Homeಅಂಕಣಗಳುಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

ಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

- Advertisement -
- Advertisement -
  1. ಗಡಿ

ಛೇ!
ಇದು ಬರೀ ಒಂದು ಗೆರೆ ಕಣೋ
ಯಾರೋ ಸಿಟ್ಟಲ್ಲಿ ಗೀಚಿದ್ದಾರೆ ಅಷ್ಟೆ.
ಬಾ, ಬಾ ಈ ಗೆರೆಯನ್ನೇ
centre line ಮಾಡಿ ಕಬಡ್ಡಿ ಆಡೋಣ.

ನನ್ನ ಏರಿಯಾಗೆ ಬಾ, ಬಂದು
ಒಂದು ಆವಾಜ್ ಹಾಕು.
ನನ್ನ ಮೇಲೆ ಕೈ ಬೀಸು, ಮುಟ್ಟಿ
ಹಿಂದಿರುಗು ನೋಡೋಣ.

ನಾನೂ ಬಿಡೋದಿಲ್ಲ
ನಿನ್ನ ಮೇಲೆ ಬೀಳುತ್ತೇನೆ
ಕಟ್ಟಿಹಾಕುತ್ತೇನೆ ವಾಪಸ್ಸು ಹೋಗದಂತೆ.

ನನ್ನ ಪಾಳಿ ಈಗ,
ನಿನ್ನ ಏರಿಯಾಕ್ಕೆ ನಾನು
ಹು ತು ತೂ ಅನ್ನುತ್ತ ಆಕ್ರಮಣ ಮಾಡಿದಾಗ
ಸಾಧ್ಯವಾದರೆ ನನ್ನ ಹಿಡಿ
ಬಿಡಬೇಡ ವಾಪಸ್ಸು ಗಡಿ ದಾಟಲು.

ಇದು ಬರೀ ಒಂದು ಗೆರೆ ಕಣೋ
ಹಾಗೇ ಇರಲಿ ಬಿಡು
ಯಾರೋ ಸಿಟ್ಟಿನಿಂದ ಗೀಚಿದ್ದಾರೆ
ಅಷ್ಟೇ.

ಗುಲ್ಜಾರ್
ಖ್ಯಾತ ಉರ್ದು ಕವಿ – ಸಿನಿಮಾ ಸಾಹಿತಿ

*****

2. ಕಣ್ಣುಗಳಿಗೆ ವೀಸಾ ಬೇಕಿಲ್ಲ

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.
ಕಣ್ಮುಚ್ಚಿ
ಹಾರಿಬಿಡುತ್ತೇನೆ ಪ್ರತಿದಿನ
ಗಡಿಗಳ ಮಿತಿಯನ್ನು,
ಭೇಟಿಯಾಗಲು
ಮೆಹದೀ ಹಸನ್‌ನನ್ನು!

ಪೆಟ್ಟಾಗಿದೆಯಂತೆ ಅವನ ದನಿಗೇನೋ
ಕುಳಿತುಬಿಟ್ಟಿದೆಯಂತೆ ಗಜಲ್
ಅವನೆದುರು ಮೂಕವಾಗಿ
ತುಟಿ ಕಂಪಿಸುತ್ತ
ಪುಟಗಳ ನಡುವಿನ ಹೂವು
ಒಣಗಿಹೋಗಿದೆಯೆಂದರೆ
ಗೆಳೆಯ ’ಫರಾಜ್’ ಕೂಡ
ಇನ್ನಿಲ್ಲ ಎಂದೇ ಅರ್ಥ.
ಬಹುಶಃ ಇನ್ನು ಕನಸುಗಳಲ್ಲೇ
ನಮ್ಮ ಭೇಟಿ.

ಕಣ್ಮುಚ್ಚಿಕೊಂಡು ದಾಟಿಬಿಡುತ್ತೇನೆ
ಗಡಿಗಳ ಮಿತಿಯನ್ನು ಮೇಲಿಂದ ಮೇಲೆ.

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.

ಗುಲ್ಜಾರ್
ಖ್ಯಾತ ಉರ್ದು ಕವಿ- ಸಿನಿಮಾ ಸಾಹಿತಿ

*****

3. ಕಲಾವಿದನ ಸಂಕಟ

ಹಿಂದುಸ್ತಾನ್ ಜಿಂದಾಬಾದ್
ಪಾಕಿಸ್ತಾನ್ ಜಿಂದಾಬಾದ್
ಎಂದು ಕೂಗುತ್ತ, ಚೀರುತ್ತ ಸಾಗಿರುವ
ಘೋಷಣೆಗಳ ನಡುವೆ
ಬೇಕಾದಷ್ಟು ಪ್ರಶ್ನೆಗಳಿದ್ದವು.

