Homeಅಂಕಣಗಳುಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

ಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

- Advertisement -
- Advertisement -
  1. ಗಡಿ

ಛೇ!
ಇದು ಬರೀ ಒಂದು ಗೆರೆ ಕಣೋ
ಯಾರೋ ಸಿಟ್ಟಲ್ಲಿ ಗೀಚಿದ್ದಾರೆ ಅಷ್ಟೆ.
ಬಾ, ಬಾ ಈ ಗೆರೆಯನ್ನೇ
centre line ಮಾಡಿ ಕಬಡ್ಡಿ ಆಡೋಣ.

ನನ್ನ ಏರಿಯಾಗೆ ಬಾ, ಬಂದು
ಒಂದು ಆವಾಜ್ ಹಾಕು.
ನನ್ನ ಮೇಲೆ ಕೈ ಬೀಸು, ಮುಟ್ಟಿ
ಹಿಂದಿರುಗು ನೋಡೋಣ.

ನಾನೂ ಬಿಡೋದಿಲ್ಲ
ನಿನ್ನ ಮೇಲೆ ಬೀಳುತ್ತೇನೆ
ಕಟ್ಟಿಹಾಕುತ್ತೇನೆ ವಾಪಸ್ಸು ಹೋಗದಂತೆ.

ನನ್ನ ಪಾಳಿ ಈಗ,
ನಿನ್ನ ಏರಿಯಾಕ್ಕೆ ನಾನು
ಹು ತು ತೂ ಅನ್ನುತ್ತ ಆಕ್ರಮಣ ಮಾಡಿದಾಗ
ಸಾಧ್ಯವಾದರೆ ನನ್ನ ಹಿಡಿ
ಬಿಡಬೇಡ ವಾಪಸ್ಸು ಗಡಿ ದಾಟಲು.

ಇದು ಬರೀ ಒಂದು ಗೆರೆ ಕಣೋ
ಹಾಗೇ ಇರಲಿ ಬಿಡು
ಯಾರೋ ಸಿಟ್ಟಿನಿಂದ ಗೀಚಿದ್ದಾರೆ
ಅಷ್ಟೇ.

ಗುಲ್ಜಾರ್
ಖ್ಯಾತ ಉರ್ದು ಕವಿ – ಸಿನಿಮಾ ಸಾಹಿತಿ

*****

2. ಕಣ್ಣುಗಳಿಗೆ ವೀಸಾ ಬೇಕಿಲ್ಲ

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.
ಕಣ್ಮುಚ್ಚಿ
ಹಾರಿಬಿಡುತ್ತೇನೆ ಪ್ರತಿದಿನ
ಗಡಿಗಳ ಮಿತಿಯನ್ನು,
ಭೇಟಿಯಾಗಲು
ಮೆಹದೀ ಹಸನ್‌ನನ್ನು!

ಪೆಟ್ಟಾಗಿದೆಯಂತೆ ಅವನ ದನಿಗೇನೋ
ಕುಳಿತುಬಿಟ್ಟಿದೆಯಂತೆ ಗಜಲ್
ಅವನೆದುರು ಮೂಕವಾಗಿ
ತುಟಿ ಕಂಪಿಸುತ್ತ
ಪುಟಗಳ ನಡುವಿನ ಹೂವು
ಒಣಗಿಹೋಗಿದೆಯೆಂದರೆ
ಗೆಳೆಯ ’ಫರಾಜ್’ ಕೂಡ
ಇನ್ನಿಲ್ಲ ಎಂದೇ ಅರ್ಥ.
ಬಹುಶಃ ಇನ್ನು ಕನಸುಗಳಲ್ಲೇ
ನಮ್ಮ ಭೇಟಿ.

ಕಣ್ಮುಚ್ಚಿಕೊಂಡು ದಾಟಿಬಿಡುತ್ತೇನೆ
ಗಡಿಗಳ ಮಿತಿಯನ್ನು ಮೇಲಿಂದ ಮೇಲೆ.

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.

ಗುಲ್ಜಾರ್
ಖ್ಯಾತ ಉರ್ದು ಕವಿ- ಸಿನಿಮಾ ಸಾಹಿತಿ

*****

3. ಕಲಾವಿದನ ಸಂಕಟ

ಹಿಂದುಸ್ತಾನ್ ಜಿಂದಾಬಾದ್
ಪಾಕಿಸ್ತಾನ್ ಜಿಂದಾಬಾದ್
ಎಂದು ಕೂಗುತ್ತ, ಚೀರುತ್ತ ಸಾಗಿರುವ
ಘೋಷಣೆಗಳ ನಡುವೆ
ಬೇಕಾದಷ್ಟು ಪ್ರಶ್ನೆಗಳಿದ್ದವು.

