Homeಅಂಕಣಗಳುಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

ಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

- Advertisement -
- Advertisement -
  1. ಗಡಿ

ಛೇ!
ಇದು ಬರೀ ಒಂದು ಗೆರೆ ಕಣೋ
ಯಾರೋ ಸಿಟ್ಟಲ್ಲಿ ಗೀಚಿದ್ದಾರೆ ಅಷ್ಟೆ.
ಬಾ, ಬಾ ಈ ಗೆರೆಯನ್ನೇ
centre line ಮಾಡಿ ಕಬಡ್ಡಿ ಆಡೋಣ.

ನನ್ನ ಏರಿಯಾಗೆ ಬಾ, ಬಂದು
ಒಂದು ಆವಾಜ್ ಹಾಕು.
ನನ್ನ ಮೇಲೆ ಕೈ ಬೀಸು, ಮುಟ್ಟಿ
ಹಿಂದಿರುಗು ನೋಡೋಣ.

ನಾನೂ ಬಿಡೋದಿಲ್ಲ
ನಿನ್ನ ಮೇಲೆ ಬೀಳುತ್ತೇನೆ
ಕಟ್ಟಿಹಾಕುತ್ತೇನೆ ವಾಪಸ್ಸು ಹೋಗದಂತೆ.

ನನ್ನ ಪಾಳಿ ಈಗ,
ನಿನ್ನ ಏರಿಯಾಕ್ಕೆ ನಾನು
ಹು ತು ತೂ ಅನ್ನುತ್ತ ಆಕ್ರಮಣ ಮಾಡಿದಾಗ
ಸಾಧ್ಯವಾದರೆ ನನ್ನ ಹಿಡಿ
ಬಿಡಬೇಡ ವಾಪಸ್ಸು ಗಡಿ ದಾಟಲು.

ಇದು ಬರೀ ಒಂದು ಗೆರೆ ಕಣೋ
ಹಾಗೇ ಇರಲಿ ಬಿಡು
ಯಾರೋ ಸಿಟ್ಟಿನಿಂದ ಗೀಚಿದ್ದಾರೆ
ಅಷ್ಟೇ.

ಗುಲ್ಜಾರ್
ಖ್ಯಾತ ಉರ್ದು ಕವಿ – ಸಿನಿಮಾ ಸಾಹಿತಿ

*****

2. ಕಣ್ಣುಗಳಿಗೆ ವೀಸಾ ಬೇಕಿಲ್ಲ

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.
ಕಣ್ಮುಚ್ಚಿ
ಹಾರಿಬಿಡುತ್ತೇನೆ ಪ್ರತಿದಿನ
ಗಡಿಗಳ ಮಿತಿಯನ್ನು,
ಭೇಟಿಯಾಗಲು
ಮೆಹದೀ ಹಸನ್‌ನನ್ನು!

ಪೆಟ್ಟಾಗಿದೆಯಂತೆ ಅವನ ದನಿಗೇನೋ
ಕುಳಿತುಬಿಟ್ಟಿದೆಯಂತೆ ಗಜಲ್
ಅವನೆದುರು ಮೂಕವಾಗಿ
ತುಟಿ ಕಂಪಿಸುತ್ತ
ಪುಟಗಳ ನಡುವಿನ ಹೂವು
ಒಣಗಿಹೋಗಿದೆಯೆಂದರೆ
ಗೆಳೆಯ ’ಫರಾಜ್’ ಕೂಡ
ಇನ್ನಿಲ್ಲ ಎಂದೇ ಅರ್ಥ.
ಬಹುಶಃ ಇನ್ನು ಕನಸುಗಳಲ್ಲೇ
ನಮ್ಮ ಭೇಟಿ.

ಕಣ್ಮುಚ್ಚಿಕೊಂಡು ದಾಟಿಬಿಡುತ್ತೇನೆ
ಗಡಿಗಳ ಮಿತಿಯನ್ನು ಮೇಲಿಂದ ಮೇಲೆ.

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.

ಗುಲ್ಜಾರ್
ಖ್ಯಾತ ಉರ್ದು ಕವಿ- ಸಿನಿಮಾ ಸಾಹಿತಿ

*****

3. ಕಲಾವಿದನ ಸಂಕಟ

ಹಿಂದುಸ್ತಾನ್ ಜಿಂದಾಬಾದ್
ಪಾಕಿಸ್ತಾನ್ ಜಿಂದಾಬಾದ್
ಎಂದು ಕೂಗುತ್ತ, ಚೀರುತ್ತ ಸಾಗಿರುವ
ಘೋಷಣೆಗಳ ನಡುವೆ
ಬೇಕಾದಷ್ಟು ಪ್ರಶ್ನೆಗಳಿದ್ದವು.

