರ ಪ್ರದೇಶ ವಿಧಾನಸಭೆಯಿಂದ ಈ ಕೆಳಗಿನ ಸದಸ್ಯರನ್ನು ಫೆಬ್ರವರಿ 26 ರಂದು ಗೌರವಾನ್ವಿತ ಸ್ಪೀಕರ್ ಅನರ್ಹಗೊಳಿಸಿದ್ದಾರೆ” ಎಂದು ಸ್ಪೀಕರ್ ಕಚೇರಿಯ ಸುತ್ತೋಲೆ ಹೇಳಿದೆ.

ಅನರ್ಹಗೊಂಡ ಶಾಸಕರಲ್ಲಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕರಾದ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಸೇರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ತೆಲುಗು ದೇಶಂ ಪಕ್ಷದ ಶಾಸಕರಾದ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ವಿಧಾನಸಭೆಯಿಂದ ಅನರ್ಹಗೊಂಡಿದ್ದಾರೆ.

ಅನರ್ಹಗೊಂಡ ಶಾಸಕರು ತಮ್ಮ ಮೂಲ ಪಕ್ಷಗಳಿಂದ ಇತರ ರಾಜಕೀಯ ಪಕ್ಷಗಳ ಕಡೆ ತಮ್ಮ ನಿಷ್ಠೆ ಬದಲಾಯಿಸಿದ್ದಾರೆ. ಇದು ಸ್ಪೀಕರ್ ದೃಷ್ಟಿಯಲ್ಲಿ ಪ್ರಜಾಪ್ರಭುತ್ವದ ರಚನೆ ಮತ್ತು ಮತದಾರರ ಆದೇಶವನ್ನು ದುರ್ಬಲಗೊಳಿಸುತ್ತದೆ ಎಂದು ವರದಿಗಳು ಹೇಳಿವೆ.

ಅನರ್ಹಗೊಳಿಸುವ ಮುನ್ನ ಎಲ್ಲಾ 8 ಶಾಸಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಸ್ಪೀಕರ್ ನೋಟಿಸ್ ನೀಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿರುವುದರಿಂದ ಶಾಸಕರ ಅನರ್ಹತೆಗೆ ಸಂಬಂಧಪಟ್ಟಂತೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಪರ ಅಡ್ಡ ಮತದಾನ: ಹಿಮಾಚಲ ಪ್ರದೇಶ ವಿಧಾನಸಭೆಯಿಂದ 6 ಕಾಂಗ್ರೆಸ್‌ ಶಾಸಕರು ಅನರ್ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...