ಯಾವುದನ್ನ ನನ್ನ ದೇಶ ಅಂತ ಹೇಳಲಿ?
ಜನ ಯಾಕೆ ಹೀಗೆ ಒಬ್ಬರಾದ ಮೇಲೊಬ್ಬರು ಸಾಯುತ್ತಿದ್ದಾರೆ?

ಈ ಪ್ರಶ್ನೆಗಳಿಗೆ ಕೆಲವು ನಿರ್ದಿಷ್ಟ ಉತ್ತರಗಳಿವೆ
ಕೆಲವು ಹಿಂದುಸ್ತಾನಿ ಉತ್ತರಗಳು
ಕೆಲವು ಪಾಕಿಸ್ತಾನಿ ಉತ್ತರಗಳು
ಕೆಲವು ಹಿಂದೂ ಉತ್ತರಗಳು
ಕೆಲವು ಮುಸ್ಲಿಂ ಉತ್ತರಗಳು
ಕೆಲವರು ಉತ್ತರಗಳನ್ನ 1857ರ ಪಾಳುಬಿದ್ದ ಇತಿಹಾಸದಲ್ಲಿ ಹುಡುಕಿದರೆ
ಇನ್ನೂ ಕೆಲವರು ಮೊಘಲ್ ಆಡಳಿತದ ಅವಶೇಷಗಳಲ್ಲಿ.

ಎಲ್ಲ ಹಿಂದೆ ಹೋಗಿ ಹುಡುಕುತ್ತಿದ್ದಾರೆ
ಆದರೆ ಇವತ್ತಿನ ಕೊಲೆಗಾರ
ರಕ್ತ ಮತ್ತು ಚೂರಿಗಳಿಂದ ಭವಿಷ್ಯ ಬರೆಯುತ್ತಿದ್ದಾನೆ

ಈ ಸುದ್ದಿ ಹೇಳುತ್ತ ಹೇಳುತ್ತ
ನಾನು ನಿಮ್ಮ ಕಲ್ಲೇಟುಗಳನ್ನ ಬೇಕಾದರೆ ಸಹಿಸಬಲ್ಲೆ
ಆದರೆ ಹಿಂದೂ-ಮುಸ್ಲಿಂ ದಂಗೆಯಲ್ಲಿ
ಯಾರಾದರೂ ನನ್ನ ತಲೆ ಒಡೆದರೆ
ನನ್ನ ರಕ್ತದ ಪ್ರತಿ ಹನಿಯೂ ಕಣ್ಣೀರಿನಲ್ಲಿ ಕೈ ತೊಳೆಯುತ್ತದೆ.

ನಾನೊಬ್ಬ ಕಲಾವಿದ
ನನಗೆ ದುಷ್ಟ ಗಾಯಗಳು ಮತ್ತು
ಕೊಳಕು ಕಲೆಗಳು ಇಷ್ಟವಿಲ್ಲ.

ಸಾದತ್ ಹಸನ್ ಮಂಟೋ
ಉರ್ದುವಿನಲ್ಲಿ ಬರೆಯುತ್ತಿದ್ದ ಖ್ಯಾತ ಕಥೆಗಾರ

*****

4. ಪ್ರೇಮದ ಪಾತ್ರ

ನಮ್ಮ ಈ ದೇಶದಲ್ಲಿ
ಎಷ್ಟೋ ಶತಮಾನಗಳ ನಂತರ
ನಮಗೆ ಸಾಧ್ಯವಾಗಿದೆ ಉಸಿರಾಡಲು,
ಎಷ್ಟೋ ದಶಕಗಳಾದ ಮೇಲೆ
ಅವಕಾಶ ದೊರೆತಿದೆ ಪ್ರೇಮಿಸಲು,
ಎಷ್ಟೋ ಸಮಯವಾದ ಮೇಲೆ
ಶುರು ಮಾಡಿದ್ದೇವೆ ಓದಲು, ಬರೆಯಲು.