ಯಾವುದನ್ನ ನನ್ನ ದೇಶ ಅಂತ ಹೇಳಲಿ?
ಜನ ಯಾಕೆ ಹೀಗೆ ಒಬ್ಬರಾದ ಮೇಲೊಬ್ಬರು ಸಾಯುತ್ತಿದ್ದಾರೆ?

ಈ ಪ್ರಶ್ನೆಗಳಿಗೆ ಕೆಲವು ನಿರ್ದಿಷ್ಟ ಉತ್ತರಗಳಿವೆ
ಕೆಲವು ಹಿಂದುಸ್ತಾನಿ ಉತ್ತರಗಳು
ಕೆಲವು ಪಾಕಿಸ್ತಾನಿ ಉತ್ತರಗಳು
ಕೆಲವು ಹಿಂದೂ ಉತ್ತರಗಳು
ಕೆಲವು ಮುಸ್ಲಿಂ ಉತ್ತರಗಳು
ಕೆಲವರು ಉತ್ತರಗಳನ್ನ 1857ರ ಪಾಳುಬಿದ್ದ ಇತಿಹಾಸದಲ್ಲಿ ಹುಡುಕಿದರೆ
ಇನ್ನೂ ಕೆಲವರು ಮೊಘಲ್ ಆಡಳಿತದ ಅವಶೇಷಗಳಲ್ಲಿ.

ಎಲ್ಲ ಹಿಂದೆ ಹೋಗಿ ಹುಡುಕುತ್ತಿದ್ದಾರೆ
ಆದರೆ ಇವತ್ತಿನ ಕೊಲೆಗಾರ
ರಕ್ತ ಮತ್ತು ಚೂರಿಗಳಿಂದ ಭವಿಷ್ಯ ಬರೆಯುತ್ತಿದ್ದಾನೆ

ಈ ಸುದ್ದಿ ಹೇಳುತ್ತ ಹೇಳುತ್ತ
ನಾನು ನಿಮ್ಮ ಕಲ್ಲೇಟುಗಳನ್ನ ಬೇಕಾದರೆ ಸಹಿಸಬಲ್ಲೆ
ಆದರೆ ಹಿಂದೂ-ಮುಸ್ಲಿಂ ದಂಗೆಯಲ್ಲಿ
ಯಾರಾದರೂ ನನ್ನ ತಲೆ ಒಡೆದರೆ
ನನ್ನ ರಕ್ತದ ಪ್ರತಿ ಹನಿಯೂ ಕಣ್ಣೀರಿನಲ್ಲಿ ಕೈ ತೊಳೆಯುತ್ತದೆ.

ನಾನೊಬ್ಬ ಕಲಾವಿದ
ನನಗೆ ದುಷ್ಟ ಗಾಯಗಳು ಮತ್ತು
ಕೊಳಕು ಕಲೆಗಳು ಇಷ್ಟವಿಲ್ಲ.

ಸಾದತ್ ಹಸನ್ ಮಂಟೋ
ಉರ್ದುವಿನಲ್ಲಿ ಬರೆಯುತ್ತಿದ್ದ ಖ್ಯಾತ ಕಥೆಗಾರ

*****

4. ಪ್ರೇಮದ ಪಾತ್ರ

ನಮ್ಮ ಈ ದೇಶದಲ್ಲಿ
ಎಷ್ಟೋ ಶತಮಾನಗಳ ನಂತರ
ನಮಗೆ ಸಾಧ್ಯವಾಗಿದೆ ಉಸಿರಾಡಲು,
ಎಷ್ಟೋ ದಶಕಗಳಾದ ಮೇಲೆ
ಅವಕಾಶ ದೊರೆತಿದೆ ಪ್ರೇಮಿಸಲು,
ಎಷ್ಟೋ ಸಮಯವಾದ ಮೇಲೆ
ಶುರು ಮಾಡಿದ್ದೇವೆ ಓದಲು, ಬರೆಯಲು.

