Homeಅಂಕಣಗಳುಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

ಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

- Advertisement -
- Advertisement -
  1. ಗಡಿ

ಛೇ!
ಇದು ಬರೀ ಒಂದು ಗೆರೆ ಕಣೋ
ಯಾರೋ ಸಿಟ್ಟಲ್ಲಿ ಗೀಚಿದ್ದಾರೆ ಅಷ್ಟೆ.
ಬಾ, ಬಾ ಈ ಗೆರೆಯನ್ನೇ
centre line ಮಾಡಿ ಕಬಡ್ಡಿ ಆಡೋಣ.

ನನ್ನ ಏರಿಯಾಗೆ ಬಾ, ಬಂದು
ಒಂದು ಆವಾಜ್ ಹಾಕು.
ನನ್ನ ಮೇಲೆ ಕೈ ಬೀಸು, ಮುಟ್ಟಿ
ಹಿಂದಿರುಗು ನೋಡೋಣ.

ನಾನೂ ಬಿಡೋದಿಲ್ಲ
ನಿನ್ನ ಮೇಲೆ ಬೀಳುತ್ತೇನೆ
ಕಟ್ಟಿಹಾಕುತ್ತೇನೆ ವಾಪಸ್ಸು ಹೋಗದಂತೆ.

ನನ್ನ ಪಾಳಿ ಈಗ,
ನಿನ್ನ ಏರಿಯಾಕ್ಕೆ ನಾನು
ಹು ತು ತೂ ಅನ್ನುತ್ತ ಆಕ್ರಮಣ ಮಾಡಿದಾಗ
ಸಾಧ್ಯವಾದರೆ ನನ್ನ ಹಿಡಿ
ಬಿಡಬೇಡ ವಾಪಸ್ಸು ಗಡಿ ದಾಟಲು.

ಇದು ಬರೀ ಒಂದು ಗೆರೆ ಕಣೋ
ಹಾಗೇ ಇರಲಿ ಬಿಡು
ಯಾರೋ ಸಿಟ್ಟಿನಿಂದ ಗೀಚಿದ್ದಾರೆ
ಅಷ್ಟೇ.

ಗುಲ್ಜಾರ್
ಖ್ಯಾತ ಉರ್ದು ಕವಿ – ಸಿನಿಮಾ ಸಾಹಿತಿ

*****

2. ಕಣ್ಣುಗಳಿಗೆ ವೀಸಾ ಬೇಕಿಲ್ಲ

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.
ಕಣ್ಮುಚ್ಚಿ
ಹಾರಿಬಿಡುತ್ತೇನೆ ಪ್ರತಿದಿನ
ಗಡಿಗಳ ಮಿತಿಯನ್ನು,
ಭೇಟಿಯಾಗಲು
ಮೆಹದೀ ಹಸನ್‌ನನ್ನು!

ಪೆಟ್ಟಾಗಿದೆಯಂತೆ ಅವನ ದನಿಗೇನೋ
ಕುಳಿತುಬಿಟ್ಟಿದೆಯಂತೆ ಗಜಲ್
ಅವನೆದುರು ಮೂಕವಾಗಿ
ತುಟಿ ಕಂಪಿಸುತ್ತ
ಪುಟಗಳ ನಡುವಿನ ಹೂವು
ಒಣಗಿಹೋಗಿದೆಯೆಂದರೆ
ಗೆಳೆಯ ’ಫರಾಜ್’ ಕೂಡ
ಇನ್ನಿಲ್ಲ ಎಂದೇ ಅರ್ಥ.
ಬಹುಶಃ ಇನ್ನು ಕನಸುಗಳಲ್ಲೇ
ನಮ್ಮ ಭೇಟಿ.

ಕಣ್ಮುಚ್ಚಿಕೊಂಡು ದಾಟಿಬಿಡುತ್ತೇನೆ
ಗಡಿಗಳ ಮಿತಿಯನ್ನು ಮೇಲಿಂದ ಮೇಲೆ.

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.

ಗುಲ್ಜಾರ್
ಖ್ಯಾತ ಉರ್ದು ಕವಿ- ಸಿನಿಮಾ ಸಾಹಿತಿ

*****

3. ಕಲಾವಿದನ ಸಂಕಟ

ಹಿಂದುಸ್ತಾನ್ ಜಿಂದಾಬಾದ್
ಪಾಕಿಸ್ತಾನ್ ಜಿಂದಾಬಾದ್
ಎಂದು ಕೂಗುತ್ತ, ಚೀರುತ್ತ ಸಾಗಿರುವ
ಘೋಷಣೆಗಳ ನಡುವೆ
ಬೇಕಾದಷ್ಟು ಪ್ರಶ್ನೆಗಳಿದ್ದವು.