ಈಗ ನಾವು ರೂಪಿಸಬೇಕಾಗಿದೆ
ನಮ್ಮ ಪ್ರೇಮ ಪದ್ಯಗಳಲ್ಲಿ
ಬಂಡಾಯದ ರೂಪಕಗಳನ್ನು

ಪ್ರೇಮ ತಾನೇ ಸ್ವತಃ
ಎದ್ದು ನಿಂತು ವಹಿಸಬೇಕಾಗಿದೆ
ಬಂಡಾಯದ ಪಾತ್ರ.

ಯೋಗೇಶ ಮೈತ್ರೇಯ
ಮರಾಠಿ ಯುವ ಕವಿ ಮತ್ತು ವಿಮರ್ಶಕ

*****

5. ಶಿಕ್ಷೆಯ ಅಗತ್ಯವಿಲ್ಲ

ಇನ್ನೊಬ್ಬರಿಂದ
ನಿಮಗೆ ನೋವಾಗುತ್ತಿದೆಯೆಂದರೆ
ಆ ಇನ್ನೊಬ್ಬರು ತಮ್ಮೊಳಗೆ
ಅನುಭವಿಸುತ್ತಿದ್ದಾರೆ ಆಳವಾದ ಸಂಕಟ,
ಮತ್ತು ಉಕ್ಕಿ ಹರಿಯುತ್ತಿದೆ.
ಅವರ ಈ ನೋವು

ನಿಮ್ಮ ಶಿಕ್ಷೆಯ ಅಗತ್ಯವಿಲ್ಲ ಅವರಿಗೆ
ಬೇಕಾಗಿದೆ ನಿಮ್ಮ ಸಹಾಯ
ಈ ಸಂದೇಶವನ್ನೇ ಅಲ್ಲವೆ
ಅವರು ತಲುಪಿಸಲು ಪ್ರಯತ್ನಿಸುತ್ತಿರುವುದು
ನಿಮಗೆ.

ತಿಚ್ ನ್ಹಾತ್ ಹಾನ್
ಬೌದ್ಧ ಚಿಂತಕ-ಬರಹಗಾರ

*****

6. ಹೃದಯದ ಬಾಗಿಲು

ಯಾರನ್ನ ವೈರಿ ಎಂದು ಗುರುತಿಸಲಿ?
ವೈರಿ ಎಂದಮೇಲೆ ಕೈ ಕೈ ಮಿಲಾಯಿಸಲು ತಕ್ಕವನಾಗಿರಬೇಕು.
ಸೂರ್ಯನ ದಿಕ್ಕಿಗೆ ಹೊರಳಿ ಒಂದೇ ಸವನೇ ನಡೆಯುತ್ತಿದ್ದೇನೆ.
ಈಗ ಪ್ರಶ್ನೆ ಕೇಳುತ್ತಿರುವುದು ಹೃದಯ,
ಉದ್ರಿಕ್ತ ಮನಸ್ಸಲ್ಲ.
ಹೃದಯ ಮತ್ತು ಸೂರ್ಯನ ಅಮ್ಮಂದಿರು
ಖಾಸಾ ಅಕ್ಕ ತಂಗಿಯರು.
ಹೃದಯಕ್ಕೆ ನೋಡುವುದೂ ಗೊತ್ತು
ನೋಡಿದ್ದಕ್ಕೆ ಅರ್ಥ ಹಚ್ಚುವುದೂ ಗೊತ್ತು.
ಹೃದಯ,
ಕಟಕಟ ಎನ್ನುತ್ತಿರುವ ಹಲ್ಲುಗಳ ಸಿಟ್ಟಿನ ಕಥೆಯನ್ನು
ಎಷ್ಟು ಸೂಕ್ಷ್ಮವಾಗಿ
ಅರ್ಥಮಾಡಿಕೊಳ್ಳುತ್ತದೆಯೋ
ಅಷ್ಟೇ ಸೂಕ್ಷ್ಮವಾಗಿ
ಮನದಲ್ಲಿಯೇ ಅಂದುಕೊಂಡ ಹಾರೈಕೆಯನ್ನೂ ಕೇಳಿಸಿಕೊಳ್ಳಬಲ್ಲದು.

ಮನಸ್ಸಿನ ಬಾಗಿಲು
ಹೃದಯದ ಮೂಲಕವೇ ತೆರೆದುಕೊಳ್ಳಬೇಕು,
ಯಾವ ವೈರಿ ಒಳಗೆ ನುಗ್ಗಿದರೂ
ಗೆಳೆಯನಾಗುವ ಅಪಾಯವನ್ನು ದಾಟಿಯೇ
ಮುಂದೆ ಹೋಗಬೇಕು.

