Homeಅಂಕಣಗಳುಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

ಪ್ರೀತಿ-ಸಾಮರಸ್ಯ ನುಡಿಯುವ 8 ಅನುವಾದಿತ ಕವನಗಳು

- Advertisement -
- Advertisement -
  1. ಗಡಿ

ಛೇ!
ಇದು ಬರೀ ಒಂದು ಗೆರೆ ಕಣೋ
ಯಾರೋ ಸಿಟ್ಟಲ್ಲಿ ಗೀಚಿದ್ದಾರೆ ಅಷ್ಟೆ.
ಬಾ, ಬಾ ಈ ಗೆರೆಯನ್ನೇ
centre line ಮಾಡಿ ಕಬಡ್ಡಿ ಆಡೋಣ.

ನನ್ನ ಏರಿಯಾಗೆ ಬಾ, ಬಂದು
ಒಂದು ಆವಾಜ್ ಹಾಕು.
ನನ್ನ ಮೇಲೆ ಕೈ ಬೀಸು, ಮುಟ್ಟಿ
ಹಿಂದಿರುಗು ನೋಡೋಣ.

ನಾನೂ ಬಿಡೋದಿಲ್ಲ
ನಿನ್ನ ಮೇಲೆ ಬೀಳುತ್ತೇನೆ
ಕಟ್ಟಿಹಾಕುತ್ತೇನೆ ವಾಪಸ್ಸು ಹೋಗದಂತೆ.

ನನ್ನ ಪಾಳಿ ಈಗ,
ನಿನ್ನ ಏರಿಯಾಕ್ಕೆ ನಾನು
ಹು ತು ತೂ ಅನ್ನುತ್ತ ಆಕ್ರಮಣ ಮಾಡಿದಾಗ
ಸಾಧ್ಯವಾದರೆ ನನ್ನ ಹಿಡಿ
ಬಿಡಬೇಡ ವಾಪಸ್ಸು ಗಡಿ ದಾಟಲು.

ಇದು ಬರೀ ಒಂದು ಗೆರೆ ಕಣೋ
ಹಾಗೇ ಇರಲಿ ಬಿಡು
ಯಾರೋ ಸಿಟ್ಟಿನಿಂದ ಗೀಚಿದ್ದಾರೆ
ಅಷ್ಟೇ.

ಗುಲ್ಜಾರ್
ಖ್ಯಾತ ಉರ್ದು ಕವಿ – ಸಿನಿಮಾ ಸಾಹಿತಿ

*****

2. ಕಣ್ಣುಗಳಿಗೆ ವೀಸಾ ಬೇಕಿಲ್ಲ

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.
ಕಣ್ಮುಚ್ಚಿ
ಹಾರಿಬಿಡುತ್ತೇನೆ ಪ್ರತಿದಿನ
ಗಡಿಗಳ ಮಿತಿಯನ್ನು,
ಭೇಟಿಯಾಗಲು
ಮೆಹದೀ ಹಸನ್‌ನನ್ನು!

ಪೆಟ್ಟಾಗಿದೆಯಂತೆ ಅವನ ದನಿಗೇನೋ
ಕುಳಿತುಬಿಟ್ಟಿದೆಯಂತೆ ಗಜಲ್
ಅವನೆದುರು ಮೂಕವಾಗಿ
ತುಟಿ ಕಂಪಿಸುತ್ತ
ಪುಟಗಳ ನಡುವಿನ ಹೂವು
ಒಣಗಿಹೋಗಿದೆಯೆಂದರೆ
ಗೆಳೆಯ ’ಫರಾಜ್’ ಕೂಡ
ಇನ್ನಿಲ್ಲ ಎಂದೇ ಅರ್ಥ.
ಬಹುಶಃ ಇನ್ನು ಕನಸುಗಳಲ್ಲೇ
ನಮ್ಮ ಭೇಟಿ.

ಕಣ್ಮುಚ್ಚಿಕೊಂಡು ದಾಟಿಬಿಡುತ್ತೇನೆ
ಗಡಿಗಳ ಮಿತಿಯನ್ನು ಮೇಲಿಂದ ಮೇಲೆ.

ಕಣ್ಣುಗಳಿಗೆ ವೀಸಾ ಬೇಕಿಲ್ಲ
ಕನಸುಗಳಿಗೆ ಗಡಿಗಳ ಭಿಡೆಯಿಲ್ಲ.