ಯಾವುದನ್ನ ನನ್ನ ದೇಶ ಅಂತ ಹೇಳಲಿ?
ಜನ ಯಾಕೆ ಹೀಗೆ ಒಬ್ಬರಾದ ಮೇಲೊಬ್ಬರು ಸಾಯುತ್ತಿದ್ದಾರೆ?

ಈ ಪ್ರಶ್ನೆಗಳಿಗೆ ಕೆಲವು ನಿರ್ದಿಷ್ಟ ಉತ್ತರಗಳಿವೆ
ಕೆಲವು ಹಿಂದುಸ್ತಾನಿ ಉತ್ತರಗಳು
ಕೆಲವು ಪಾಕಿಸ್ತಾನಿ ಉತ್ತರಗಳು
ಕೆಲವು ಹಿಂದೂ ಉತ್ತರಗಳು
ಕೆಲವು ಮುಸ್ಲಿಂ ಉತ್ತರಗಳು
ಕೆಲವರು ಉತ್ತರಗಳನ್ನ 1857ರ ಪಾಳುಬಿದ್ದ ಇತಿಹಾಸದಲ್ಲಿ ಹುಡುಕಿದರೆ
ಇನ್ನೂ ಕೆಲವರು ಮೊಘಲ್ ಆಡಳಿತದ ಅವಶೇಷಗಳಲ್ಲಿ.

ಎಲ್ಲ ಹಿಂದೆ ಹೋಗಿ ಹುಡುಕುತ್ತಿದ್ದಾರೆ
ಆದರೆ ಇವತ್ತಿನ ಕೊಲೆಗಾರ
ರಕ್ತ ಮತ್ತು ಚೂರಿಗಳಿಂದ ಭವಿಷ್ಯ ಬರೆಯುತ್ತಿದ್ದಾನೆ

ಈ ಸುದ್ದಿ ಹೇಳುತ್ತ ಹೇಳುತ್ತ
ನಾನು ನಿಮ್ಮ ಕಲ್ಲೇಟುಗಳನ್ನ ಬೇಕಾದರೆ ಸಹಿಸಬಲ್ಲೆ
ಆದರೆ ಹಿಂದೂ-ಮುಸ್ಲಿಂ ದಂಗೆಯಲ್ಲಿ
ಯಾರಾದರೂ ನನ್ನ ತಲೆ ಒಡೆದರೆ
ನನ್ನ ರಕ್ತದ ಪ್ರತಿ ಹನಿಯೂ ಕಣ್ಣೀರಿನಲ್ಲಿ ಕೈ ತೊಳೆಯುತ್ತದೆ.

ನಾನೊಬ್ಬ ಕಲಾವಿದ
ನನಗೆ ದುಷ್ಟ ಗಾಯಗಳು ಮತ್ತು
ಕೊಳಕು ಕಲೆಗಳು ಇಷ್ಟವಿಲ್ಲ.

ಸಾದತ್ ಹಸನ್ ಮಂಟೋ
ಉರ್ದುವಿನಲ್ಲಿ ಬರೆಯುತ್ತಿದ್ದ ಖ್ಯಾತ ಕಥೆಗಾರ

*****

4. ಪ್ರೇಮದ ಪಾತ್ರ

ನಮ್ಮ ಈ ದೇಶದಲ್ಲಿ
ಎಷ್ಟೋ ಶತಮಾನಗಳ ನಂತರ
ನಮಗೆ ಸಾಧ್ಯವಾಗಿದೆ ಉಸಿರಾಡಲು,
ಎಷ್ಟೋ ದಶಕಗಳಾದ ಮೇಲೆ
ಅವಕಾಶ ದೊರೆತಿದೆ ಪ್ರೇಮಿಸಲು,
ಎಷ್ಟೋ ಸಮಯವಾದ ಮೇಲೆ
ಶುರು ಮಾಡಿದ್ದೇವೆ ಓದಲು, ಬರೆಯಲು.