ಜಾಯ್ ಹಾಜೊ
ಅಮೆರಿಕನ್ ಕವಿ-ಸಂಗೀತಕಾರ್ತಿ

*****

7. ಭಗವಂತನ ಪವಿತ್ರ ಯೋಜನೆ

ಈ ಜಗತ್ತಿನಲ್ಲಿ
ಒಬ್ಬರು, ಇನ್ನೊಬ್ಬರ ಹಾಗಿಲ್ಲ.
ಒಂದು ಹೃದಯದ ಹಾಗೆ
ಇನ್ನೊಂದು ಹೃದಯ ಮಿಡಿಯುವುದಿಲ್ಲ.
ಎಲ್ಲ ಭಗವಂತನ ಕಲ್ಪನೆ
ಸಮಸ್ತವೂ ವಿಭಿನ್ನ,
ಪ್ರತಿಯೊಂದೂ ಅನನ್ಯ.

ಎಲ್ಲವನ್ನೂ ಒಂದೇ ಎರಕಕ್ಕೆ ಹಾಕಿ
ಸೃಷ್ಟಿಮಾಡುವ ಹುಕಿ
ಭಗವಂತನದ್ದಾಗಿದ್ದರೆ
ಆತ ಹಾಗೆ ಮಾಡಬಹುದಾಗಿತ್ತು
ಮಾಡುತ್ತಿದ್ದ ಕೂಡ.
ಆದರೆ ಪರಿಸ್ಥಿತಿ ಹಾಗಿಲ್ಲವಲ್ಲ.

ನಮ್ಮ ನಡುವಿನ ವ್ಯತ್ಯಾಸವನ್ನು
ಅವಮಾನಿಸುವುದು
ನಮ್ಮ ಅಭಿಪ್ರಾಯಗಳನ್ನು, ಆಶಯಗಳನ್ನು
ಇನ್ನೊಬ್ಬರ ಮೇಲೆ ಹೇರುವುದು,

ಭಗವಂತನ ಪವಿತ್ರ ಯೋಜನೆಯನ್ನು
ಅವಮಾನಿಸಿದಂತೆ

ಶಮ್ಸ್ ತಬ್ರೀಝೀ
12 ನೇ ಶತಮಾನದ ಪರ್ಶಿಯನ್ ಕವಿ

*****

8. ಭಗವಂತನಿಂದ

ನಾನು ಎಷ್ಟೆಲ್ಲಾ ಕಲಿತಿದ್ದೇನೆಂದರೆ
ನಾನೊಬ್ಬ
ಕ್ರಿಶ್ಚಿಯನ್, ಮುಸ್ಲಿಂ, ಹಿಂದೂ, ಬೌದ್ಧ
ಎಂದೆಲ್ಲ ಹೇಳಿಕೊಳ್ಳಲೂ
ನನಗೆ ನಾಚಿಕೆಯಾಗುತ್ತದೆ.

ಸತ್ಯ ನನ್ನೊಂದಿಗೆ
ಎಷ್ಟು ಒಂದಾಗಿದೆಯೆಂದರೆ
ನನ್ನನ್ನು
ಗಂಡು, ಹೆಣ್ಣು, ಪ್ರವಾದಿ
ಅಥವಾ ಪವಿತ್ರ ಆತ್ಮ ಎಂದುಕೊಳ್ಳಲೂ
ಭಯವಾಗುತ್ತದೆ.

ಪ್ರೇಮ ನನ್ನನ್ನು
ಎಷ್ಟು ಅಲುಗಾಡಿಸಿದೆಯೆಂದರೆ
ತಾನೇ ಬೆಂಕಿಯಲ್ಲಿ ಹಾರಿ
ನನಗೆ ಗೊತ್ತಿರುವ ಎಲ್ಲ
ಸಿದ್ಧಾಂತಗಳಿಂದ, ವೇಷಗಳಿಂದ
ನನ್ನನು ಮುಕ್ತಗೊಳಿಸಿದೆ.

ಹಾಫಿಜ್
14ನೇ ಶತಮಾನದ ಪರ್ಶಿಯನ್ ಕವಿ

ಚಿದಂಬರ ನರೇಂದ್ರ

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ
ಕವಿ-ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಚಿದಂಬರ ಅನುವಾದಿಸಿರುವ ಕವನ ಸಂಕಲನ. ’ಗಾಳಿಕೆನೆ’ ಅವರ ಸ್ವತಂತ್ರ ಕವಿತೆಗಳ ಸಂಕಲನ


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...