ಗುಲ್ಜಾರ್
ಖ್ಯಾತ ಉರ್ದು ಕವಿ- ಸಿನಿಮಾ ಸಾಹಿತಿ

*****

3. ಕಲಾವಿದನ ಸಂಕಟ

ಹಿಂದುಸ್ತಾನ್ ಜಿಂದಾಬಾದ್
ಪಾಕಿಸ್ತಾನ್ ಜಿಂದಾಬಾದ್
ಎಂದು ಕೂಗುತ್ತ, ಚೀರುತ್ತ ಸಾಗಿರುವ
ಘೋಷಣೆಗಳ ನಡುವೆ
ಬೇಕಾದಷ್ಟು ಪ್ರಶ್ನೆಗಳಿದ್ದವು.

ಯಾವುದನ್ನ ನನ್ನ ದೇಶ ಅಂತ ಹೇಳಲಿ?
ಜನ ಯಾಕೆ ಹೀಗೆ ಒಬ್ಬರಾದ ಮೇಲೊಬ್ಬರು ಸಾಯುತ್ತಿದ್ದಾರೆ?

ಈ ಪ್ರಶ್ನೆಗಳಿಗೆ ಕೆಲವು ನಿರ್ದಿಷ್ಟ ಉತ್ತರಗಳಿವೆ
ಕೆಲವು ಹಿಂದುಸ್ತಾನಿ ಉತ್ತರಗಳು
ಕೆಲವು ಪಾಕಿಸ್ತಾನಿ ಉತ್ತರಗಳು
ಕೆಲವು ಹಿಂದೂ ಉತ್ತರಗಳು
ಕೆಲವು ಮುಸ್ಲಿಂ ಉತ್ತರಗಳು
ಕೆಲವರು ಉತ್ತರಗಳನ್ನ 1857ರ ಪಾಳುಬಿದ್ದ ಇತಿಹಾಸದಲ್ಲಿ ಹುಡುಕಿದರೆ
ಇನ್ನೂ ಕೆಲವರು ಮೊಘಲ್ ಆಡಳಿತದ ಅವಶೇಷಗಳಲ್ಲಿ.

ಎಲ್ಲ ಹಿಂದೆ ಹೋಗಿ ಹುಡುಕುತ್ತಿದ್ದಾರೆ
ಆದರೆ ಇವತ್ತಿನ ಕೊಲೆಗಾರ
ರಕ್ತ ಮತ್ತು ಚೂರಿಗಳಿಂದ ಭವಿಷ್ಯ ಬರೆಯುತ್ತಿದ್ದಾನೆ

ಈ ಸುದ್ದಿ ಹೇಳುತ್ತ ಹೇಳುತ್ತ
ನಾನು ನಿಮ್ಮ ಕಲ್ಲೇಟುಗಳನ್ನ ಬೇಕಾದರೆ ಸಹಿಸಬಲ್ಲೆ
ಆದರೆ ಹಿಂದೂ-ಮುಸ್ಲಿಂ ದಂಗೆಯಲ್ಲಿ
ಯಾರಾದರೂ ನನ್ನ ತಲೆ ಒಡೆದರೆ
ನನ್ನ ರಕ್ತದ ಪ್ರತಿ ಹನಿಯೂ ಕಣ್ಣೀರಿನಲ್ಲಿ ಕೈ ತೊಳೆಯುತ್ತದೆ.

ನಾನೊಬ್ಬ ಕಲಾವಿದ
ನನಗೆ ದುಷ್ಟ ಗಾಯಗಳು ಮತ್ತು
ಕೊಳಕು ಕಲೆಗಳು ಇಷ್ಟವಿಲ್ಲ.

ಸಾದತ್ ಹಸನ್ ಮಂಟೋ
ಉರ್ದುವಿನಲ್ಲಿ ಬರೆಯುತ್ತಿದ್ದ ಖ್ಯಾತ ಕಥೆಗಾರ

*****

4. ಪ್ರೇಮದ ಪಾತ್ರ

ನಮ್ಮ ಈ ದೇಶದಲ್ಲಿ
ಎಷ್ಟೋ ಶತಮಾನಗಳ ನಂತರ
ನಮಗೆ ಸಾಧ್ಯವಾಗಿದೆ ಉಸಿರಾಡಲು,
ಎಷ್ಟೋ ದಶಕಗಳಾದ ಮೇಲೆ
ಅವಕಾಶ ದೊರೆತಿದೆ ಪ್ರೇಮಿಸಲು,
ಎಷ್ಟೋ ಸಮಯವಾದ ಮೇಲೆ
ಶುರು ಮಾಡಿದ್ದೇವೆ ಓದಲು, ಬರೆಯಲು.