ಈಗ ನಾವು ರೂಪಿಸಬೇಕಾಗಿದೆ
ನಮ್ಮ ಪ್ರೇಮ ಪದ್ಯಗಳಲ್ಲಿ
ಬಂಡಾಯದ ರೂಪಕಗಳನ್ನು

ಪ್ರೇಮ ತಾನೇ ಸ್ವತಃ
ಎದ್ದು ನಿಂತು ವಹಿಸಬೇಕಾಗಿದೆ
ಬಂಡಾಯದ ಪಾತ್ರ.

ಯೋಗೇಶ ಮೈತ್ರೇಯ
ಮರಾಠಿ ಯುವ ಕವಿ ಮತ್ತು ವಿಮರ್ಶಕ

*****

5. ಶಿಕ್ಷೆಯ ಅಗತ್ಯವಿಲ್ಲ

ಇನ್ನೊಬ್ಬರಿಂದ
ನಿಮಗೆ ನೋವಾಗುತ್ತಿದೆಯೆಂದರೆ
ಆ ಇನ್ನೊಬ್ಬರು ತಮ್ಮೊಳಗೆ
ಅನುಭವಿಸುತ್ತಿದ್ದಾರೆ ಆಳವಾದ ಸಂಕಟ,
ಮತ್ತು ಉಕ್ಕಿ ಹರಿಯುತ್ತಿದೆ.
ಅವರ ಈ ನೋವು

ನಿಮ್ಮ ಶಿಕ್ಷೆಯ ಅಗತ್ಯವಿಲ್ಲ ಅವರಿಗೆ
ಬೇಕಾಗಿದೆ ನಿಮ್ಮ ಸಹಾಯ
ಈ ಸಂದೇಶವನ್ನೇ ಅಲ್ಲವೆ
ಅವರು ತಲುಪಿಸಲು ಪ್ರಯತ್ನಿಸುತ್ತಿರುವುದು
ನಿಮಗೆ.

ತಿಚ್ ನ್ಹಾತ್ ಹಾನ್
ಬೌದ್ಧ ಚಿಂತಕ-ಬರಹಗಾರ

*****

6. ಹೃದಯದ ಬಾಗಿಲು

ಯಾರನ್ನ ವೈರಿ ಎಂದು ಗುರುತಿಸಲಿ?
ವೈರಿ ಎಂದಮೇಲೆ ಕೈ ಕೈ ಮಿಲಾಯಿಸಲು ತಕ್ಕವನಾಗಿರಬೇಕು.
ಸೂರ್ಯನ ದಿಕ್ಕಿಗೆ ಹೊರಳಿ ಒಂದೇ ಸವನೇ ನಡೆಯುತ್ತಿದ್ದೇನೆ.
ಈಗ ಪ್ರಶ್ನೆ ಕೇಳುತ್ತಿರುವುದು ಹೃದಯ,
ಉದ್ರಿಕ್ತ ಮನಸ್ಸಲ್ಲ.
ಹೃದಯ ಮತ್ತು ಸೂರ್ಯನ ಅಮ್ಮಂದಿರು
ಖಾಸಾ ಅಕ್ಕ ತಂಗಿಯರು.
ಹೃದಯಕ್ಕೆ ನೋಡುವುದೂ ಗೊತ್ತು
ನೋಡಿದ್ದಕ್ಕೆ ಅರ್ಥ ಹಚ್ಚುವುದೂ ಗೊತ್ತು.
ಹೃದಯ,
ಕಟಕಟ ಎನ್ನುತ್ತಿರುವ ಹಲ್ಲುಗಳ ಸಿಟ್ಟಿನ ಕಥೆಯನ್ನು
ಎಷ್ಟು ಸೂಕ್ಷ್ಮವಾಗಿ
ಅರ್ಥಮಾಡಿಕೊಳ್ಳುತ್ತದೆಯೋ
ಅಷ್ಟೇ ಸೂಕ್ಷ್ಮವಾಗಿ
ಮನದಲ್ಲಿಯೇ ಅಂದುಕೊಂಡ ಹಾರೈಕೆಯನ್ನೂ ಕೇಳಿಸಿಕೊಳ್ಳಬಲ್ಲದು.

ಮನಸ್ಸಿನ ಬಾಗಿಲು
ಹೃದಯದ ಮೂಲಕವೇ ತೆರೆದುಕೊಳ್ಳಬೇಕು,
ಯಾವ ವೈರಿ ಒಳಗೆ ನುಗ್ಗಿದರೂ
ಗೆಳೆಯನಾಗುವ ಅಪಾಯವನ್ನು ದಾಟಿಯೇ
ಮುಂದೆ ಹೋಗಬೇಕು.