ಯಾವುದನ್ನ ನನ್ನ ದೇಶ ಅಂತ ಹೇಳಲಿ?
ಜನ ಯಾಕೆ ಹೀಗೆ ಒಬ್ಬರಾದ ಮೇಲೊಬ್ಬರು ಸಾಯುತ್ತಿದ್ದಾರೆ?

ಈ ಪ್ರಶ್ನೆಗಳಿಗೆ ಕೆಲವು ನಿರ್ದಿಷ್ಟ ಉತ್ತರಗಳಿವೆ
ಕೆಲವು ಹಿಂದುಸ್ತಾನಿ ಉತ್ತರಗಳು
ಕೆಲವು ಪಾಕಿಸ್ತಾನಿ ಉತ್ತರಗಳು
ಕೆಲವು ಹಿಂದೂ ಉತ್ತರಗಳು
ಕೆಲವು ಮುಸ್ಲಿಂ ಉತ್ತರಗಳು
ಕೆಲವರು ಉತ್ತರಗಳನ್ನ 1857ರ ಪಾಳುಬಿದ್ದ ಇತಿಹಾಸದಲ್ಲಿ ಹುಡುಕಿದರೆ
ಇನ್ನೂ ಕೆಲವರು ಮೊಘಲ್ ಆಡಳಿತದ ಅವಶೇಷಗಳಲ್ಲಿ.

ಎಲ್ಲ ಹಿಂದೆ ಹೋಗಿ ಹುಡುಕುತ್ತಿದ್ದಾರೆ
ಆದರೆ ಇವತ್ತಿನ ಕೊಲೆಗಾರ
ರಕ್ತ ಮತ್ತು ಚೂರಿಗಳಿಂದ ಭವಿಷ್ಯ ಬರೆಯುತ್ತಿದ್ದಾನೆ

ಈ ಸುದ್ದಿ ಹೇಳುತ್ತ ಹೇಳುತ್ತ
ನಾನು ನಿಮ್ಮ ಕಲ್ಲೇಟುಗಳನ್ನ ಬೇಕಾದರೆ ಸಹಿಸಬಲ್ಲೆ
ಆದರೆ ಹಿಂದೂ-ಮುಸ್ಲಿಂ ದಂಗೆಯಲ್ಲಿ
ಯಾರಾದರೂ ನನ್ನ ತಲೆ ಒಡೆದರೆ
ನನ್ನ ರಕ್ತದ ಪ್ರತಿ ಹನಿಯೂ ಕಣ್ಣೀರಿನಲ್ಲಿ ಕೈ ತೊಳೆಯುತ್ತದೆ.

ನಾನೊಬ್ಬ ಕಲಾವಿದ
ನನಗೆ ದುಷ್ಟ ಗಾಯಗಳು ಮತ್ತು
ಕೊಳಕು ಕಲೆಗಳು ಇಷ್ಟವಿಲ್ಲ.

ಸಾದತ್ ಹಸನ್ ಮಂಟೋ
ಉರ್ದುವಿನಲ್ಲಿ ಬರೆಯುತ್ತಿದ್ದ ಖ್ಯಾತ ಕಥೆಗಾರ

*****

4. ಪ್ರೇಮದ ಪಾತ್ರ

ನಮ್ಮ ಈ ದೇಶದಲ್ಲಿ
ಎಷ್ಟೋ ಶತಮಾನಗಳ ನಂತರ
ನಮಗೆ ಸಾಧ್ಯವಾಗಿದೆ ಉಸಿರಾಡಲು,
ಎಷ್ಟೋ ದಶಕಗಳಾದ ಮೇಲೆ
ಅವಕಾಶ ದೊರೆತಿದೆ ಪ್ರೇಮಿಸಲು,
ಎಷ್ಟೋ ಸಮಯವಾದ ಮೇಲೆ
ಶುರು ಮಾಡಿದ್ದೇವೆ ಓದಲು, ಬರೆಯಲು.