ಈಗ ನಾವು ರೂಪಿಸಬೇಕಾಗಿದೆ
ನಮ್ಮ ಪ್ರೇಮ ಪದ್ಯಗಳಲ್ಲಿ
ಬಂಡಾಯದ ರೂಪಕಗಳನ್ನು

ಪ್ರೇಮ ತಾನೇ ಸ್ವತಃ
ಎದ್ದು ನಿಂತು ವಹಿಸಬೇಕಾಗಿದೆ
ಬಂಡಾಯದ ಪಾತ್ರ.

ಯೋಗೇಶ ಮೈತ್ರೇಯ
ಮರಾಠಿ ಯುವ ಕವಿ ಮತ್ತು ವಿಮರ್ಶಕ

*****

5. ಶಿಕ್ಷೆಯ ಅಗತ್ಯವಿಲ್ಲ

ಇನ್ನೊಬ್ಬರಿಂದ
ನಿಮಗೆ ನೋವಾಗುತ್ತಿದೆಯೆಂದರೆ
ಆ ಇನ್ನೊಬ್ಬರು ತಮ್ಮೊಳಗೆ
ಅನುಭವಿಸುತ್ತಿದ್ದಾರೆ ಆಳವಾದ ಸಂಕಟ,
ಮತ್ತು ಉಕ್ಕಿ ಹರಿಯುತ್ತಿದೆ.
ಅವರ ಈ ನೋವು

ನಿಮ್ಮ ಶಿಕ್ಷೆಯ ಅಗತ್ಯವಿಲ್ಲ ಅವರಿಗೆ
ಬೇಕಾಗಿದೆ ನಿಮ್ಮ ಸಹಾಯ
ಈ ಸಂದೇಶವನ್ನೇ ಅಲ್ಲವೆ
ಅವರು ತಲುಪಿಸಲು ಪ್ರಯತ್ನಿಸುತ್ತಿರುವುದು
ನಿಮಗೆ.

ತಿಚ್ ನ್ಹಾತ್ ಹಾನ್
ಬೌದ್ಧ ಚಿಂತಕ-ಬರಹಗಾರ

*****

6. ಹೃದಯದ ಬಾಗಿಲು

ಯಾರನ್ನ ವೈರಿ ಎಂದು ಗುರುತಿಸಲಿ?
ವೈರಿ ಎಂದಮೇಲೆ ಕೈ ಕೈ ಮಿಲಾಯಿಸಲು ತಕ್ಕವನಾಗಿರಬೇಕು.
ಸೂರ್ಯನ ದಿಕ್ಕಿಗೆ ಹೊರಳಿ ಒಂದೇ ಸವನೇ ನಡೆಯುತ್ತಿದ್ದೇನೆ.
ಈಗ ಪ್ರಶ್ನೆ ಕೇಳುತ್ತಿರುವುದು ಹೃದಯ,
ಉದ್ರಿಕ್ತ ಮನಸ್ಸಲ್ಲ.
ಹೃದಯ ಮತ್ತು ಸೂರ್ಯನ ಅಮ್ಮಂದಿರು
ಖಾಸಾ ಅಕ್ಕ ತಂಗಿಯರು.
ಹೃದಯಕ್ಕೆ ನೋಡುವುದೂ ಗೊತ್ತು
ನೋಡಿದ್ದಕ್ಕೆ ಅರ್ಥ ಹಚ್ಚುವುದೂ ಗೊತ್ತು.
ಹೃದಯ,
ಕಟಕಟ ಎನ್ನುತ್ತಿರುವ ಹಲ್ಲುಗಳ ಸಿಟ್ಟಿನ ಕಥೆಯನ್ನು
ಎಷ್ಟು ಸೂಕ್ಷ್ಮವಾಗಿ
ಅರ್ಥಮಾಡಿಕೊಳ್ಳುತ್ತದೆಯೋ
ಅಷ್ಟೇ ಸೂಕ್ಷ್ಮವಾಗಿ
ಮನದಲ್ಲಿಯೇ ಅಂದುಕೊಂಡ ಹಾರೈಕೆಯನ್ನೂ ಕೇಳಿಸಿಕೊಳ್ಳಬಲ್ಲದು.

ಮನಸ್ಸಿನ ಬಾಗಿಲು
ಹೃದಯದ ಮೂಲಕವೇ ತೆರೆದುಕೊಳ್ಳಬೇಕು,
ಯಾವ ವೈರಿ ಒಳಗೆ ನುಗ್ಗಿದರೂ
ಗೆಳೆಯನಾಗುವ ಅಪಾಯವನ್ನು ದಾಟಿಯೇ
ಮುಂದೆ ಹೋಗಬೇಕು.