ಜಾಯ್ ಹಾಜೊ
ಅಮೆರಿಕನ್ ಕವಿ-ಸಂಗೀತಕಾರ್ತಿ

*****

7. ಭಗವಂತನ ಪವಿತ್ರ ಯೋಜನೆ

ಈ ಜಗತ್ತಿನಲ್ಲಿ
ಒಬ್ಬರು, ಇನ್ನೊಬ್ಬರ ಹಾಗಿಲ್ಲ.
ಒಂದು ಹೃದಯದ ಹಾಗೆ
ಇನ್ನೊಂದು ಹೃದಯ ಮಿಡಿಯುವುದಿಲ್ಲ.
ಎಲ್ಲ ಭಗವಂತನ ಕಲ್ಪನೆ
ಸಮಸ್ತವೂ ವಿಭಿನ್ನ,
ಪ್ರತಿಯೊಂದೂ ಅನನ್ಯ.

ಎಲ್ಲವನ್ನೂ ಒಂದೇ ಎರಕಕ್ಕೆ ಹಾಕಿ
ಸೃಷ್ಟಿಮಾಡುವ ಹುಕಿ
ಭಗವಂತನದ್ದಾಗಿದ್ದರೆ
ಆತ ಹಾಗೆ ಮಾಡಬಹುದಾಗಿತ್ತು
ಮಾಡುತ್ತಿದ್ದ ಕೂಡ.
ಆದರೆ ಪರಿಸ್ಥಿತಿ ಹಾಗಿಲ್ಲವಲ್ಲ.

ನಮ್ಮ ನಡುವಿನ ವ್ಯತ್ಯಾಸವನ್ನು
ಅವಮಾನಿಸುವುದು
ನಮ್ಮ ಅಭಿಪ್ರಾಯಗಳನ್ನು, ಆಶಯಗಳನ್ನು
ಇನ್ನೊಬ್ಬರ ಮೇಲೆ ಹೇರುವುದು,

ಭಗವಂತನ ಪವಿತ್ರ ಯೋಜನೆಯನ್ನು
ಅವಮಾನಿಸಿದಂತೆ

ಶಮ್ಸ್ ತಬ್ರೀಝೀ
12 ನೇ ಶತಮಾನದ ಪರ್ಶಿಯನ್ ಕವಿ

*****

8. ಭಗವಂತನಿಂದ

ನಾನು ಎಷ್ಟೆಲ್ಲಾ ಕಲಿತಿದ್ದೇನೆಂದರೆ
ನಾನೊಬ್ಬ
ಕ್ರಿಶ್ಚಿಯನ್, ಮುಸ್ಲಿಂ, ಹಿಂದೂ, ಬೌದ್ಧ
ಎಂದೆಲ್ಲ ಹೇಳಿಕೊಳ್ಳಲೂ
ನನಗೆ ನಾಚಿಕೆಯಾಗುತ್ತದೆ.

ಸತ್ಯ ನನ್ನೊಂದಿಗೆ
ಎಷ್ಟು ಒಂದಾಗಿದೆಯೆಂದರೆ
ನನ್ನನ್ನು
ಗಂಡು, ಹೆಣ್ಣು, ಪ್ರವಾದಿ
ಅಥವಾ ಪವಿತ್ರ ಆತ್ಮ ಎಂದುಕೊಳ್ಳಲೂ
ಭಯವಾಗುತ್ತದೆ.

ಪ್ರೇಮ ನನ್ನನ್ನು
ಎಷ್ಟು ಅಲುಗಾಡಿಸಿದೆಯೆಂದರೆ
ತಾನೇ ಬೆಂಕಿಯಲ್ಲಿ ಹಾರಿ
ನನಗೆ ಗೊತ್ತಿರುವ ಎಲ್ಲ
ಸಿದ್ಧಾಂತಗಳಿಂದ, ವೇಷಗಳಿಂದ
ನನ್ನನು ಮುಕ್ತಗೊಳಿಸಿದೆ.

ಹಾಫಿಜ್
14ನೇ ಶತಮಾನದ ಪರ್ಶಿಯನ್ ಕವಿ

ಚಿದಂಬರ ನರೇಂದ್ರ

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ
ಕವಿ-ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಚಿದಂಬರ ಅನುವಾದಿಸಿರುವ ಕವನ ಸಂಕಲನ. ’ಗಾಳಿಕೆನೆ’ ಅವರ ಸ್ವತಂತ್ರ ಕವಿತೆಗಳ ಸಂಕಲನ


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...