ಈಗ ನಾವು ರೂಪಿಸಬೇಕಾಗಿದೆ
ನಮ್ಮ ಪ್ರೇಮ ಪದ್ಯಗಳಲ್ಲಿ
ಬಂಡಾಯದ ರೂಪಕಗಳನ್ನು

ಪ್ರೇಮ ತಾನೇ ಸ್ವತಃ
ಎದ್ದು ನಿಂತು ವಹಿಸಬೇಕಾಗಿದೆ
ಬಂಡಾಯದ ಪಾತ್ರ.

ಯೋಗೇಶ ಮೈತ್ರೇಯ
ಮರಾಠಿ ಯುವ ಕವಿ ಮತ್ತು ವಿಮರ್ಶಕ

*****

5. ಶಿಕ್ಷೆಯ ಅಗತ್ಯವಿಲ್ಲ

ಇನ್ನೊಬ್ಬರಿಂದ
ನಿಮಗೆ ನೋವಾಗುತ್ತಿದೆಯೆಂದರೆ
ಆ ಇನ್ನೊಬ್ಬರು ತಮ್ಮೊಳಗೆ
ಅನುಭವಿಸುತ್ತಿದ್ದಾರೆ ಆಳವಾದ ಸಂಕಟ,
ಮತ್ತು ಉಕ್ಕಿ ಹರಿಯುತ್ತಿದೆ.
ಅವರ ಈ ನೋವು

ನಿಮ್ಮ ಶಿಕ್ಷೆಯ ಅಗತ್ಯವಿಲ್ಲ ಅವರಿಗೆ
ಬೇಕಾಗಿದೆ ನಿಮ್ಮ ಸಹಾಯ
ಈ ಸಂದೇಶವನ್ನೇ ಅಲ್ಲವೆ
ಅವರು ತಲುಪಿಸಲು ಪ್ರಯತ್ನಿಸುತ್ತಿರುವುದು
ನಿಮಗೆ.

ತಿಚ್ ನ್ಹಾತ್ ಹಾನ್
ಬೌದ್ಧ ಚಿಂತಕ-ಬರಹಗಾರ

*****

6. ಹೃದಯದ ಬಾಗಿಲು

ಯಾರನ್ನ ವೈರಿ ಎಂದು ಗುರುತಿಸಲಿ?
ವೈರಿ ಎಂದಮೇಲೆ ಕೈ ಕೈ ಮಿಲಾಯಿಸಲು ತಕ್ಕವನಾಗಿರಬೇಕು.
ಸೂರ್ಯನ ದಿಕ್ಕಿಗೆ ಹೊರಳಿ ಒಂದೇ ಸವನೇ ನಡೆಯುತ್ತಿದ್ದೇನೆ.
ಈಗ ಪ್ರಶ್ನೆ ಕೇಳುತ್ತಿರುವುದು ಹೃದಯ,
ಉದ್ರಿಕ್ತ ಮನಸ್ಸಲ್ಲ.
ಹೃದಯ ಮತ್ತು ಸೂರ್ಯನ ಅಮ್ಮಂದಿರು
ಖಾಸಾ ಅಕ್ಕ ತಂಗಿಯರು.
ಹೃದಯಕ್ಕೆ ನೋಡುವುದೂ ಗೊತ್ತು
ನೋಡಿದ್ದಕ್ಕೆ ಅರ್ಥ ಹಚ್ಚುವುದೂ ಗೊತ್ತು.
ಹೃದಯ,
ಕಟಕಟ ಎನ್ನುತ್ತಿರುವ ಹಲ್ಲುಗಳ ಸಿಟ್ಟಿನ ಕಥೆಯನ್ನು
ಎಷ್ಟು ಸೂಕ್ಷ್ಮವಾಗಿ
ಅರ್ಥಮಾಡಿಕೊಳ್ಳುತ್ತದೆಯೋ
ಅಷ್ಟೇ ಸೂಕ್ಷ್ಮವಾಗಿ
ಮನದಲ್ಲಿಯೇ ಅಂದುಕೊಂಡ ಹಾರೈಕೆಯನ್ನೂ ಕೇಳಿಸಿಕೊಳ್ಳಬಲ್ಲದು.

ಮನಸ್ಸಿನ ಬಾಗಿಲು
ಹೃದಯದ ಮೂಲಕವೇ ತೆರೆದುಕೊಳ್ಳಬೇಕು,
ಯಾವ ವೈರಿ ಒಳಗೆ ನುಗ್ಗಿದರೂ
ಗೆಳೆಯನಾಗುವ ಅಪಾಯವನ್ನು ದಾಟಿಯೇ
ಮುಂದೆ ಹೋಗಬೇಕು.