ಜಾಯ್ ಹಾಜೊ
ಅಮೆರಿಕನ್ ಕವಿ-ಸಂಗೀತಕಾರ್ತಿ

*****

7. ಭಗವಂತನ ಪವಿತ್ರ ಯೋಜನೆ

ಈ ಜಗತ್ತಿನಲ್ಲಿ
ಒಬ್ಬರು, ಇನ್ನೊಬ್ಬರ ಹಾಗಿಲ್ಲ.
ಒಂದು ಹೃದಯದ ಹಾಗೆ
ಇನ್ನೊಂದು ಹೃದಯ ಮಿಡಿಯುವುದಿಲ್ಲ.
ಎಲ್ಲ ಭಗವಂತನ ಕಲ್ಪನೆ
ಸಮಸ್ತವೂ ವಿಭಿನ್ನ,
ಪ್ರತಿಯೊಂದೂ ಅನನ್ಯ.

ಎಲ್ಲವನ್ನೂ ಒಂದೇ ಎರಕಕ್ಕೆ ಹಾಕಿ
ಸೃಷ್ಟಿಮಾಡುವ ಹುಕಿ
ಭಗವಂತನದ್ದಾಗಿದ್ದರೆ
ಆತ ಹಾಗೆ ಮಾಡಬಹುದಾಗಿತ್ತು
ಮಾಡುತ್ತಿದ್ದ ಕೂಡ.
ಆದರೆ ಪರಿಸ್ಥಿತಿ ಹಾಗಿಲ್ಲವಲ್ಲ.

ನಮ್ಮ ನಡುವಿನ ವ್ಯತ್ಯಾಸವನ್ನು
ಅವಮಾನಿಸುವುದು
ನಮ್ಮ ಅಭಿಪ್ರಾಯಗಳನ್ನು, ಆಶಯಗಳನ್ನು
ಇನ್ನೊಬ್ಬರ ಮೇಲೆ ಹೇರುವುದು,

ಭಗವಂತನ ಪವಿತ್ರ ಯೋಜನೆಯನ್ನು
ಅವಮಾನಿಸಿದಂತೆ

ಶಮ್ಸ್ ತಬ್ರೀಝೀ
12 ನೇ ಶತಮಾನದ ಪರ್ಶಿಯನ್ ಕವಿ

*****

8. ಭಗವಂತನಿಂದ

ನಾನು ಎಷ್ಟೆಲ್ಲಾ ಕಲಿತಿದ್ದೇನೆಂದರೆ
ನಾನೊಬ್ಬ
ಕ್ರಿಶ್ಚಿಯನ್, ಮುಸ್ಲಿಂ, ಹಿಂದೂ, ಬೌದ್ಧ
ಎಂದೆಲ್ಲ ಹೇಳಿಕೊಳ್ಳಲೂ
ನನಗೆ ನಾಚಿಕೆಯಾಗುತ್ತದೆ.

ಸತ್ಯ ನನ್ನೊಂದಿಗೆ
ಎಷ್ಟು ಒಂದಾಗಿದೆಯೆಂದರೆ
ನನ್ನನ್ನು
ಗಂಡು, ಹೆಣ್ಣು, ಪ್ರವಾದಿ
ಅಥವಾ ಪವಿತ್ರ ಆತ್ಮ ಎಂದುಕೊಳ್ಳಲೂ
ಭಯವಾಗುತ್ತದೆ.

ಪ್ರೇಮ ನನ್ನನ್ನು
ಎಷ್ಟು ಅಲುಗಾಡಿಸಿದೆಯೆಂದರೆ
ತಾನೇ ಬೆಂಕಿಯಲ್ಲಿ ಹಾರಿ
ನನಗೆ ಗೊತ್ತಿರುವ ಎಲ್ಲ
ಸಿದ್ಧಾಂತಗಳಿಂದ, ವೇಷಗಳಿಂದ
ನನ್ನನು ಮುಕ್ತಗೊಳಿಸಿದೆ.

ಹಾಫಿಜ್
14ನೇ ಶತಮಾನದ ಪರ್ಶಿಯನ್ ಕವಿ

ಚಿದಂಬರ ನರೇಂದ್ರ

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ
ಕವಿ-ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’ ಚಿದಂಬರ ಅನುವಾದಿಸಿರುವ ಕವನ ಸಂಕಲನ. ’ಗಾಳಿಕೆನೆ’ ಅವರ ಸ್ವತಂತ್ರ ಕವಿತೆಗಳ ಸಂಕಲನ


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...