ಈಗ ನಾವು ರೂಪಿಸಬೇಕಾಗಿದೆ
ನಮ್ಮ ಪ್ರೇಮ ಪದ್ಯಗಳಲ್ಲಿ
ಬಂಡಾಯದ ರೂಪಕಗಳನ್ನು

ಪ್ರೇಮ ತಾನೇ ಸ್ವತಃ
ಎದ್ದು ನಿಂತು ವಹಿಸಬೇಕಾಗಿದೆ
ಬಂಡಾಯದ ಪಾತ್ರ.

ಯೋಗೇಶ ಮೈತ್ರೇಯ
ಮರಾಠಿ ಯುವ ಕವಿ ಮತ್ತು ವಿಮರ್ಶಕ

*****

5. ಶಿಕ್ಷೆಯ ಅಗತ್ಯವಿಲ್ಲ

ಇನ್ನೊಬ್ಬರಿಂದ
ನಿಮಗೆ ನೋವಾಗುತ್ತಿದೆಯೆಂದರೆ
ಆ ಇನ್ನೊಬ್ಬರು ತಮ್ಮೊಳಗೆ
ಅನುಭವಿಸುತ್ತಿದ್ದಾರೆ ಆಳವಾದ ಸಂಕಟ,
ಮತ್ತು ಉಕ್ಕಿ ಹರಿಯುತ್ತಿದೆ.
ಅವರ ಈ ನೋವು

ನಿಮ್ಮ ಶಿಕ್ಷೆಯ ಅಗತ್ಯವಿಲ್ಲ ಅವರಿಗೆ
ಬೇಕಾಗಿದೆ ನಿಮ್ಮ ಸಹಾಯ
ಈ ಸಂದೇಶವನ್ನೇ ಅಲ್ಲವೆ
ಅವರು ತಲುಪಿಸಲು ಪ್ರಯತ್ನಿಸುತ್ತಿರುವುದು
ನಿಮಗೆ.

ತಿಚ್ ನ್ಹಾತ್ ಹಾನ್
ಬೌದ್ಧ ಚಿಂತಕ-ಬರಹಗಾರ

*****

6. ಹೃದಯದ ಬಾಗಿಲು

ಯಾರನ್ನ ವೈರಿ ಎಂದು ಗುರುತಿಸಲಿ?
ವೈರಿ ಎಂದಮೇಲೆ ಕೈ ಕೈ ಮಿಲಾಯಿಸಲು ತಕ್ಕವನಾಗಿರಬೇಕು.
ಸೂರ್ಯನ ದಿಕ್ಕಿಗೆ ಹೊರಳಿ ಒಂದೇ ಸವನೇ ನಡೆಯುತ್ತಿದ್ದೇನೆ.
ಈಗ ಪ್ರಶ್ನೆ ಕೇಳುತ್ತಿರುವುದು ಹೃದಯ,
ಉದ್ರಿಕ್ತ ಮನಸ್ಸಲ್ಲ.
ಹೃದಯ ಮತ್ತು ಸೂರ್ಯನ ಅಮ್ಮಂದಿರು
ಖಾಸಾ ಅಕ್ಕ ತಂಗಿಯರು.
ಹೃದಯಕ್ಕೆ ನೋಡುವುದೂ ಗೊತ್ತು
ನೋಡಿದ್ದಕ್ಕೆ ಅರ್ಥ ಹಚ್ಚುವುದೂ ಗೊತ್ತು.
ಹೃದಯ,
ಕಟಕಟ ಎನ್ನುತ್ತಿರುವ ಹಲ್ಲುಗಳ ಸಿಟ್ಟಿನ ಕಥೆಯನ್ನು
ಎಷ್ಟು ಸೂಕ್ಷ್ಮವಾಗಿ
ಅರ್ಥಮಾಡಿಕೊಳ್ಳುತ್ತದೆಯೋ
ಅಷ್ಟೇ ಸೂಕ್ಷ್ಮವಾಗಿ
ಮನದಲ್ಲಿಯೇ ಅಂದುಕೊಂಡ ಹಾರೈಕೆಯನ್ನೂ ಕೇಳಿಸಿಕೊಳ್ಳಬಲ್ಲದು.

ಮನಸ್ಸಿನ ಬಾಗಿಲು
ಹೃದಯದ ಮೂಲಕವೇ ತೆರೆದುಕೊಳ್ಳಬೇಕು,
ಯಾವ ವೈರಿ ಒಳಗೆ ನುಗ್ಗಿದರೂ
ಗೆಳೆಯನಾಗುವ ಅಪಾಯವನ್ನು ದಾಟಿಯೇ
ಮುಂದೆ ಹೋಗಬೇಕು.

