Homeಮುಖಪುಟಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

ಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

- Advertisement -
- Advertisement -

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಆಂಧ್ರ ಪ್ರದೇಶದಲ್ಲಿ ರಾಜಕೀಯ ಮೇಲಾಟ ಗರಿಗೆದರಿದೆ. ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು ಮಂಗಳವಾರ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) ತಲಾ ನಾಲ್ವರು ಸೇರಿ ಒಟ್ಟು 8 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಿದ್ದಾರೆ.

ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಮತ್ತು ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆಯಾ ಪಕ್ಷಗಳು ನೀಡಿದ್ದ ದೂರುಗಳ ಆಧಾರದ ಮೇಲೆ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

“ಭಾರತದ ಸಂವಿಧಾನದ ಶೆಡ್ಯೂಲ್ 10ರ ಅಡಿಯಲ್ಲಿ ಮತ್ತು ಆಂಧ್ರ ಪ್ರದೇಶ ವಿಧಾನಸಭೆಯ ಸದಸ್ಯರ ನಿಯಮ (ಪಕ್ಷಾಂತರ ಮತ್ತು ಅನರ್ಹತೆ ನಿಯಮಗಳು) 1986ರ ಆಧಾರದ ಮೇಲೆ ಆಂಧ್ರ ಪ್ರದೇಶ ವಿಧಾನಸಭೆಯಿಂದ ಈ ಕೆಳಗಿನ ಸದಸ್ಯರನ್ನು ಫೆಬ್ರವರಿ 26 ರಂದು ಗೌರವಾನ್ವಿತ ಸ್ಪೀಕರ್ ಅನರ್ಹಗೊಳಿಸಿದ್ದಾರೆ” ಎಂದು ಸ್ಪೀಕರ್ ಕಚೇರಿಯ ಸುತ್ತೋಲೆ ಹೇಳಿದೆ.

ಅನರ್ಹಗೊಂಡ ಶಾಸಕರಲ್ಲಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕರಾದ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಸೇರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ತೆಲುಗು ದೇಶಂ ಪಕ್ಷದ ಶಾಸಕರಾದ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ವಿಧಾನಸಭೆಯಿಂದ ಅನರ್ಹಗೊಂಡಿದ್ದಾರೆ.

ಅನರ್ಹಗೊಂಡ ಶಾಸಕರು ತಮ್ಮ ಮೂಲ ಪಕ್ಷಗಳಿಂದ ಇತರ ರಾಜಕೀಯ ಪಕ್ಷಗಳ ಕಡೆ ತಮ್ಮ ನಿಷ್ಠೆ ಬದಲಾಯಿಸಿದ್ದಾರೆ. ಇದು ಸ್ಪೀಕರ್ ದೃಷ್ಟಿಯಲ್ಲಿ ಪ್ರಜಾಪ್ರಭುತ್ವದ ರಚನೆ ಮತ್ತು ಮತದಾರರ ಆದೇಶವನ್ನು ದುರ್ಬಲಗೊಳಿಸುತ್ತದೆ ಎಂದು ವರದಿಗಳು ಹೇಳಿವೆ.

ಅನರ್ಹಗೊಳಿಸುವ ಮುನ್ನ ಎಲ್ಲಾ 8 ಶಾಸಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಸ್ಪೀಕರ್ ನೋಟಿಸ್ ನೀಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿರುವುದರಿಂದ ಶಾಸಕರ ಅನರ್ಹತೆಗೆ ಸಂಬಂಧಪಟ್ಟಂತೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಪರ ಅಡ್ಡ ಮತದಾನ: ಹಿಮಾಚಲ ಪ್ರದೇಶ ವಿಧಾನಸಭೆಯಿಂದ 6 ಕಾಂಗ್ರೆಸ್‌ ಶಾಸಕರು ಅನರ್ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...