ಜಾಯ್ ಹಾಜೊ
ಅಮೆರಿಕನ್ ಕವಿ-ಸಂಗೀತಕಾರ್ತಿ

*****

7. ಭಗವಂತನ ಪವಿತ್ರ ಯೋಜನೆ

ಈ ಜಗತ್ತಿನಲ್ಲಿ
ಒಬ್ಬರು, ಇನ್ನೊಬ್ಬರ ಹಾಗಿಲ್ಲ.
ಒಂದು ಹೃದಯದ ಹಾಗೆ
ಇನ್ನೊಂದು ಹೃದಯ ಮಿಡಿಯುವುದಿಲ್ಲ.
ಎಲ್ಲ ಭಗವಂತನ ಕಲ್ಪನೆ
ಸಮಸ್ತವೂ ವಿಭಿನ್ನ,
ಪ್ರತಿಯೊಂದೂ ಅನನ್ಯ.

ಎಲ್ಲವನ್ನೂ ಒಂದೇ ಎರಕಕ್ಕೆ ಹಾಕಿ
ಸೃಷ್ಟಿಮಾಡುವ ಹುಕಿ
ಭಗವಂತನದ್ದಾಗಿದ್ದರೆ
ಆತ ಹಾಗೆ ಮಾಡಬಹುದಾಗಿತ್ತು
ಮಾಡುತ್ತಿದ್ದ ಕೂಡ.
ಆದರೆ ಪರಿಸ್ಥಿತಿ ಹಾಗಿಲ್ಲವಲ್ಲ.

ನಮ್ಮ ನಡುವಿನ ವ್ಯತ್ಯಾಸವನ್ನು
ಅವಮಾನಿಸುವುದು
ನಮ್ಮ ಅಭಿಪ್ರಾಯಗಳನ್ನು, ಆಶಯಗಳನ್ನು
ಇನ್ನೊಬ್ಬರ ಮೇಲೆ ಹೇರುವುದು,

ಭಗವಂತನ ಪವಿತ್ರ ಯೋಜನೆಯನ್ನು
ಅವಮಾನಿಸಿದಂತೆ

ಶಮ್ಸ್ ತಬ್ರೀಝೀ
12 ನೇ ಶತಮಾನದ ಪರ್ಶಿಯನ್ ಕವಿ

*****

8. ಭಗವಂತನಿಂದ

ನಾನು ಎಷ್ಟೆಲ್ಲಾ ಕಲಿತಿದ್ದೇನೆಂದರೆ
ನಾನೊಬ್ಬ
ಕ್ರಿಶ್ಚಿಯನ್, ಮುಸ್ಲಿಂ, ಹಿಂದೂ, ಬೌದ್ಧ
ಎಂದೆಲ್ಲ ಹೇಳಿಕೊಳ್ಳಲೂ
ನನಗೆ ನಾಚಿಕೆಯಾಗುತ್ತದೆ.

ಸತ್ಯ ನನ್ನೊಂದಿಗೆ
ಎಷ್ಟು ಒಂದಾಗಿದೆಯೆಂದರೆ
ನನ್ನನ್ನು
ಗಂಡು, ಹೆಣ್ಣು, ಪ್ರವಾದಿ
ಅಥವಾ ಪವಿತ್ರ ಆತ್ಮ ಎಂದುಕೊಳ್ಳಲೂ
ಭಯವಾಗುತ್ತದೆ.

ಪ್ರೇಮ ನನ್ನನ್ನು
ಎಷ್ಟು ಅಲುಗಾಡಿಸಿದೆಯೆಂದರೆ
ತಾನೇ ಬೆಂಕಿಯಲ್ಲಿ ಹಾರಿ
ನನಗೆ ಗೊತ್ತಿರುವ ಎಲ್ಲ
ಸಿದ್ಧಾಂತಗಳಿಂದ, ವೇಷಗಳಿಂದ
ನನ್ನನು ಮುಕ್ತಗೊಳಿಸಿದೆ.

ಹಾಫಿಜ್
14ನೇ ಶತಮಾನದ ಪರ್ಶಿಯನ್ ಕವಿ

ಚಿದಂಬರ ನರೇಂದ್ರ

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ
ಕವಿ-ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಚಿದಂಬರ ಅನುವಾದಿಸಿರುವ ಕವನ ಸಂಕಲನ. ’ಗಾಳಿಕೆನೆ’ ಅವರ ಸ್ವತಂತ್ರ ಕವಿತೆಗಳ ಸಂಕಲನ


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...