ಜಾಯ್ ಹಾಜೊ
ಅಮೆರಿಕನ್ ಕವಿ-ಸಂಗೀತಕಾರ್ತಿ

*****

7. ಭಗವಂತನ ಪವಿತ್ರ ಯೋಜನೆ

ಈ ಜಗತ್ತಿನಲ್ಲಿ
ಒಬ್ಬರು, ಇನ್ನೊಬ್ಬರ ಹಾಗಿಲ್ಲ.
ಒಂದು ಹೃದಯದ ಹಾಗೆ
ಇನ್ನೊಂದು ಹೃದಯ ಮಿಡಿಯುವುದಿಲ್ಲ.
ಎಲ್ಲ ಭಗವಂತನ ಕಲ್ಪನೆ
ಸಮಸ್ತವೂ ವಿಭಿನ್ನ,
ಪ್ರತಿಯೊಂದೂ ಅನನ್ಯ.

ಎಲ್ಲವನ್ನೂ ಒಂದೇ ಎರಕಕ್ಕೆ ಹಾಕಿ
ಸೃಷ್ಟಿಮಾಡುವ ಹುಕಿ
ಭಗವಂತನದ್ದಾಗಿದ್ದರೆ
ಆತ ಹಾಗೆ ಮಾಡಬಹುದಾಗಿತ್ತು
ಮಾಡುತ್ತಿದ್ದ ಕೂಡ.
ಆದರೆ ಪರಿಸ್ಥಿತಿ ಹಾಗಿಲ್ಲವಲ್ಲ.

ನಮ್ಮ ನಡುವಿನ ವ್ಯತ್ಯಾಸವನ್ನು
ಅವಮಾನಿಸುವುದು
ನಮ್ಮ ಅಭಿಪ್ರಾಯಗಳನ್ನು, ಆಶಯಗಳನ್ನು
ಇನ್ನೊಬ್ಬರ ಮೇಲೆ ಹೇರುವುದು,

ಭಗವಂತನ ಪವಿತ್ರ ಯೋಜನೆಯನ್ನು
ಅವಮಾನಿಸಿದಂತೆ

ಶಮ್ಸ್ ತಬ್ರೀಝೀ
12 ನೇ ಶತಮಾನದ ಪರ್ಶಿಯನ್ ಕವಿ

*****

8. ಭಗವಂತನಿಂದ

ನಾನು ಎಷ್ಟೆಲ್ಲಾ ಕಲಿತಿದ್ದೇನೆಂದರೆ
ನಾನೊಬ್ಬ
ಕ್ರಿಶ್ಚಿಯನ್, ಮುಸ್ಲಿಂ, ಹಿಂದೂ, ಬೌದ್ಧ
ಎಂದೆಲ್ಲ ಹೇಳಿಕೊಳ್ಳಲೂ
ನನಗೆ ನಾಚಿಕೆಯಾಗುತ್ತದೆ.

ಸತ್ಯ ನನ್ನೊಂದಿಗೆ
ಎಷ್ಟು ಒಂದಾಗಿದೆಯೆಂದರೆ
ನನ್ನನ್ನು
ಗಂಡು, ಹೆಣ್ಣು, ಪ್ರವಾದಿ
ಅಥವಾ ಪವಿತ್ರ ಆತ್ಮ ಎಂದುಕೊಳ್ಳಲೂ
ಭಯವಾಗುತ್ತದೆ.

ಪ್ರೇಮ ನನ್ನನ್ನು
ಎಷ್ಟು ಅಲುಗಾಡಿಸಿದೆಯೆಂದರೆ
ತಾನೇ ಬೆಂಕಿಯಲ್ಲಿ ಹಾರಿ
ನನಗೆ ಗೊತ್ತಿರುವ ಎಲ್ಲ
ಸಿದ್ಧಾಂತಗಳಿಂದ, ವೇಷಗಳಿಂದ
ನನ್ನನು ಮುಕ್ತಗೊಳಿಸಿದೆ.

ಹಾಫಿಜ್
14ನೇ ಶತಮಾನದ ಪರ್ಶಿಯನ್ ಕವಿ

ಚಿದಂಬರ ನರೇಂದ್ರ

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ
ಕವಿ-ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಚಿದಂಬರ ಅನುವಾದಿಸಿರುವ ಕವನ ಸಂಕಲನ. ’ಗಾಳಿಕೆನೆ’ ಅವರ ಸ್ವತಂತ್ರ ಕವಿತೆಗಳ ಸಂಕಲನ


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...